Homeಮುಖಪುಟ'ಜಾತಿಗಣತಿ ಮಾಡಬೇಕು, ಯಾಕೆಂದರೆ...': ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

- Advertisement -
- Advertisement -

ಕೇಂದ್ರದ ಎನ್‌ಡಿಎ ಸರ್ಕಾರದ ಮೈತ್ರಿ ಪಕ್ಷವಾದ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು “ಜನರ ಭಾವನೆಗಳನ್ನು ಗೌರವಿಸಲು” ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ತಮ್ಮ ದೃಷ್ಟಿಕೋನದಲ್ಲಿ ಬಡತನವು “ದೊಡ್ಡ ಸಮಸ್ಯೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕು ಎಂಬುವುದು ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.ಜಾತಿಗಣತಿ ಮಾಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾತಿ ಗಣತಿ, ಹೌದು, ಅದನ್ನು ಮಾಡಬೇಕಾಗಿದೆ. ಅಂತದ್ದೊಂದು ಭಾವನೆ ಇದೆ, ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಜಾತಿ ಗಣತಿ ಮಾಡಿ, ನೀವು ಆರ್ಥಿಕ ವಿಶ್ಲೇಷಣೆ ಮಾಡಿ ಅಥವಾ ನೀವು ಕೌಶಲ್ಯ ಗಣತಿ ಮಾಡಿ. ಈ ಎಲ್ಲಾ ವಿಷಯಗಳನ್ನು ಹೇಗೆ ಮಾಡುವುದು ಮತ್ತು ಆರ್ಥಿಕ ಅಸಮಾನತೆಗಳನ್ನು ಕಡಿಮೆ ಮಾಡುವುದು ಹೇಗೆ ಎಂಬುವುದರ ಬಗ್ಗೆ ಕೆಲಸ ಮಾಡಬೇಕು” ಎಂದು ಚಂದ್ರಬಾಬು ನಾಯ್ಡು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಜಾತಿಗಣತಿ ಮಾಡಬೇಕು

ಇದನ್ನೂಓದಿ: ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

“ಜಾತಿ ಗಣತಿಗಾಗಿ ಸಾರ್ವಜನಿಕ ಬೇಡಿಕೆಯಿದ್ದು, ಅದನ್ನು ನೀವು ಗೌರವಿಸಬೇಕು. ಅದರಲ್ಲಿ ಎರಡನೆ ಮಾತಿಲ್ಲ. ಅದೇ ವೇಳೆ ಬಡತನ ದೊಡ್ಡ ಸಮಸ್ಯೆಯಾಗಿದೆ. ನೀವು ದುರ್ಬಲ ವರ್ಗದವರಾಗಿದ್ದರೂ, ನಿಮ್ಮಲ್ಲಿ ಹಣವಿದ್ದರೆ ಸಮಾಜವು ನಿಮ್ಮನ್ನು ಗೌರವಿಸುತ್ತದೆ. ನೀವು ಮೇಲ್ಜಾತಿಯವರಾಗಿದ್ದರೆ ಮತ್ತು ಹಣವಿಲ್ಲದಿದ್ದರೆ ಯಾರೂ ನಿಮ್ಮನ್ನು ಗೌರವಿಸುವುದಿಲ್ಲ. ಸಂಪತ್ತು ದೊಡ್ಡ ವಿಚಾರವಾಗಿದ್ದು, ಅಲ್ಲಿ ನೀವು ಸಮತೋಲನವನ್ನು ಕಂಡುಹಿಡಿಯಬಹುದು” ಎಂದು ಅವರು ಹೇಳಿದ್ದಾರೆ.

ಆಧಾರ್ ಡೇಟಾವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಜನಗಣತಿ ನಡೆಸುವಂತೆ ನಾಯ್ಡು ಸಲಹೆ ನೀಡಿದ್ದಾರೆ. “ಹೆಚ್ಚು ಹಿಂದುಳಿದ ಜಾತಿಗಳ ಮೇಲೆ ವಿಶೇಷ ಗಮನಹರಿಸಲು, ಆಧಾರ್ ಚೌಕಟ್ಟಿನ ಅಡಿಯಲ್ಲಿ ಕುಟುಂಬದ ಜಾತಿ, ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಅವರ ಕೌಶಲ್ಯದ ಮಟ್ಟವನ್ನು ಸೇರಿಸಲು” ಅವರು ಪ್ರಸ್ತಾಪಿಸಿದ್ದಾರೆ.

ಬಡತನ ನಿರ್ಮೂಲನೆಗೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಸಮುದಾಯಗಳ ಆರ್ಥಿಕ ಸ್ಥಿತಿಯ ಬಗ್ಗೆ ಡೇಟಾವನ್ನು ಹೊಂದಿರುವುದು ಅಗತ್ಯವೆಂದು ನಾಯ್ಡು ಅವರು ಜಾತಿ ಗಣತಿಯನ್ನು ಆಗಸ್ಟ್ 2023 ರಲ್ಲಿ ಬೆಂಬಲಿಸಿದ್ದರು. 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಭರವಸೆ ನೀಡಿತ್ತು.

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

2021 ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯಿಂದ “ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಹೊರಗಿಡುವುದು” ಪ್ರಜ್ಞಾಪೂರ್ವಕ ನೀತಿ ನಿರ್ಧಾರವಾಗಿದೆ ಎಂದು ಹೇಳಿತ್ತು. ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯ ಮಾಹಿತಿ ಸಂಗ್ರಹಿಸುವುದು ಆಡಳಿತಾತ್ಮಕವಾಗಿ ಕಷ್ಟಕರವಾಗಿದ್ದು, ನಿಖರತೆಯ ಕೊರತೆಯಿದೆ ಎಂದು ಅದು ಹೇಳಿತ್ತು.

ಅದಾಗ್ಯೂ, ರಾಷ್ಟ್ರವ್ಯಾಪಿ ಜಾತಿ ಗಣತಿಯ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆ, ಬಿಜೆಪಿ ಯೂಟರ್ನ್‌ ತೆಗೆದುಕೊಂಡಿತ್ತು. ನವೆಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸಿಲ್ಲ, ವ್ಯಾಪಕ ಸಮಾಲೋಚನೆಯ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಏಪ್ರಿಲ್ 12 ರಂದು ತಮ್ಮ ಪಕ್ಷ ಜಾತಿ ಗಣತಿಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜನತಾ ದಳ (ಯುನೈಟೆಡ್) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಕೂಡಾ ಜಾತಿ ಗಣತಿಗಾಗಿ ಪ್ರತಿಪಾದಿಸುತ್ತಿವೆ. ಸೆಪ್ಟೆಂಬರ್‌ನಲ್ಲಿ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಕೂಡಾ ಜಾತಿಗಣತಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

ವಿಡಿಯೊ ನೋಡಿ: ಶೃಂಗೇರಿಯ ಜನ ನಾವು, ನೀವಂದುಕೊಂಡಂತೆ ಸಿರಿವಂತರಲ್ಲ.. ನಮಗಿನ್ನೂ ಸಿಕ್ಕಿಲ್ಲ ಹಕ್ಕುಪತ್ರ – ವಿನೀತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...