Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...