Homeಮುಖಪುಟ'ಜಾತಿಗಣತಿ ಮಾಡಬೇಕು, ಯಾಕೆಂದರೆ...': ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

- Advertisement -
- Advertisement -

ಕೇಂದ್ರದ ಎನ್‌ಡಿಎ ಸರ್ಕಾರದ ಮೈತ್ರಿ ಪಕ್ಷವಾದ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು “ಜನರ ಭಾವನೆಗಳನ್ನು ಗೌರವಿಸಲು” ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ತಮ್ಮ ದೃಷ್ಟಿಕೋನದಲ್ಲಿ ಬಡತನವು “ದೊಡ್ಡ ಸಮಸ್ಯೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕು ಎಂಬುವುದು ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.ಜಾತಿಗಣತಿ ಮಾಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾತಿ ಗಣತಿ, ಹೌದು, ಅದನ್ನು ಮಾಡಬೇಕಾಗಿದೆ. ಅಂತದ್ದೊಂದು ಭಾವನೆ ಇದೆ, ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಜಾತಿ ಗಣತಿ ಮಾಡಿ, ನೀವು ಆರ್ಥಿಕ ವಿಶ್ಲೇಷಣೆ ಮಾಡಿ ಅಥವಾ ನೀವು ಕೌಶಲ್ಯ ಗಣತಿ ಮಾಡಿ. ಈ ಎಲ್ಲಾ ವಿಷಯಗಳನ್ನು ಹೇಗೆ ಮಾಡುವುದು ಮತ್ತು ಆರ್ಥಿಕ ಅಸಮಾನತೆಗಳನ್ನು ಕಡಿಮೆ ಮಾಡುವುದು ಹೇಗೆ ಎಂಬುವುದರ ಬಗ್ಗೆ ಕೆಲಸ ಮಾಡಬೇಕು” ಎಂದು ಚಂದ್ರಬಾಬು ನಾಯ್ಡು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಜಾತಿಗಣತಿ ಮಾಡಬೇಕು

ಇದನ್ನೂಓದಿ: ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

“ಜಾತಿ ಗಣತಿಗಾಗಿ ಸಾರ್ವಜನಿಕ ಬೇಡಿಕೆಯಿದ್ದು, ಅದನ್ನು ನೀವು ಗೌರವಿಸಬೇಕು. ಅದರಲ್ಲಿ ಎರಡನೆ ಮಾತಿಲ್ಲ. ಅದೇ ವೇಳೆ ಬಡತನ ದೊಡ್ಡ ಸಮಸ್ಯೆಯಾಗಿದೆ. ನೀವು ದುರ್ಬಲ ವರ್ಗದವರಾಗಿದ್ದರೂ, ನಿಮ್ಮಲ್ಲಿ ಹಣವಿದ್ದರೆ ಸಮಾಜವು ನಿಮ್ಮನ್ನು ಗೌರವಿಸುತ್ತದೆ. ನೀವು ಮೇಲ್ಜಾತಿಯವರಾಗಿದ್ದರೆ ಮತ್ತು ಹಣವಿಲ್ಲದಿದ್ದರೆ ಯಾರೂ ನಿಮ್ಮನ್ನು ಗೌರವಿಸುವುದಿಲ್ಲ. ಸಂಪತ್ತು ದೊಡ್ಡ ವಿಚಾರವಾಗಿದ್ದು, ಅಲ್ಲಿ ನೀವು ಸಮತೋಲನವನ್ನು ಕಂಡುಹಿಡಿಯಬಹುದು” ಎಂದು ಅವರು ಹೇಳಿದ್ದಾರೆ.

ಆಧಾರ್ ಡೇಟಾವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಜನಗಣತಿ ನಡೆಸುವಂತೆ ನಾಯ್ಡು ಸಲಹೆ ನೀಡಿದ್ದಾರೆ. “ಹೆಚ್ಚು ಹಿಂದುಳಿದ ಜಾತಿಗಳ ಮೇಲೆ ವಿಶೇಷ ಗಮನಹರಿಸಲು, ಆಧಾರ್ ಚೌಕಟ್ಟಿನ ಅಡಿಯಲ್ಲಿ ಕುಟುಂಬದ ಜಾತಿ, ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಅವರ ಕೌಶಲ್ಯದ ಮಟ್ಟವನ್ನು ಸೇರಿಸಲು” ಅವರು ಪ್ರಸ್ತಾಪಿಸಿದ್ದಾರೆ.

ಬಡತನ ನಿರ್ಮೂಲನೆಗೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಸಮುದಾಯಗಳ ಆರ್ಥಿಕ ಸ್ಥಿತಿಯ ಬಗ್ಗೆ ಡೇಟಾವನ್ನು ಹೊಂದಿರುವುದು ಅಗತ್ಯವೆಂದು ನಾಯ್ಡು ಅವರು ಜಾತಿ ಗಣತಿಯನ್ನು ಆಗಸ್ಟ್ 2023 ರಲ್ಲಿ ಬೆಂಬಲಿಸಿದ್ದರು. 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಭರವಸೆ ನೀಡಿತ್ತು.

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

2021 ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯಿಂದ “ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಹೊರಗಿಡುವುದು” ಪ್ರಜ್ಞಾಪೂರ್ವಕ ನೀತಿ ನಿರ್ಧಾರವಾಗಿದೆ ಎಂದು ಹೇಳಿತ್ತು. ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯ ಮಾಹಿತಿ ಸಂಗ್ರಹಿಸುವುದು ಆಡಳಿತಾತ್ಮಕವಾಗಿ ಕಷ್ಟಕರವಾಗಿದ್ದು, ನಿಖರತೆಯ ಕೊರತೆಯಿದೆ ಎಂದು ಅದು ಹೇಳಿತ್ತು.

ಅದಾಗ್ಯೂ, ರಾಷ್ಟ್ರವ್ಯಾಪಿ ಜಾತಿ ಗಣತಿಯ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆ, ಬಿಜೆಪಿ ಯೂಟರ್ನ್‌ ತೆಗೆದುಕೊಂಡಿತ್ತು. ನವೆಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸಿಲ್ಲ, ವ್ಯಾಪಕ ಸಮಾಲೋಚನೆಯ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಏಪ್ರಿಲ್ 12 ರಂದು ತಮ್ಮ ಪಕ್ಷ ಜಾತಿ ಗಣತಿಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜನತಾ ದಳ (ಯುನೈಟೆಡ್) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಕೂಡಾ ಜಾತಿ ಗಣತಿಗಾಗಿ ಪ್ರತಿಪಾದಿಸುತ್ತಿವೆ. ಸೆಪ್ಟೆಂಬರ್‌ನಲ್ಲಿ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಕೂಡಾ ಜಾತಿಗಣತಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

ವಿಡಿಯೊ ನೋಡಿ: ಶೃಂಗೇರಿಯ ಜನ ನಾವು, ನೀವಂದುಕೊಂಡಂತೆ ಸಿರಿವಂತರಲ್ಲ.. ನಮಗಿನ್ನೂ ಸಿಕ್ಕಿಲ್ಲ ಹಕ್ಕುಪತ್ರ – ವಿನೀತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...