Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...