Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...