Homeಮುಖಪುಟಕೇಂದ್ರದಿಂದ ಜಾತಿಗಣತಿ ನಿರ್ಧಾರ | ಇಂಡಿಯಾ ಮೈತ್ರಿಗೆ ಸಿಕ್ಕ ಗೆಲುವು: ಅಖಿಲೇಶ್ ಯಾದವ್

ಕೇಂದ್ರದಿಂದ ಜಾತಿಗಣತಿ ನಿರ್ಧಾರ | ಇಂಡಿಯಾ ಮೈತ್ರಿಗೆ ಸಿಕ್ಕ ಗೆಲುವು: ಅಖಿಲೇಶ್ ಯಾದವ್

- Advertisement -
- Advertisement -

ಜಾತಿ ಆಧಾರಿತ ಜನಗಣತಿ ನಡೆಸುವ ಕೇಂದ್ರದ ನಿರ್ಧಾರವನ್ನು ಪಿಡಿಎ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರು) ಮತ್ತು ಇಂಡಿಯಾ ಮೈತ್ರಿಯ ಒಗ್ಗಟ್ಟಿಗೆ ಸಿಕ್ಕ “100% ಗೆಲುವು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬುಧವಾರ ಬಣ್ಣಿಸಿದ್ದಾರೆ. ಕೇಂದ್ರದಿಂದ ಜಾತಿಗಣತಿ ನಿರ್ಧಾರ

ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅಖಿಲೇಶ್, “ಜಾತಿ ಜನಗಣತಿ ನಡೆಸುವ ನಿರ್ಧಾರವು 90% ರಷ್ಟು ಇರುವ ಪಿಡಿಎಯ ಒಗ್ಗಟ್ಟಿನ 100%ದಷ್ಟು ವಿಜಯವಾಗಿದೆ. ನಮ್ಮ ಸಾಮೂಹಿಕ ಒತ್ತಡದಿಂದಾಗಿ, ಬಿಜೆಪಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಆಗಿದೆ. ಸಾಮಾಜಿಕ ನ್ಯಾಯಕ್ಕಾಗಿ ಪಿಡಿಎಯ ಹೋರಾಟದಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ.” ಎಂದು ಹೇಳಿದ್ದಾರೆ.

“ಇದು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ, ಜಾತಿ ಜನಗಣತಿಯ ತನ್ನ ಚುನಾವಣಾ ಮೋಸದಿಂದ ದೂರವಿರಿ. ಪ್ರಾಮಾಣಿಕ ಜನಗಣತಿ ಮಾತ್ರ ಪ್ರತಿ ಜಾತಿಯೂ ತನ್ನ ಜನಸಂಖ್ಯೆಯ ಆಧಾರದ ಮೇಲೆ ತನ್ನ ಸರಿಯಾದ ಪಾಲನ್ನು ಪಡೆಯುತ್ತದೆ ಎಂದು ಖಚಿತಪಡಿಸಿಕೊಳ್ಳಬಹುದು. ಇದನ್ನು ಇದುವರೆಗೆ ಪ್ರಬಲ ಶಕ್ತಿಗಳು ನಿರಾಕರಿಸಿವೆ” ಎಂದು ಅವರು ಹೇಳಿದ್ದಾರೆ.

ಈ ನಡೆಯನ್ನು ಪರಿವರ್ತನಾ ಚಳವಳಿಯ ಆರಂಭ ಎಂದು ಕರೆದ ಅಖಿಲೇಶ್, “ಇದು ಹಕ್ಕುಗಳಿಗಾಗಿ ಸಕಾರಾತ್ಮಕ ಪ್ರಜಾಸತ್ತಾತ್ಮಕ ಚಳವಳಿಯ ಮೊದಲ ಹಂತ ಮತ್ತು ಬಿಜೆಪಿಯ ನಕಾರಾತ್ಮಕ ರಾಜಕೀಯದ ಕೊನೆಯ ಹಂತ. ಬಿಜೆಪಿಯ ‘ಪ್ರಭುತ್ವವಾದಿ’ (ಪ್ರಾಬಲ್ಯ-ಚಾಲಿತ) ಚಿಂತನೆಯ ಅಂತ್ಯ ಅನಿವಾರ್ಯ.” ಎಂದು ಹೇಳಿದ್ದಾರೆ.

‘ಮನ್ವಿಧಾನ’ (ತನ್ನ ಸ್ವಂತ ಇಚ್ಛೆಯಂತೆ ಓಡಾಡುವುದು) ಸಂವಿಧಾನದ ವಿರುದ್ಧವಾಗಿದ್ದು, ದೀರ್ಘಕಾಲ ನಿಲ್ಲಲು ಸಾಧ್ಯವಿಲ್ಲ. ಇದು ಭಾರತದ ಗೆಲುವು ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರ ಎಸ್‌ಪಿ ಪಕ್ಷವೂ ತನ್ನ ಚುನಾವಣಾ ಪ್ರಚಾರಗಳಲ್ಲಿ ಜಾತಿಗಣತಿಯನ್ನು ನಿರಂತರವಾಗಿ ಪ್ರಮುಖ ವಿಷಯವನ್ನಾಗಿ ಮಾಡಿತ್ತು.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಆಧಾರಿತ ಡೇಟಾವನ್ನು “ಪಾರದರ್ಶಕ ರೀತಿಯಲ್ಲಿ” ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. ಜನಗಣತಿ ಕೇಂದ್ರ ವಿಷಯವಾಗಿದ್ದರೂ, ಕೆಲವು ರಾಜ್ಯಗಳು ವಿಭಿನ್ನ ಹೆಸರುಗಳಲ್ಲಿ ಜಾತಿ ಸಮೀಕ್ಷೆಗಳನ್ನು ಪ್ರಯತ್ನಿಸಿವೆ ಎಂದು ಅವರು ಹೇಳಿದ್ದಾರೆ.

ಮೂಲತಃ ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿದ್ದ ರಾಷ್ಟ್ರೀಯ ಜನಗಣತಿಯು ಕೊರೊನಾ ಕಾರಣಕ್ಕೆ ವಿಳಂಬವಾಗಿದ್ದು, 2025 ಆದರೂ ಇನ್ನೂ ಈ ಬಗ್ಗೆ ಕೇಂದ್ರ ಸರ್ಕಾರ ಸರಿಯಾದ ತೀರ್ಮಾನ ಕೈಗೊಂಡಿಲ್ಲ. ಕೇಂದ್ರದಿಂದ ಜಾತಿಗಣತಿ ನಿರ್ಧಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:   ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...