Homeಮುಖಪುಟತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

- Advertisement -
- Advertisement -

ತಮಿಳುನಾಡಿನಲ್ಲಿ 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಮುಂದಿನ 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಒಂದಾಗಲು ಹೊರಟಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ, ಅಣ್ಣಾಮಲೈಗೆ ಬಿಜೆಪಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು indianexpress.com ವರದಿ ಮಾಡಿದೆ.

ಮುಂದಿನ ಚುನಾವಣೆಗೆ ಎಐಎಡಿಎಂಕೆ ಮತ್ತು ಬಿಜೆಪಿ ಜಾತಿ ಲೆಕ್ಕಾಚಾರ ಹಾಕಿದೆಯಂತೆ. ಅದರಂತೆ, ಎಐಎಡಿಎಂಕೆ ಮತ್ತು ಬಿಜೆಪಿ ಎರಡೂ ಪಕ್ಷಗಳ ಮುಖ (ಫೇಸ್‌) ಆಗಿ ‘ಗೌಂಡರ್’ ಸಮುದಾಯದವರು  ಮುಂದುವರೆಯುವುದು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿಲ್ಲ. ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಂತೆಯೇ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಕೂಡ ಪ್ರಬಲ ಹಿಂದುಳಿದ ಸಮುದಾಯಕ್ಕೆ ಸೇರಿದವರು ಮತ್ತು ಪಶ್ಚಿಮ ಕೊಂಗು ಪ್ರದೇಶವರು (ಇಲ್ಲಿ ಗೌಂಡರ್‌ಗಳು ಪ್ರಬಲರು).

ಮೈತ್ರಿ ಮಾತುಕತೆಯ ಮೊದಲ ಹೆಜ್ಜೆಯಾಗಿ ಎಐಎಡಿಎಂಕೆಯ ಪಳನಿಸ್ವಾಮಿಯವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ಅಣ್ಣಾಮಲೈ ಕೂಡ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅಣ್ಣಾಮಲೈ ಅವರೇ ಎರಡೂ ಪಕ್ಷಗಳ ನಾಯಕರು ಒಂದೇ ಸಮುದಾಯವರು ಆಗಿರುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹಾಗಾಗಿ, ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ಸಮುದಾಯದ ಒಬ್ಬರನ್ನು ನೇಮಿಸುವ ಯೋಚನೆಯಲ್ಲಿದೆ. ಅಣ್ಣಾಮಲೈಗೆ ರಾಷ್ಟ್ರೀಯ ಬಿಜೆಪಿಯಲ್ಲಿ ಹೈಕಮಾಂಡ್ ಸ್ಥಾನ ಕೊಡುವ ಸಾಧ್ಯತೆ ಇದೆ.

ಒಂದು ವೇಳೆ ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆ, ಆ ಸ್ಥಾನಕ್ಕೆ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ಜಯಲಲಿತಾ ಅವರ ನಾಯಕತ್ವದಡಿಯಲ್ಲಿ ಎಐಎಡಿಎಂಕೆಯಲ್ಲಿದ್ದ ಪ್ರಭಾವಿ ತೇವರ್ ಸಮುದಾಯಕ್ಕೆ ಸೇರಿದ ತಿರುನಲ್ವೇಲಿಯ ಜನಪ್ರಿಯ ನಾಯಕರಾಗಿದ್ದಾರೆ ಈ ನಾಗೇಂದ್ರನ್‌. ಈ ಹಿಂದೆ ಜಯಲಲಿತಾ ಅವರ ಆಪ್ತೆ ವಿ. ಕೆ ಶಶಿಕಲಾ ಮೂಲಕ ಎಐಎಡಿಎಂಕೆ ತೇವರ್ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಂಡಿತ್ತು.

“ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಅವರಿಗೆ ಕೊಡುವ ಶಿಕ್ಷೆಯಲ್ಲ ಅಥವಾ ಹಿಂಬಡ್ತಿಯೂ ಅಲ್ಲ. ಬಿಜೆಪಿ ಪಶ್ಚಿಮ ತಮಿಳುನಾಡಿನ ಆಚೆಗೂ ತನ್ನ ಹಿಡಿತವನ್ನು ಬಲಪಡಿಸಲು ಬಯಸುತ್ತಿದೆ. ನಾಗೇಂದ್ರನ್ ಅವರಂತಹ ತೇವರ್ ಸಮುದಾಯದ ನಾಯಕನಿಗೆ ಪಕ್ಷದ ಚುಕ್ಕಾಣಿ ಕೊಡುವುದರಿಂದ ದಕ್ಷಿಣ ಜಿಲ್ಲೆಗಳು ಮತ್ತು ಅದರಾಚೆಗೆ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸಲು ಸಹಾಯವಾಗುತ್ತದೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ಡಿಎಂಕೆಯ ಭದ್ರಕೋಟೆಯನ್ನು ಬೇಧಿಸಬೇಕಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ indianexpress.com ವರದಿ ತಿಳಿಸಿದೆ.

ಭಾನುವಾರ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಣ್ಣಾಮಲೈ, ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದು, “ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಒಂದು ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನೀವು ಅದನ್ನೇ ಪಕ್ಷದ ಅಂತಿಮ ಅಭಿಪ್ರಾಯವಾಗಿ ತೆಗೆದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್‌ಗೆ ತಮಿಳುನಾಡಿನ ವಿವರವಾದ ರಾಜಕೀಯ ಅಧ್ಯಯನ ನೀಡುವಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಣ್ಣಾಮಲೈ “ಒಬ್ಬ ಕೇಡರ್ ಮತ್ತು ನಾಯಕನಾಗಿ, ನಾನು ಸೂಕ್ಷ್ಮ ವಿಶ್ಲೇಷಣೆಯನ್ನು ಮಾಡಿದ್ದೇನೆ ಮತ್ತು ರಾಜ್ಯ ಘಟಕದ ಪ್ರಸ್ತುತ ಸ್ಥಿತಿ ಮತ್ತು ಅದು ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಪುರಾವೆಗಳೊಂದಿಗೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ವಿವರಿಸಿದ್ದೇನೆ” ಎಂದಿದ್ದಾರೆ.

ತಮಿಳುನಾಡಿನ ಚುನಾವಣಾ ವ್ಯವಸ್ಥೆಯನ್ನು ಐದು ವಲಯಗಳ ಮೂಲಕ ವಿವರಿಸಿದ ಅಣ್ಣಾಮಲೈ, ಬಿಜೆಪಿ ಪಶ್ಚಿಮ ಪ್ರದೇಶದಲ್ಲಿ (54 ಸ್ಥಾನಗಳು) ಮತ್ತು ದಕ್ಷಿಣ ಜಿಲ್ಲೆಗಳಲ್ಲಿ (60 ಸ್ಥಾನಗಳು) ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 150 ಸ್ಥಾನಗಳನ್ನು ಗೆಲ್ಲಲು, ಒಂದು ಪಕ್ಷವು ಮೂರು ವಲಯಗಳನ್ನು ಗೆದ್ದುಕೊಳ್ಳಬೇಕು; 180-190 ಸ್ಥಾನಗಳನ್ನು ಪಡೆಯಲು, ಅದು ನಾಲ್ಕು ವಲಯಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಎಂದು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿದಾದ್ಯಂತ ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೇಲೆ ಮೇಲುಗೈ ಸಾಧಿಸಿದೆ. ಪಶ್ಚಿಮ ತಮಿಳುನಾಡಿನ ನಿರ್ಣಾಯಕ ಪ್ರದೇಶಗಳಲ್ಲಿಯೂ ಎಐಎಡಿಎಂಕೆ ಬಿಜೆಪಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...