Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...