Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...