Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...