Homeದಲಿತ್ ಫೈಲ್ಸ್ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ...

ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ ಆರೋಪ

- Advertisement -
- Advertisement -

ಎಐ ರಚಿತ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯುವಕನೊಬ್ಬನಿಗೆ, ಇನ್ನೊಬ್ಬ ವ್ಯಕ್ತಿಯ ಪಾದಗಳನ್ನು ತೊಳೆಯುವಂತೆ ಮತ್ತು ಬ್ರಾಹ್ಮಣ ಸಮುದಾಯದವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪದ ಕುರಿತು ಮಧ್ಯಪ್ರದೇಶದ ದಾಮೋಹ್ ಜಿಲ್ಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸತಾರಿಯಾ ಗ್ರಾಮದ ನಿವಾಸಿ ಪುರುಷೋತ್ತಮ ಕುಶ್ವಾಹ ಎಂಬಾತ, ತನ್ನ ಗ್ರಾಮದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅನುಜ್ ಪಾಂಡೆ ಎಂಬ ವ್ಯಕ್ತಿ ಶೂಗಳ ಹಾರವನ್ನು ಧರಿಸಿರುವ ಎಐ ರಚಿತ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಅಲ್ಲದೆ, ಅನುಜ್ ಪಾಂಡೆ ಮದ್ಯ ಮಾರಾಟ ನಿಷೇಧಿಸಿರುವ ಗ್ರಾಮದ ಸಾಮೂಹಿಕ ನಿರ್ಧಾರವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು ಎನ್ನಲಾಗಿದೆ.

ಕುಶ್ವಾಹ 15 ನಿಮಿಷಗಳಲ್ಲಿ ತಾನು ಹಾಕಿದ್ದ ಪೋಸ್ಟ್ ಡಿಲಿಟ್ ಮಾಡಿ ಕ್ಷಮೆಯಾಚಿಸಿದ್ದರು. ಆದರೂ, ಗ್ರಾಮದ ಪ್ರಬಲ ವರ್ಗದ ಜನರು ಆತನ ಮೇಲೆ ಆಕ್ರೋಶಗೊಂಡಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕುಶ್ವಾಹ, ಪ್ರಬಲ ಜಾತಿಯ ಪಾಂಡೆಯ ಪಾದಗಳನ್ನು ತೊಳೆಯುತ್ತಿರುವುದು ಮತ್ತು “ನಾನು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆಯಾಚಿಸುತ್ತಿದ್ದೇನೆ. ಇಂತಹ ತಪ್ಪು ಮತ್ತೆ ಸಂಭವಿಸುವುದಿಲ್ಲ. ನಾವು ಬ್ರಾಹ್ಮಣರನ್ನು ಹೀಗೆಯೇ ಪೂಜಿಸುತ್ತಲೇ ಇರುತ್ತೇವೆ” ಎಂದು ಹೇಳಿರುವುದನ್ನು ನೋಡಬಹುದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ವೈರಲ್ ಆಗಿರುವ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ. ಗ್ರಾಮದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು, ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸ್ ತಂಡಗಳು ಗ್ರಾಮದಲ್ಲಿ ನಿರಂತರವಾಗಿ ಗಸ್ತು ತಿರುಗುತ್ತಿವೆ ಎಂದು ತಿವಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಶಾಂತಿ ಕಾಪಾಡಲು ಹಿರಿಯ ಅಧಿಕಾರಿಗಳು ಮತ್ತು ಗ್ರಾಮದ ಪ್ರಮುಖರ ನಡುವೆ ಮಾತುಕತೆ ನಡೆಸಲಾಗಿದೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪಟೇರಾ ಪೊಲೀಸ್ ಠಾಣೆಯ ಉಸ್ತುವಾರಿಗೆ ಸೂಚಿಸಲಾಗಿದೆ. ಜಾತಿ ದೌರ್ಜನ್ಯದ ಕುರಿತು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಸತಾರಿಯಾ ಗ್ರಾಮದಲ್ಲಿ ಮದ್ಯ ನಿಷೇಧವನ್ನು ಜನರೇ ಕಟ್ಟು ನಿಟ್ಟಾಗಿ ಜಾರಿಗೆ ತಂದಿದ್ದಾರೆ. ಇದನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದ ಆರೋಪ ಅನುಜ್ ಪಾಂಡೆ ವಿರುದ್ದ ಕೇಳಿ ಬಂದಿತ್ತು. ಈ ಕಾರಣಕ್ಕೆ ಆತನಿಗೆ ಗ್ರಾಮದಾದ್ಯಂತ ತಿರುಗಾಡಿ ಕ್ಷಮೆ ಯಾಚಿಸುವಂತೆ ಮತ್ತು 2,100 ರೂ. ದಂಡ ಪಾವತಿಸಲು ಸೂಚಿಸಲಾಗಿತ್ತು. ಈ ಕುರಿತ ಎಐ ರಚಿತ ಚಿತ್ರವನ್ನು ಪುರುಷೋತ್ತಮ ಖುಶ್ವಾಹ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಖುಶ್ವಾಹ ಅವರ ಪೋಸ್ಟ್ ನೋಡಿ ಪಾಂಡೆ ಮತ್ತು ಆತನ ಸಮುದಾಯದವರು ಆಕ್ರೋಶಗೊಂಡಿದ್ದರು. ಪಾಂಡೆ ಖುಶ್ವಾಹ ಮತ್ತು ಆತನ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ.

ಇದು ಬಳಿಕ ಜಾತಿ ಸಂಘರ್ಷಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಹಳ್ಳಿಗಳ ಬ್ರಾಹ್ಮಣರು ಒಟ್ಟುಗೂಡಿ, ಖುಶ್ವಾಹ ಹಾಕಿರುವ ಪೋಸ್ಟ್, ಕೇವಲ ಅನುಜ್ ಪಾಂಡೆಗೆ ಮಾಡಿದ ಅವಮಾನವಲ್ಲ, ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅವಮಾನ ಎಂದು ತೀರ್ಮಾನಿಸಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಮಾತನಾಡಿರುವ ಪಾಂಡೆ, “ನಾವು ಖುಶ್ವಾಹಗೆ ಜಾತಿ ದೌರ್ಜನ್ಯ ಎಸಗಿಲ್ಲ. ಆತನದ್ದು ಮತ್ತು ನನ್ನದು ಗುರು ಶಿಷ್ಯರ ರೀತಿಯ ಸಂಬಂಧ. ಆತ ಮಾಡಿದ ತಪ್ಪಿಗೆ ನನ್ನ ಪಾದ ತೊಳೆದು ಕ್ಷಮೆ ಯಾಚಿಸಿದ್ದಾನೆ ಎಂದಿದ್ದಾರೆ.

ಪ್ರತೀಕಾರದ ಭಯದಿಂದಾಗಿ ಕುಶ್ವಾಹ ಮತ್ತು ಅವರ ಕುಟುಂಬವು ಈ ವಿಷಯದ ಬಗ್ಗೆ ಮಾತನಾಡಲು ಅಥವಾ ಔಪಚಾರಿಕ ದೂರು ದಾಖಲಿಸಲು ಹಿಂಜರಿಯುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...