Homeಮುಖಪುಟ'ಜಾತಿಗಣತಿ ಮಾಡಬೇಕು, ಯಾಕೆಂದರೆ...': ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

- Advertisement -
- Advertisement -

ಕೇಂದ್ರದ ಎನ್‌ಡಿಎ ಸರ್ಕಾರದ ಮೈತ್ರಿ ಪಕ್ಷವಾದ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು “ಜನರ ಭಾವನೆಗಳನ್ನು ಗೌರವಿಸಲು” ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ತಮ್ಮ ದೃಷ್ಟಿಕೋನದಲ್ಲಿ ಬಡತನವು “ದೊಡ್ಡ ಸಮಸ್ಯೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕು ಎಂಬುವುದು ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.ಜಾತಿಗಣತಿ ಮಾಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾತಿ ಗಣತಿ, ಹೌದು, ಅದನ್ನು ಮಾಡಬೇಕಾಗಿದೆ. ಅಂತದ್ದೊಂದು ಭಾವನೆ ಇದೆ, ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಜಾತಿ ಗಣತಿ ಮಾಡಿ, ನೀವು ಆರ್ಥಿಕ ವಿಶ್ಲೇಷಣೆ ಮಾಡಿ ಅಥವಾ ನೀವು ಕೌಶಲ್ಯ ಗಣತಿ ಮಾಡಿ. ಈ ಎಲ್ಲಾ ವಿಷಯಗಳನ್ನು ಹೇಗೆ ಮಾಡುವುದು ಮತ್ತು ಆರ್ಥಿಕ ಅಸಮಾನತೆಗಳನ್ನು ಕಡಿಮೆ ಮಾಡುವುದು ಹೇಗೆ ಎಂಬುವುದರ ಬಗ್ಗೆ ಕೆಲಸ ಮಾಡಬೇಕು” ಎಂದು ಚಂದ್ರಬಾಬು ನಾಯ್ಡು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಜಾತಿಗಣತಿ ಮಾಡಬೇಕು

ಇದನ್ನೂಓದಿ: ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

“ಜಾತಿ ಗಣತಿಗಾಗಿ ಸಾರ್ವಜನಿಕ ಬೇಡಿಕೆಯಿದ್ದು, ಅದನ್ನು ನೀವು ಗೌರವಿಸಬೇಕು. ಅದರಲ್ಲಿ ಎರಡನೆ ಮಾತಿಲ್ಲ. ಅದೇ ವೇಳೆ ಬಡತನ ದೊಡ್ಡ ಸಮಸ್ಯೆಯಾಗಿದೆ. ನೀವು ದುರ್ಬಲ ವರ್ಗದವರಾಗಿದ್ದರೂ, ನಿಮ್ಮಲ್ಲಿ ಹಣವಿದ್ದರೆ ಸಮಾಜವು ನಿಮ್ಮನ್ನು ಗೌರವಿಸುತ್ತದೆ. ನೀವು ಮೇಲ್ಜಾತಿಯವರಾಗಿದ್ದರೆ ಮತ್ತು ಹಣವಿಲ್ಲದಿದ್ದರೆ ಯಾರೂ ನಿಮ್ಮನ್ನು ಗೌರವಿಸುವುದಿಲ್ಲ. ಸಂಪತ್ತು ದೊಡ್ಡ ವಿಚಾರವಾಗಿದ್ದು, ಅಲ್ಲಿ ನೀವು ಸಮತೋಲನವನ್ನು ಕಂಡುಹಿಡಿಯಬಹುದು” ಎಂದು ಅವರು ಹೇಳಿದ್ದಾರೆ.

ಆಧಾರ್ ಡೇಟಾವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಜನಗಣತಿ ನಡೆಸುವಂತೆ ನಾಯ್ಡು ಸಲಹೆ ನೀಡಿದ್ದಾರೆ. “ಹೆಚ್ಚು ಹಿಂದುಳಿದ ಜಾತಿಗಳ ಮೇಲೆ ವಿಶೇಷ ಗಮನಹರಿಸಲು, ಆಧಾರ್ ಚೌಕಟ್ಟಿನ ಅಡಿಯಲ್ಲಿ ಕುಟುಂಬದ ಜಾತಿ, ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಅವರ ಕೌಶಲ್ಯದ ಮಟ್ಟವನ್ನು ಸೇರಿಸಲು” ಅವರು ಪ್ರಸ್ತಾಪಿಸಿದ್ದಾರೆ.

ಬಡತನ ನಿರ್ಮೂಲನೆಗೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಸಮುದಾಯಗಳ ಆರ್ಥಿಕ ಸ್ಥಿತಿಯ ಬಗ್ಗೆ ಡೇಟಾವನ್ನು ಹೊಂದಿರುವುದು ಅಗತ್ಯವೆಂದು ನಾಯ್ಡು ಅವರು ಜಾತಿ ಗಣತಿಯನ್ನು ಆಗಸ್ಟ್ 2023 ರಲ್ಲಿ ಬೆಂಬಲಿಸಿದ್ದರು. 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಭರವಸೆ ನೀಡಿತ್ತು.

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

2021 ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯಿಂದ “ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಹೊರಗಿಡುವುದು” ಪ್ರಜ್ಞಾಪೂರ್ವಕ ನೀತಿ ನಿರ್ಧಾರವಾಗಿದೆ ಎಂದು ಹೇಳಿತ್ತು. ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯ ಮಾಹಿತಿ ಸಂಗ್ರಹಿಸುವುದು ಆಡಳಿತಾತ್ಮಕವಾಗಿ ಕಷ್ಟಕರವಾಗಿದ್ದು, ನಿಖರತೆಯ ಕೊರತೆಯಿದೆ ಎಂದು ಅದು ಹೇಳಿತ್ತು.

ಅದಾಗ್ಯೂ, ರಾಷ್ಟ್ರವ್ಯಾಪಿ ಜಾತಿ ಗಣತಿಯ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆ, ಬಿಜೆಪಿ ಯೂಟರ್ನ್‌ ತೆಗೆದುಕೊಂಡಿತ್ತು. ನವೆಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸಿಲ್ಲ, ವ್ಯಾಪಕ ಸಮಾಲೋಚನೆಯ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಏಪ್ರಿಲ್ 12 ರಂದು ತಮ್ಮ ಪಕ್ಷ ಜಾತಿ ಗಣತಿಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜನತಾ ದಳ (ಯುನೈಟೆಡ್) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಕೂಡಾ ಜಾತಿ ಗಣತಿಗಾಗಿ ಪ್ರತಿಪಾದಿಸುತ್ತಿವೆ. ಸೆಪ್ಟೆಂಬರ್‌ನಲ್ಲಿ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಕೂಡಾ ಜಾತಿಗಣತಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

ವಿಡಿಯೊ ನೋಡಿ: ಶೃಂಗೇರಿಯ ಜನ ನಾವು, ನೀವಂದುಕೊಂಡಂತೆ ಸಿರಿವಂತರಲ್ಲ.. ನಮಗಿನ್ನೂ ಸಿಕ್ಕಿಲ್ಲ ಹಕ್ಕುಪತ್ರ – ವಿನೀತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...