Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...