Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...