Homeಮುಖಪುಟತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

- Advertisement -
- Advertisement -

ತಮಿಳುನಾಡಿನಲ್ಲಿ 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಮುಂದಿನ 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಒಂದಾಗಲು ಹೊರಟಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ, ಅಣ್ಣಾಮಲೈಗೆ ಬಿಜೆಪಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು indianexpress.com ವರದಿ ಮಾಡಿದೆ.

ಮುಂದಿನ ಚುನಾವಣೆಗೆ ಎಐಎಡಿಎಂಕೆ ಮತ್ತು ಬಿಜೆಪಿ ಜಾತಿ ಲೆಕ್ಕಾಚಾರ ಹಾಕಿದೆಯಂತೆ. ಅದರಂತೆ, ಎಐಎಡಿಎಂಕೆ ಮತ್ತು ಬಿಜೆಪಿ ಎರಡೂ ಪಕ್ಷಗಳ ಮುಖ (ಫೇಸ್‌) ಆಗಿ ‘ಗೌಂಡರ್’ ಸಮುದಾಯದವರು  ಮುಂದುವರೆಯುವುದು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿಲ್ಲ. ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಂತೆಯೇ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಕೂಡ ಪ್ರಬಲ ಹಿಂದುಳಿದ ಸಮುದಾಯಕ್ಕೆ ಸೇರಿದವರು ಮತ್ತು ಪಶ್ಚಿಮ ಕೊಂಗು ಪ್ರದೇಶವರು (ಇಲ್ಲಿ ಗೌಂಡರ್‌ಗಳು ಪ್ರಬಲರು).

ಮೈತ್ರಿ ಮಾತುಕತೆಯ ಮೊದಲ ಹೆಜ್ಜೆಯಾಗಿ ಎಐಎಡಿಎಂಕೆಯ ಪಳನಿಸ್ವಾಮಿಯವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ಅಣ್ಣಾಮಲೈ ಕೂಡ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅಣ್ಣಾಮಲೈ ಅವರೇ ಎರಡೂ ಪಕ್ಷಗಳ ನಾಯಕರು ಒಂದೇ ಸಮುದಾಯವರು ಆಗಿರುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹಾಗಾಗಿ, ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ಸಮುದಾಯದ ಒಬ್ಬರನ್ನು ನೇಮಿಸುವ ಯೋಚನೆಯಲ್ಲಿದೆ. ಅಣ್ಣಾಮಲೈಗೆ ರಾಷ್ಟ್ರೀಯ ಬಿಜೆಪಿಯಲ್ಲಿ ಹೈಕಮಾಂಡ್ ಸ್ಥಾನ ಕೊಡುವ ಸಾಧ್ಯತೆ ಇದೆ.

ಒಂದು ವೇಳೆ ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆ, ಆ ಸ್ಥಾನಕ್ಕೆ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ಜಯಲಲಿತಾ ಅವರ ನಾಯಕತ್ವದಡಿಯಲ್ಲಿ ಎಐಎಡಿಎಂಕೆಯಲ್ಲಿದ್ದ ಪ್ರಭಾವಿ ತೇವರ್ ಸಮುದಾಯಕ್ಕೆ ಸೇರಿದ ತಿರುನಲ್ವೇಲಿಯ ಜನಪ್ರಿಯ ನಾಯಕರಾಗಿದ್ದಾರೆ ಈ ನಾಗೇಂದ್ರನ್‌. ಈ ಹಿಂದೆ ಜಯಲಲಿತಾ ಅವರ ಆಪ್ತೆ ವಿ. ಕೆ ಶಶಿಕಲಾ ಮೂಲಕ ಎಐಎಡಿಎಂಕೆ ತೇವರ್ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಂಡಿತ್ತು.

“ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಅವರಿಗೆ ಕೊಡುವ ಶಿಕ್ಷೆಯಲ್ಲ ಅಥವಾ ಹಿಂಬಡ್ತಿಯೂ ಅಲ್ಲ. ಬಿಜೆಪಿ ಪಶ್ಚಿಮ ತಮಿಳುನಾಡಿನ ಆಚೆಗೂ ತನ್ನ ಹಿಡಿತವನ್ನು ಬಲಪಡಿಸಲು ಬಯಸುತ್ತಿದೆ. ನಾಗೇಂದ್ರನ್ ಅವರಂತಹ ತೇವರ್ ಸಮುದಾಯದ ನಾಯಕನಿಗೆ ಪಕ್ಷದ ಚುಕ್ಕಾಣಿ ಕೊಡುವುದರಿಂದ ದಕ್ಷಿಣ ಜಿಲ್ಲೆಗಳು ಮತ್ತು ಅದರಾಚೆಗೆ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸಲು ಸಹಾಯವಾಗುತ್ತದೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ಡಿಎಂಕೆಯ ಭದ್ರಕೋಟೆಯನ್ನು ಬೇಧಿಸಬೇಕಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ indianexpress.com ವರದಿ ತಿಳಿಸಿದೆ.

ಭಾನುವಾರ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಣ್ಣಾಮಲೈ, ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದು, “ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಒಂದು ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನೀವು ಅದನ್ನೇ ಪಕ್ಷದ ಅಂತಿಮ ಅಭಿಪ್ರಾಯವಾಗಿ ತೆಗೆದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್‌ಗೆ ತಮಿಳುನಾಡಿನ ವಿವರವಾದ ರಾಜಕೀಯ ಅಧ್ಯಯನ ನೀಡುವಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಣ್ಣಾಮಲೈ “ಒಬ್ಬ ಕೇಡರ್ ಮತ್ತು ನಾಯಕನಾಗಿ, ನಾನು ಸೂಕ್ಷ್ಮ ವಿಶ್ಲೇಷಣೆಯನ್ನು ಮಾಡಿದ್ದೇನೆ ಮತ್ತು ರಾಜ್ಯ ಘಟಕದ ಪ್ರಸ್ತುತ ಸ್ಥಿತಿ ಮತ್ತು ಅದು ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಪುರಾವೆಗಳೊಂದಿಗೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ವಿವರಿಸಿದ್ದೇನೆ” ಎಂದಿದ್ದಾರೆ.

ತಮಿಳುನಾಡಿನ ಚುನಾವಣಾ ವ್ಯವಸ್ಥೆಯನ್ನು ಐದು ವಲಯಗಳ ಮೂಲಕ ವಿವರಿಸಿದ ಅಣ್ಣಾಮಲೈ, ಬಿಜೆಪಿ ಪಶ್ಚಿಮ ಪ್ರದೇಶದಲ್ಲಿ (54 ಸ್ಥಾನಗಳು) ಮತ್ತು ದಕ್ಷಿಣ ಜಿಲ್ಲೆಗಳಲ್ಲಿ (60 ಸ್ಥಾನಗಳು) ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 150 ಸ್ಥಾನಗಳನ್ನು ಗೆಲ್ಲಲು, ಒಂದು ಪಕ್ಷವು ಮೂರು ವಲಯಗಳನ್ನು ಗೆದ್ದುಕೊಳ್ಳಬೇಕು; 180-190 ಸ್ಥಾನಗಳನ್ನು ಪಡೆಯಲು, ಅದು ನಾಲ್ಕು ವಲಯಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಎಂದು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿದಾದ್ಯಂತ ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೇಲೆ ಮೇಲುಗೈ ಸಾಧಿಸಿದೆ. ಪಶ್ಚಿಮ ತಮಿಳುನಾಡಿನ ನಿರ್ಣಾಯಕ ಪ್ರದೇಶಗಳಲ್ಲಿಯೂ ಎಐಎಡಿಎಂಕೆ ಬಿಜೆಪಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...