Homeಮುಖಪುಟಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭ: ಜಾತಿ ಗಣತಿ ನ್ಯಾಯದ ಮೊದಲ ಹೆಜ್ಜೆ: ರಾಹುಲ್...

ಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭ: ಜಾತಿ ಗಣತಿ ನ್ಯಾಯದ ಮೊದಲ ಹೆಜ್ಜೆ: ರಾಹುಲ್ ಗಾಂಧಿ

- Advertisement -
- Advertisement -

ಕಳೆದ ಎರಡು ದಿನಗಳಿಂದ ವಿಶ್ರಾಂತಿಯಲ್ಲಿದ್ದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಪ.ಬಂಗಾಳದಲ್ಲಿ ಮತ್ತೆ ಪುನರಾರಂಭಗೊಂಡಿದೆ. ಇದೇ ವೇಳೆ ರಾಹುಲ್‌ ಗಾಂಧಿ ಎಕ್ಸ್‌ನಲ್ಲಿ ಜಾತಿಗಣತಿ ಬಗ್ಗೆ ಮಹತ್ವದ ಪೋಸ್ಟ್‌ ಮಾಡಿದ್ದು, ತೆಲಂಗಾಣ ಸರಕಾರವನ್ನು ಅಭಿನಂದಿಸಿದ್ದಾರೆ.

ತೆಲಂಗಾಣದಲ್ಲಿ ರಾಜ್ಯದಲ್ಲಿ ಜಾತಿ ಗಣತಿಯನ್ನು ಘೋಷಿಸುವ ಮೂಲಕ ನ್ಯಾಯದ ಕಡೆಗೆ ಮೊದಲ ಹೆಜ್ಜೆ ಇಟ್ಟಿದ್ದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅವರ ಸರ್ಕಾರವನ್ನು ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.

ದೇಶದ ಏಳಿಗೆಯಲ್ಲಿ ಸಮಾಜದ ಪ್ರತಿಯೊಂದು ವರ್ಗದ ಸಮಾನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಜಾತಿ ಗಣತಿಯೊಂದೇ ಮಾರ್ಗವಾಗಿದೆ. ಜಾತಿ ಗಣತಿ ನ್ಯಾಯದ ಮೊದಲ ಮೆಟ್ಟಿಲು. ಏಕೆಂದರೆ ಯಾವುದೇ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ತಿಳಿಯದೆ, ಅದಕ್ಕೆ ಸರಿಯಾದ ಯೋಜನೆಗಳನ್ನು ರೂಪಿಸುವುದು ಅಸಾಧ್ಯ. ದೇಶದ ಸಮೃದ್ಧಿಗೆ ಜಾತಿ ಗಣತಿಯು ಸಮಾಜದ ಪ್ರತಿಯೊಂದು ವರ್ಗದ ಸಮಾನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಏಕೈಕ ಮಾರ್ಗವಾಗಿದೆ. ನ್ಯಾಯದತ್ತ ಮೊದಲ ಹೆಜ್ಜೆ ಇಟ್ಟ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರಕ್ಕೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

ತೆಲಂಗಾಣ ಸರ್ಕಾರ ಚುನಾವಣೆಗೂ ಮುನ್ನ ಜನತೆಗೆ ನೀಡಿದ ಭರವಸೆಯಂತೆ ಜಾತಿಗಣತಿಯನ್ನು ಶೀಘ್ರವೇ ಕೈಗೊಳ್ಳಲಿದೆ ಎಂದು ರೆಡ್ಡಿ ಶನಿವಾರ ಹೇಳಿದ್ದರು. ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆ ನಡೆಸಿದ ರೆಡ್ಡಿ, ಜಾತಿ ಗಣತಿಯನ್ನು ಕೈಗೊಳ್ಳಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದಲ್ಲದೆ ಬಿಪಿಎಲ್ ವರ್ಗದ ಕುಟುಂಬಗಳ ಹೆಣ್ಣುಮಕ್ಕಳಿಗೆ ಅವರ ಮದುವೆಯ ಸಮಯದಲ್ಲಿ 1 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯದ ಜೊತೆಗೆ ಒಂದು ತೊಲ ಚಿನ್ನವನ್ನು ನೀಡುವ ‘ಕಲ್ಯಾಣಮಸ್ತು’ ಯೋಜನೆಯನ್ನು ಅನುಷ್ಠಾನಗೊಳಿಸಲು ಬಜೆಟ್ ಅಂದಾಜುಗಳನ್ನು ಸಿದ್ಧಪಡಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ: 

ಜ. 26, 27ರಂದು ವಿಶ್ರಾಂತಿಯಲ್ಲಿದ್ದ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಇಂದು ಮತ್ತೆ ಪುನರಾರಂಭಗೊಂಡಿದೆ. ಪ.ಬಂಗಾಳದ ಜಲ್ಪೈಗುರಿಯಿಂದ ರಾಹುಲ್ ಪಾದಯಾತ್ರೆಯನ್ನು ಪುನರಾರಂಭಿಸಿದ್ದಾರೆ.

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ರಾಜ್ಯದ ಉತ್ತರ ಭಾಗದಲ್ಲಿರುವ ಸಿಲಿಗುರಿಯ ಬಾಗ್ದೋಗ್ರಾ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ರಾಹುಲ್‌ ಗಾಂಧಿ ಅವರನ್ನು ಬರಮಾಡಿಕೊಂಡಿದ್ದಾರೆ.

ಬಸ್ ಮತ್ತು ಕಾಲ್ನಡಿಗೆಯಲ್ಲಿ ಸಾಗುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಇಂದು ರಾತ್ರಿ ಸಿಲಿಗುರಿಯ ಬಳಿ ತಂಗಲಿದೆ. ಸೋಮವಾರ ಯಾತ್ರೆ ಬಿಹಾರಕ್ಕೆ ತೆರಳಲಿದೆ. ಜ.31ಕ್ಕೆ ಮಾಲ್ಡಾ ಮೂಲಕ ಪಶ್ಚಿಮ ಬಂಗಾಳ ಮರುಪ್ರವೇಶಿಸಿ ಫೆಬ್ರವರಿ 1ರಂದು  ಪ.ಬಂಗಾಳದಿಂದ ಯಾತ್ರೆ ಮುಂದೆ ಸಾಗಿ ಫೆಬ್ರವರಿ 2ರಂದು ಜಾರ್ಖಂಡ್ ಪ್ರವೇಶಿಸಲಿದೆ ಹಾಗೂ ಪಾಕುರ್ ಜಿಲ್ಲೆಯಲ್ಲಿ ರಾಹುಲ್‌ಗಾಂಧಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನು ಓದಿ: ‘ಕಸ ಈಗ ಮತ್ತೆ ತೊಟ್ಟಿಗೆ ಸೇರಿದೆ’: INDIA  ಮೈತ್ರಿಕೂಟ ತೊರೆದ ನಿತೀಶ್‌ ವಿರುದ್ಧ ಪ್ರತಿಪಕ್ಷಗಳ ನಾಯಕರು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...