Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...