Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...