Homeಮುಖಪುಟ'ಜಾತಿಗಣತಿ ಮಾಡಬೇಕು, ಯಾಕೆಂದರೆ...': ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

- Advertisement -
- Advertisement -

ಕೇಂದ್ರದ ಎನ್‌ಡಿಎ ಸರ್ಕಾರದ ಮೈತ್ರಿ ಪಕ್ಷವಾದ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು “ಜನರ ಭಾವನೆಗಳನ್ನು ಗೌರವಿಸಲು” ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ತಮ್ಮ ದೃಷ್ಟಿಕೋನದಲ್ಲಿ ಬಡತನವು “ದೊಡ್ಡ ಸಮಸ್ಯೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕು ಎಂಬುವುದು ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.ಜಾತಿಗಣತಿ ಮಾಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾತಿ ಗಣತಿ, ಹೌದು, ಅದನ್ನು ಮಾಡಬೇಕಾಗಿದೆ. ಅಂತದ್ದೊಂದು ಭಾವನೆ ಇದೆ, ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಜಾತಿ ಗಣತಿ ಮಾಡಿ, ನೀವು ಆರ್ಥಿಕ ವಿಶ್ಲೇಷಣೆ ಮಾಡಿ ಅಥವಾ ನೀವು ಕೌಶಲ್ಯ ಗಣತಿ ಮಾಡಿ. ಈ ಎಲ್ಲಾ ವಿಷಯಗಳನ್ನು ಹೇಗೆ ಮಾಡುವುದು ಮತ್ತು ಆರ್ಥಿಕ ಅಸಮಾನತೆಗಳನ್ನು ಕಡಿಮೆ ಮಾಡುವುದು ಹೇಗೆ ಎಂಬುವುದರ ಬಗ್ಗೆ ಕೆಲಸ ಮಾಡಬೇಕು” ಎಂದು ಚಂದ್ರಬಾಬು ನಾಯ್ಡು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಜಾತಿಗಣತಿ ಮಾಡಬೇಕು

ಇದನ್ನೂಓದಿ: ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

“ಜಾತಿ ಗಣತಿಗಾಗಿ ಸಾರ್ವಜನಿಕ ಬೇಡಿಕೆಯಿದ್ದು, ಅದನ್ನು ನೀವು ಗೌರವಿಸಬೇಕು. ಅದರಲ್ಲಿ ಎರಡನೆ ಮಾತಿಲ್ಲ. ಅದೇ ವೇಳೆ ಬಡತನ ದೊಡ್ಡ ಸಮಸ್ಯೆಯಾಗಿದೆ. ನೀವು ದುರ್ಬಲ ವರ್ಗದವರಾಗಿದ್ದರೂ, ನಿಮ್ಮಲ್ಲಿ ಹಣವಿದ್ದರೆ ಸಮಾಜವು ನಿಮ್ಮನ್ನು ಗೌರವಿಸುತ್ತದೆ. ನೀವು ಮೇಲ್ಜಾತಿಯವರಾಗಿದ್ದರೆ ಮತ್ತು ಹಣವಿಲ್ಲದಿದ್ದರೆ ಯಾರೂ ನಿಮ್ಮನ್ನು ಗೌರವಿಸುವುದಿಲ್ಲ. ಸಂಪತ್ತು ದೊಡ್ಡ ವಿಚಾರವಾಗಿದ್ದು, ಅಲ್ಲಿ ನೀವು ಸಮತೋಲನವನ್ನು ಕಂಡುಹಿಡಿಯಬಹುದು” ಎಂದು ಅವರು ಹೇಳಿದ್ದಾರೆ.

ಆಧಾರ್ ಡೇಟಾವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಜನಗಣತಿ ನಡೆಸುವಂತೆ ನಾಯ್ಡು ಸಲಹೆ ನೀಡಿದ್ದಾರೆ. “ಹೆಚ್ಚು ಹಿಂದುಳಿದ ಜಾತಿಗಳ ಮೇಲೆ ವಿಶೇಷ ಗಮನಹರಿಸಲು, ಆಧಾರ್ ಚೌಕಟ್ಟಿನ ಅಡಿಯಲ್ಲಿ ಕುಟುಂಬದ ಜಾತಿ, ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಅವರ ಕೌಶಲ್ಯದ ಮಟ್ಟವನ್ನು ಸೇರಿಸಲು” ಅವರು ಪ್ರಸ್ತಾಪಿಸಿದ್ದಾರೆ.

ಬಡತನ ನಿರ್ಮೂಲನೆಗೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಸಮುದಾಯಗಳ ಆರ್ಥಿಕ ಸ್ಥಿತಿಯ ಬಗ್ಗೆ ಡೇಟಾವನ್ನು ಹೊಂದಿರುವುದು ಅಗತ್ಯವೆಂದು ನಾಯ್ಡು ಅವರು ಜಾತಿ ಗಣತಿಯನ್ನು ಆಗಸ್ಟ್ 2023 ರಲ್ಲಿ ಬೆಂಬಲಿಸಿದ್ದರು. 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಭರವಸೆ ನೀಡಿತ್ತು.

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

2021 ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯಿಂದ “ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಹೊರಗಿಡುವುದು” ಪ್ರಜ್ಞಾಪೂರ್ವಕ ನೀತಿ ನಿರ್ಧಾರವಾಗಿದೆ ಎಂದು ಹೇಳಿತ್ತು. ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯ ಮಾಹಿತಿ ಸಂಗ್ರಹಿಸುವುದು ಆಡಳಿತಾತ್ಮಕವಾಗಿ ಕಷ್ಟಕರವಾಗಿದ್ದು, ನಿಖರತೆಯ ಕೊರತೆಯಿದೆ ಎಂದು ಅದು ಹೇಳಿತ್ತು.

ಅದಾಗ್ಯೂ, ರಾಷ್ಟ್ರವ್ಯಾಪಿ ಜಾತಿ ಗಣತಿಯ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆ, ಬಿಜೆಪಿ ಯೂಟರ್ನ್‌ ತೆಗೆದುಕೊಂಡಿತ್ತು. ನವೆಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸಿಲ್ಲ, ವ್ಯಾಪಕ ಸಮಾಲೋಚನೆಯ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಏಪ್ರಿಲ್ 12 ರಂದು ತಮ್ಮ ಪಕ್ಷ ಜಾತಿ ಗಣತಿಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜನತಾ ದಳ (ಯುನೈಟೆಡ್) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಕೂಡಾ ಜಾತಿ ಗಣತಿಗಾಗಿ ಪ್ರತಿಪಾದಿಸುತ್ತಿವೆ. ಸೆಪ್ಟೆಂಬರ್‌ನಲ್ಲಿ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಕೂಡಾ ಜಾತಿಗಣತಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

ವಿಡಿಯೊ ನೋಡಿ: ಶೃಂಗೇರಿಯ ಜನ ನಾವು, ನೀವಂದುಕೊಂಡಂತೆ ಸಿರಿವಂತರಲ್ಲ.. ನಮಗಿನ್ನೂ ಸಿಕ್ಕಿಲ್ಲ ಹಕ್ಕುಪತ್ರ – ವಿನೀತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...