Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...