Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...