Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...