Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...