Homeದಲಿತ್ ಫೈಲ್ಸ್ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ...

ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ ಆರೋಪ

- Advertisement -
- Advertisement -

ಎಐ ರಚಿತ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯುವಕನೊಬ್ಬನಿಗೆ, ಇನ್ನೊಬ್ಬ ವ್ಯಕ್ತಿಯ ಪಾದಗಳನ್ನು ತೊಳೆಯುವಂತೆ ಮತ್ತು ಬ್ರಾಹ್ಮಣ ಸಮುದಾಯದವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪದ ಕುರಿತು ಮಧ್ಯಪ್ರದೇಶದ ದಾಮೋಹ್ ಜಿಲ್ಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸತಾರಿಯಾ ಗ್ರಾಮದ ನಿವಾಸಿ ಪುರುಷೋತ್ತಮ ಕುಶ್ವಾಹ ಎಂಬಾತ, ತನ್ನ ಗ್ರಾಮದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅನುಜ್ ಪಾಂಡೆ ಎಂಬ ವ್ಯಕ್ತಿ ಶೂಗಳ ಹಾರವನ್ನು ಧರಿಸಿರುವ ಎಐ ರಚಿತ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಅಲ್ಲದೆ, ಅನುಜ್ ಪಾಂಡೆ ಮದ್ಯ ಮಾರಾಟ ನಿಷೇಧಿಸಿರುವ ಗ್ರಾಮದ ಸಾಮೂಹಿಕ ನಿರ್ಧಾರವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು ಎನ್ನಲಾಗಿದೆ.

ಕುಶ್ವಾಹ 15 ನಿಮಿಷಗಳಲ್ಲಿ ತಾನು ಹಾಕಿದ್ದ ಪೋಸ್ಟ್ ಡಿಲಿಟ್ ಮಾಡಿ ಕ್ಷಮೆಯಾಚಿಸಿದ್ದರು. ಆದರೂ, ಗ್ರಾಮದ ಪ್ರಬಲ ವರ್ಗದ ಜನರು ಆತನ ಮೇಲೆ ಆಕ್ರೋಶಗೊಂಡಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕುಶ್ವಾಹ, ಪ್ರಬಲ ಜಾತಿಯ ಪಾಂಡೆಯ ಪಾದಗಳನ್ನು ತೊಳೆಯುತ್ತಿರುವುದು ಮತ್ತು “ನಾನು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆಯಾಚಿಸುತ್ತಿದ್ದೇನೆ. ಇಂತಹ ತಪ್ಪು ಮತ್ತೆ ಸಂಭವಿಸುವುದಿಲ್ಲ. ನಾವು ಬ್ರಾಹ್ಮಣರನ್ನು ಹೀಗೆಯೇ ಪೂಜಿಸುತ್ತಲೇ ಇರುತ್ತೇವೆ” ಎಂದು ಹೇಳಿರುವುದನ್ನು ನೋಡಬಹುದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ವೈರಲ್ ಆಗಿರುವ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ. ಗ್ರಾಮದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು, ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸ್ ತಂಡಗಳು ಗ್ರಾಮದಲ್ಲಿ ನಿರಂತರವಾಗಿ ಗಸ್ತು ತಿರುಗುತ್ತಿವೆ ಎಂದು ತಿವಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಶಾಂತಿ ಕಾಪಾಡಲು ಹಿರಿಯ ಅಧಿಕಾರಿಗಳು ಮತ್ತು ಗ್ರಾಮದ ಪ್ರಮುಖರ ನಡುವೆ ಮಾತುಕತೆ ನಡೆಸಲಾಗಿದೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪಟೇರಾ ಪೊಲೀಸ್ ಠಾಣೆಯ ಉಸ್ತುವಾರಿಗೆ ಸೂಚಿಸಲಾಗಿದೆ. ಜಾತಿ ದೌರ್ಜನ್ಯದ ಕುರಿತು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಸತಾರಿಯಾ ಗ್ರಾಮದಲ್ಲಿ ಮದ್ಯ ನಿಷೇಧವನ್ನು ಜನರೇ ಕಟ್ಟು ನಿಟ್ಟಾಗಿ ಜಾರಿಗೆ ತಂದಿದ್ದಾರೆ. ಇದನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದ ಆರೋಪ ಅನುಜ್ ಪಾಂಡೆ ವಿರುದ್ದ ಕೇಳಿ ಬಂದಿತ್ತು. ಈ ಕಾರಣಕ್ಕೆ ಆತನಿಗೆ ಗ್ರಾಮದಾದ್ಯಂತ ತಿರುಗಾಡಿ ಕ್ಷಮೆ ಯಾಚಿಸುವಂತೆ ಮತ್ತು 2,100 ರೂ. ದಂಡ ಪಾವತಿಸಲು ಸೂಚಿಸಲಾಗಿತ್ತು. ಈ ಕುರಿತ ಎಐ ರಚಿತ ಚಿತ್ರವನ್ನು ಪುರುಷೋತ್ತಮ ಖುಶ್ವಾಹ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಖುಶ್ವಾಹ ಅವರ ಪೋಸ್ಟ್ ನೋಡಿ ಪಾಂಡೆ ಮತ್ತು ಆತನ ಸಮುದಾಯದವರು ಆಕ್ರೋಶಗೊಂಡಿದ್ದರು. ಪಾಂಡೆ ಖುಶ್ವಾಹ ಮತ್ತು ಆತನ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ.

ಇದು ಬಳಿಕ ಜಾತಿ ಸಂಘರ್ಷಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಹಳ್ಳಿಗಳ ಬ್ರಾಹ್ಮಣರು ಒಟ್ಟುಗೂಡಿ, ಖುಶ್ವಾಹ ಹಾಕಿರುವ ಪೋಸ್ಟ್, ಕೇವಲ ಅನುಜ್ ಪಾಂಡೆಗೆ ಮಾಡಿದ ಅವಮಾನವಲ್ಲ, ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅವಮಾನ ಎಂದು ತೀರ್ಮಾನಿಸಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಮಾತನಾಡಿರುವ ಪಾಂಡೆ, “ನಾವು ಖುಶ್ವಾಹಗೆ ಜಾತಿ ದೌರ್ಜನ್ಯ ಎಸಗಿಲ್ಲ. ಆತನದ್ದು ಮತ್ತು ನನ್ನದು ಗುರು ಶಿಷ್ಯರ ರೀತಿಯ ಸಂಬಂಧ. ಆತ ಮಾಡಿದ ತಪ್ಪಿಗೆ ನನ್ನ ಪಾದ ತೊಳೆದು ಕ್ಷಮೆ ಯಾಚಿಸಿದ್ದಾನೆ ಎಂದಿದ್ದಾರೆ.

ಪ್ರತೀಕಾರದ ಭಯದಿಂದಾಗಿ ಕುಶ್ವಾಹ ಮತ್ತು ಅವರ ಕುಟುಂಬವು ಈ ವಿಷಯದ ಬಗ್ಗೆ ಮಾತನಾಡಲು ಅಥವಾ ಔಪಚಾರಿಕ ದೂರು ದಾಖಲಿಸಲು ಹಿಂಜರಿಯುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...