Homeಮುಖಪುಟ'ಜಾತಿಗಣತಿ ಮಾಡಬೇಕು, ಯಾಕೆಂದರೆ...': ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

- Advertisement -
- Advertisement -

ಕೇಂದ್ರದ ಎನ್‌ಡಿಎ ಸರ್ಕಾರದ ಮೈತ್ರಿ ಪಕ್ಷವಾದ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು “ಜನರ ಭಾವನೆಗಳನ್ನು ಗೌರವಿಸಲು” ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ತಮ್ಮ ದೃಷ್ಟಿಕೋನದಲ್ಲಿ ಬಡತನವು “ದೊಡ್ಡ ಸಮಸ್ಯೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕು ಎಂಬುವುದು ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.ಜಾತಿಗಣತಿ ಮಾಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾತಿ ಗಣತಿ, ಹೌದು, ಅದನ್ನು ಮಾಡಬೇಕಾಗಿದೆ. ಅಂತದ್ದೊಂದು ಭಾವನೆ ಇದೆ, ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಜಾತಿ ಗಣತಿ ಮಾಡಿ, ನೀವು ಆರ್ಥಿಕ ವಿಶ್ಲೇಷಣೆ ಮಾಡಿ ಅಥವಾ ನೀವು ಕೌಶಲ್ಯ ಗಣತಿ ಮಾಡಿ. ಈ ಎಲ್ಲಾ ವಿಷಯಗಳನ್ನು ಹೇಗೆ ಮಾಡುವುದು ಮತ್ತು ಆರ್ಥಿಕ ಅಸಮಾನತೆಗಳನ್ನು ಕಡಿಮೆ ಮಾಡುವುದು ಹೇಗೆ ಎಂಬುವುದರ ಬಗ್ಗೆ ಕೆಲಸ ಮಾಡಬೇಕು” ಎಂದು ಚಂದ್ರಬಾಬು ನಾಯ್ಡು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಜಾತಿಗಣತಿ ಮಾಡಬೇಕು

ಇದನ್ನೂಓದಿ: ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

“ಜಾತಿ ಗಣತಿಗಾಗಿ ಸಾರ್ವಜನಿಕ ಬೇಡಿಕೆಯಿದ್ದು, ಅದನ್ನು ನೀವು ಗೌರವಿಸಬೇಕು. ಅದರಲ್ಲಿ ಎರಡನೆ ಮಾತಿಲ್ಲ. ಅದೇ ವೇಳೆ ಬಡತನ ದೊಡ್ಡ ಸಮಸ್ಯೆಯಾಗಿದೆ. ನೀವು ದುರ್ಬಲ ವರ್ಗದವರಾಗಿದ್ದರೂ, ನಿಮ್ಮಲ್ಲಿ ಹಣವಿದ್ದರೆ ಸಮಾಜವು ನಿಮ್ಮನ್ನು ಗೌರವಿಸುತ್ತದೆ. ನೀವು ಮೇಲ್ಜಾತಿಯವರಾಗಿದ್ದರೆ ಮತ್ತು ಹಣವಿಲ್ಲದಿದ್ದರೆ ಯಾರೂ ನಿಮ್ಮನ್ನು ಗೌರವಿಸುವುದಿಲ್ಲ. ಸಂಪತ್ತು ದೊಡ್ಡ ವಿಚಾರವಾಗಿದ್ದು, ಅಲ್ಲಿ ನೀವು ಸಮತೋಲನವನ್ನು ಕಂಡುಹಿಡಿಯಬಹುದು” ಎಂದು ಅವರು ಹೇಳಿದ್ದಾರೆ.

ಆಧಾರ್ ಡೇಟಾವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಜನಗಣತಿ ನಡೆಸುವಂತೆ ನಾಯ್ಡು ಸಲಹೆ ನೀಡಿದ್ದಾರೆ. “ಹೆಚ್ಚು ಹಿಂದುಳಿದ ಜಾತಿಗಳ ಮೇಲೆ ವಿಶೇಷ ಗಮನಹರಿಸಲು, ಆಧಾರ್ ಚೌಕಟ್ಟಿನ ಅಡಿಯಲ್ಲಿ ಕುಟುಂಬದ ಜಾತಿ, ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಅವರ ಕೌಶಲ್ಯದ ಮಟ್ಟವನ್ನು ಸೇರಿಸಲು” ಅವರು ಪ್ರಸ್ತಾಪಿಸಿದ್ದಾರೆ.

ಬಡತನ ನಿರ್ಮೂಲನೆಗೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಸಮುದಾಯಗಳ ಆರ್ಥಿಕ ಸ್ಥಿತಿಯ ಬಗ್ಗೆ ಡೇಟಾವನ್ನು ಹೊಂದಿರುವುದು ಅಗತ್ಯವೆಂದು ನಾಯ್ಡು ಅವರು ಜಾತಿ ಗಣತಿಯನ್ನು ಆಗಸ್ಟ್ 2023 ರಲ್ಲಿ ಬೆಂಬಲಿಸಿದ್ದರು. 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಭರವಸೆ ನೀಡಿತ್ತು.

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

2021 ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯಿಂದ “ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಹೊರಗಿಡುವುದು” ಪ್ರಜ್ಞಾಪೂರ್ವಕ ನೀತಿ ನಿರ್ಧಾರವಾಗಿದೆ ಎಂದು ಹೇಳಿತ್ತು. ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯ ಮಾಹಿತಿ ಸಂಗ್ರಹಿಸುವುದು ಆಡಳಿತಾತ್ಮಕವಾಗಿ ಕಷ್ಟಕರವಾಗಿದ್ದು, ನಿಖರತೆಯ ಕೊರತೆಯಿದೆ ಎಂದು ಅದು ಹೇಳಿತ್ತು.

ಅದಾಗ್ಯೂ, ರಾಷ್ಟ್ರವ್ಯಾಪಿ ಜಾತಿ ಗಣತಿಯ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆ, ಬಿಜೆಪಿ ಯೂಟರ್ನ್‌ ತೆಗೆದುಕೊಂಡಿತ್ತು. ನವೆಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸಿಲ್ಲ, ವ್ಯಾಪಕ ಸಮಾಲೋಚನೆಯ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಏಪ್ರಿಲ್ 12 ರಂದು ತಮ್ಮ ಪಕ್ಷ ಜಾತಿ ಗಣತಿಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜನತಾ ದಳ (ಯುನೈಟೆಡ್) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಕೂಡಾ ಜಾತಿ ಗಣತಿಗಾಗಿ ಪ್ರತಿಪಾದಿಸುತ್ತಿವೆ. ಸೆಪ್ಟೆಂಬರ್‌ನಲ್ಲಿ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಕೂಡಾ ಜಾತಿಗಣತಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

ವಿಡಿಯೊ ನೋಡಿ: ಶೃಂಗೇರಿಯ ಜನ ನಾವು, ನೀವಂದುಕೊಂಡಂತೆ ಸಿರಿವಂತರಲ್ಲ.. ನಮಗಿನ್ನೂ ಸಿಕ್ಕಿಲ್ಲ ಹಕ್ಕುಪತ್ರ – ವಿನೀತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...