Homeಮುಖಪುಟಕೇಂದ್ರದಿಂದ ಜಾತಿಗಣತಿ ನಿರ್ಧಾರ | ಇಂಡಿಯಾ ಮೈತ್ರಿಗೆ ಸಿಕ್ಕ ಗೆಲುವು: ಅಖಿಲೇಶ್ ಯಾದವ್

ಕೇಂದ್ರದಿಂದ ಜಾತಿಗಣತಿ ನಿರ್ಧಾರ | ಇಂಡಿಯಾ ಮೈತ್ರಿಗೆ ಸಿಕ್ಕ ಗೆಲುವು: ಅಖಿಲೇಶ್ ಯಾದವ್

- Advertisement -
- Advertisement -

ಜಾತಿ ಆಧಾರಿತ ಜನಗಣತಿ ನಡೆಸುವ ಕೇಂದ್ರದ ನಿರ್ಧಾರವನ್ನು ಪಿಡಿಎ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರು) ಮತ್ತು ಇಂಡಿಯಾ ಮೈತ್ರಿಯ ಒಗ್ಗಟ್ಟಿಗೆ ಸಿಕ್ಕ “100% ಗೆಲುವು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬುಧವಾರ ಬಣ್ಣಿಸಿದ್ದಾರೆ. ಕೇಂದ್ರದಿಂದ ಜಾತಿಗಣತಿ ನಿರ್ಧಾರ

ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅಖಿಲೇಶ್, “ಜಾತಿ ಜನಗಣತಿ ನಡೆಸುವ ನಿರ್ಧಾರವು 90% ರಷ್ಟು ಇರುವ ಪಿಡಿಎಯ ಒಗ್ಗಟ್ಟಿನ 100%ದಷ್ಟು ವಿಜಯವಾಗಿದೆ. ನಮ್ಮ ಸಾಮೂಹಿಕ ಒತ್ತಡದಿಂದಾಗಿ, ಬಿಜೆಪಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಆಗಿದೆ. ಸಾಮಾಜಿಕ ನ್ಯಾಯಕ್ಕಾಗಿ ಪಿಡಿಎಯ ಹೋರಾಟದಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ.” ಎಂದು ಹೇಳಿದ್ದಾರೆ.

“ಇದು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ, ಜಾತಿ ಜನಗಣತಿಯ ತನ್ನ ಚುನಾವಣಾ ಮೋಸದಿಂದ ದೂರವಿರಿ. ಪ್ರಾಮಾಣಿಕ ಜನಗಣತಿ ಮಾತ್ರ ಪ್ರತಿ ಜಾತಿಯೂ ತನ್ನ ಜನಸಂಖ್ಯೆಯ ಆಧಾರದ ಮೇಲೆ ತನ್ನ ಸರಿಯಾದ ಪಾಲನ್ನು ಪಡೆಯುತ್ತದೆ ಎಂದು ಖಚಿತಪಡಿಸಿಕೊಳ್ಳಬಹುದು. ಇದನ್ನು ಇದುವರೆಗೆ ಪ್ರಬಲ ಶಕ್ತಿಗಳು ನಿರಾಕರಿಸಿವೆ” ಎಂದು ಅವರು ಹೇಳಿದ್ದಾರೆ.

ಈ ನಡೆಯನ್ನು ಪರಿವರ್ತನಾ ಚಳವಳಿಯ ಆರಂಭ ಎಂದು ಕರೆದ ಅಖಿಲೇಶ್, “ಇದು ಹಕ್ಕುಗಳಿಗಾಗಿ ಸಕಾರಾತ್ಮಕ ಪ್ರಜಾಸತ್ತಾತ್ಮಕ ಚಳವಳಿಯ ಮೊದಲ ಹಂತ ಮತ್ತು ಬಿಜೆಪಿಯ ನಕಾರಾತ್ಮಕ ರಾಜಕೀಯದ ಕೊನೆಯ ಹಂತ. ಬಿಜೆಪಿಯ ‘ಪ್ರಭುತ್ವವಾದಿ’ (ಪ್ರಾಬಲ್ಯ-ಚಾಲಿತ) ಚಿಂತನೆಯ ಅಂತ್ಯ ಅನಿವಾರ್ಯ.” ಎಂದು ಹೇಳಿದ್ದಾರೆ.

‘ಮನ್ವಿಧಾನ’ (ತನ್ನ ಸ್ವಂತ ಇಚ್ಛೆಯಂತೆ ಓಡಾಡುವುದು) ಸಂವಿಧಾನದ ವಿರುದ್ಧವಾಗಿದ್ದು, ದೀರ್ಘಕಾಲ ನಿಲ್ಲಲು ಸಾಧ್ಯವಿಲ್ಲ. ಇದು ಭಾರತದ ಗೆಲುವು ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರ ಎಸ್‌ಪಿ ಪಕ್ಷವೂ ತನ್ನ ಚುನಾವಣಾ ಪ್ರಚಾರಗಳಲ್ಲಿ ಜಾತಿಗಣತಿಯನ್ನು ನಿರಂತರವಾಗಿ ಪ್ರಮುಖ ವಿಷಯವನ್ನಾಗಿ ಮಾಡಿತ್ತು.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಆಧಾರಿತ ಡೇಟಾವನ್ನು “ಪಾರದರ್ಶಕ ರೀತಿಯಲ್ಲಿ” ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. ಜನಗಣತಿ ಕೇಂದ್ರ ವಿಷಯವಾಗಿದ್ದರೂ, ಕೆಲವು ರಾಜ್ಯಗಳು ವಿಭಿನ್ನ ಹೆಸರುಗಳಲ್ಲಿ ಜಾತಿ ಸಮೀಕ್ಷೆಗಳನ್ನು ಪ್ರಯತ್ನಿಸಿವೆ ಎಂದು ಅವರು ಹೇಳಿದ್ದಾರೆ.

ಮೂಲತಃ ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿದ್ದ ರಾಷ್ಟ್ರೀಯ ಜನಗಣತಿಯು ಕೊರೊನಾ ಕಾರಣಕ್ಕೆ ವಿಳಂಬವಾಗಿದ್ದು, 2025 ಆದರೂ ಇನ್ನೂ ಈ ಬಗ್ಗೆ ಕೇಂದ್ರ ಸರ್ಕಾರ ಸರಿಯಾದ ತೀರ್ಮಾನ ಕೈಗೊಂಡಿಲ್ಲ. ಕೇಂದ್ರದಿಂದ ಜಾತಿಗಣತಿ ನಿರ್ಧಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:   ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...