Homeಕರ್ನಾಟಕಇಂದಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಇಲ್ಲ : ಸಿಎಂ ಹೇಳಿದ್ದೇನು?

ಇಂದಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಇಲ್ಲ : ಸಿಎಂ ಹೇಳಿದ್ದೇನು?

- Advertisement -
- Advertisement -

ಇಂದಿನ (ಜ.16) ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಜಾತಿ ಗಣತಿ ವರದಿಯನ್ನು ಮಂಡಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಯೂ ಟರ್ನ್‌ ಹೊಡೆದಿದ್ದು, ಇಂದಿನ ಸಭೆಯಲ್ಲಿ ವರದಿ ಮಂಡನೆ ಇಲ್ಲ ಎಂದಿದ್ದಾರೆ.

ಬುಧವಾರ (ಜ.15) ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ” ಜಾತಿ ಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ಸಮೀಕ್ಷೆ ನಡೆಸಿ ಸಿದ್ದಪಡಿಸಿರುವ ವರದಿಯನ್ನು ಸರ್ಕಾರ ಸ್ವೀಕರಿಸಲೇಬಾರದು ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳು ಪಟ್ಟು ಹಿಡಿದಿವೆ. ‘ಇದೊಂದು ಅವೈಜ್ಞಾನಿಕ ವರದಿ’, ಅಂಕಿ ಅಂಶಗಳು ಊಹಾಪೋಹದಿಂದ ಕೂಡಿವೆ. ಈ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸಂಘಟನೆಗಳು ಒತ್ತಾಯಿಸಿವೆ.

ಹಾಗಾಗಿ, ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ ಜಾತಿ ಗಣತಿ ವರದಿ ಮಂಡನೆಯನ್ನು ಮುಂದೂಡಿದೆ ಎಂದು ವರದಿಗಳು ಹೇಳಿವೆ.

ಈ ಹಿಂದಿನ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ, ಅಂದರೆ 2015ರಲ್ಲಿ 160 ಕೋಟಿ ರೂಪಾಯಿ ವೆಚ್ಚ ಮಾಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನಡೆಸಿ ವರದಿ ಸಿದ್ದಪಡಿಸಲಾಗಿದೆ. ನ್ಯಾಯಮೂರ್ತಿ ಹೆಚ್‌. ಕಾಂತರಾಜು ಆಯೋಗ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿ ಈ ವರದಿಯನ್ನು ಸಿದ್ದಪಡಿಸಿದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರಕ್ಕೆ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. 2023ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೆ, ಅದರ ಮಂಡನೆಗೆ ಮೀನಾಮೇಷಾ ಎನಿಸುತ್ತಿದೆ.

ರಾಷ್ಟ್ರಮಟ್ಟದಲ್ಲಿ ಜಾತಿಗಣತಿಗೆ ಲೋಹಿಯಾ ವಿಚಾರ ವೇದಿಕೆ ಒತ್ತಾಯ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...