Homeಮುಖಪುಟತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

- Advertisement -
- Advertisement -

ತಮಿಳುನಾಡಿನಲ್ಲಿ 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಮುಂದಿನ 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಒಂದಾಗಲು ಹೊರಟಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ, ಅಣ್ಣಾಮಲೈಗೆ ಬಿಜೆಪಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು indianexpress.com ವರದಿ ಮಾಡಿದೆ.

ಮುಂದಿನ ಚುನಾವಣೆಗೆ ಎಐಎಡಿಎಂಕೆ ಮತ್ತು ಬಿಜೆಪಿ ಜಾತಿ ಲೆಕ್ಕಾಚಾರ ಹಾಕಿದೆಯಂತೆ. ಅದರಂತೆ, ಎಐಎಡಿಎಂಕೆ ಮತ್ತು ಬಿಜೆಪಿ ಎರಡೂ ಪಕ್ಷಗಳ ಮುಖ (ಫೇಸ್‌) ಆಗಿ ‘ಗೌಂಡರ್’ ಸಮುದಾಯದವರು  ಮುಂದುವರೆಯುವುದು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿಲ್ಲ. ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಂತೆಯೇ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಕೂಡ ಪ್ರಬಲ ಹಿಂದುಳಿದ ಸಮುದಾಯಕ್ಕೆ ಸೇರಿದವರು ಮತ್ತು ಪಶ್ಚಿಮ ಕೊಂಗು ಪ್ರದೇಶವರು (ಇಲ್ಲಿ ಗೌಂಡರ್‌ಗಳು ಪ್ರಬಲರು).

ಮೈತ್ರಿ ಮಾತುಕತೆಯ ಮೊದಲ ಹೆಜ್ಜೆಯಾಗಿ ಎಐಎಡಿಎಂಕೆಯ ಪಳನಿಸ್ವಾಮಿಯವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ಅಣ್ಣಾಮಲೈ ಕೂಡ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅಣ್ಣಾಮಲೈ ಅವರೇ ಎರಡೂ ಪಕ್ಷಗಳ ನಾಯಕರು ಒಂದೇ ಸಮುದಾಯವರು ಆಗಿರುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹಾಗಾಗಿ, ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ಸಮುದಾಯದ ಒಬ್ಬರನ್ನು ನೇಮಿಸುವ ಯೋಚನೆಯಲ್ಲಿದೆ. ಅಣ್ಣಾಮಲೈಗೆ ರಾಷ್ಟ್ರೀಯ ಬಿಜೆಪಿಯಲ್ಲಿ ಹೈಕಮಾಂಡ್ ಸ್ಥಾನ ಕೊಡುವ ಸಾಧ್ಯತೆ ಇದೆ.

ಒಂದು ವೇಳೆ ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆ, ಆ ಸ್ಥಾನಕ್ಕೆ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ಜಯಲಲಿತಾ ಅವರ ನಾಯಕತ್ವದಡಿಯಲ್ಲಿ ಎಐಎಡಿಎಂಕೆಯಲ್ಲಿದ್ದ ಪ್ರಭಾವಿ ತೇವರ್ ಸಮುದಾಯಕ್ಕೆ ಸೇರಿದ ತಿರುನಲ್ವೇಲಿಯ ಜನಪ್ರಿಯ ನಾಯಕರಾಗಿದ್ದಾರೆ ಈ ನಾಗೇಂದ್ರನ್‌. ಈ ಹಿಂದೆ ಜಯಲಲಿತಾ ಅವರ ಆಪ್ತೆ ವಿ. ಕೆ ಶಶಿಕಲಾ ಮೂಲಕ ಎಐಎಡಿಎಂಕೆ ತೇವರ್ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಂಡಿತ್ತು.

“ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಅವರಿಗೆ ಕೊಡುವ ಶಿಕ್ಷೆಯಲ್ಲ ಅಥವಾ ಹಿಂಬಡ್ತಿಯೂ ಅಲ್ಲ. ಬಿಜೆಪಿ ಪಶ್ಚಿಮ ತಮಿಳುನಾಡಿನ ಆಚೆಗೂ ತನ್ನ ಹಿಡಿತವನ್ನು ಬಲಪಡಿಸಲು ಬಯಸುತ್ತಿದೆ. ನಾಗೇಂದ್ರನ್ ಅವರಂತಹ ತೇವರ್ ಸಮುದಾಯದ ನಾಯಕನಿಗೆ ಪಕ್ಷದ ಚುಕ್ಕಾಣಿ ಕೊಡುವುದರಿಂದ ದಕ್ಷಿಣ ಜಿಲ್ಲೆಗಳು ಮತ್ತು ಅದರಾಚೆಗೆ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸಲು ಸಹಾಯವಾಗುತ್ತದೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ಡಿಎಂಕೆಯ ಭದ್ರಕೋಟೆಯನ್ನು ಬೇಧಿಸಬೇಕಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ indianexpress.com ವರದಿ ತಿಳಿಸಿದೆ.

ಭಾನುವಾರ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಣ್ಣಾಮಲೈ, ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದು, “ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಒಂದು ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನೀವು ಅದನ್ನೇ ಪಕ್ಷದ ಅಂತಿಮ ಅಭಿಪ್ರಾಯವಾಗಿ ತೆಗೆದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್‌ಗೆ ತಮಿಳುನಾಡಿನ ವಿವರವಾದ ರಾಜಕೀಯ ಅಧ್ಯಯನ ನೀಡುವಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಣ್ಣಾಮಲೈ “ಒಬ್ಬ ಕೇಡರ್ ಮತ್ತು ನಾಯಕನಾಗಿ, ನಾನು ಸೂಕ್ಷ್ಮ ವಿಶ್ಲೇಷಣೆಯನ್ನು ಮಾಡಿದ್ದೇನೆ ಮತ್ತು ರಾಜ್ಯ ಘಟಕದ ಪ್ರಸ್ತುತ ಸ್ಥಿತಿ ಮತ್ತು ಅದು ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಪುರಾವೆಗಳೊಂದಿಗೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ವಿವರಿಸಿದ್ದೇನೆ” ಎಂದಿದ್ದಾರೆ.

ತಮಿಳುನಾಡಿನ ಚುನಾವಣಾ ವ್ಯವಸ್ಥೆಯನ್ನು ಐದು ವಲಯಗಳ ಮೂಲಕ ವಿವರಿಸಿದ ಅಣ್ಣಾಮಲೈ, ಬಿಜೆಪಿ ಪಶ್ಚಿಮ ಪ್ರದೇಶದಲ್ಲಿ (54 ಸ್ಥಾನಗಳು) ಮತ್ತು ದಕ್ಷಿಣ ಜಿಲ್ಲೆಗಳಲ್ಲಿ (60 ಸ್ಥಾನಗಳು) ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 150 ಸ್ಥಾನಗಳನ್ನು ಗೆಲ್ಲಲು, ಒಂದು ಪಕ್ಷವು ಮೂರು ವಲಯಗಳನ್ನು ಗೆದ್ದುಕೊಳ್ಳಬೇಕು; 180-190 ಸ್ಥಾನಗಳನ್ನು ಪಡೆಯಲು, ಅದು ನಾಲ್ಕು ವಲಯಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಎಂದು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿದಾದ್ಯಂತ ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೇಲೆ ಮೇಲುಗೈ ಸಾಧಿಸಿದೆ. ಪಶ್ಚಿಮ ತಮಿಳುನಾಡಿನ ನಿರ್ಣಾಯಕ ಪ್ರದೇಶಗಳಲ್ಲಿಯೂ ಎಐಎಡಿಎಂಕೆ ಬಿಜೆಪಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...