Homeಮುಖಪುಟಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

ಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ರಾಜಕೀಯ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿಯು ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ. ಅದಾಗ್ಯೂ, ಈ ಕಾರ್ಯ ಯಾವಾಗ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಜಾತಿ ಗಣತಿಯ ಬೇಡಿಕೆಯನ್ನು “ಕೇವಲ ರಾಜಕೀಯ ಸಾಧನವಾಗಿ” ಬಳಸಿಕೊಂಡಿವೆ ಎಂದು ಕೇಂದ್ರ ಸಚಿವ ಇದೇ ವೇಳೆ ಆರೋಪಿಸಿದ್ದಾರೆ. ಮುಂದಿನ ಜನಗಣತಿಯೊಂದಿಗೆ

“ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದವು. ಸ್ವಾತಂತ್ರ್ಯದ ನಂತರ ನಡೆದ ಎಲ್ಲಾ ಜನಗಣತಿ ಕಾರ್ಯಾಚರಣೆಗಳಲ್ಲಿ ಜಾತಿಯನ್ನು ಸೇರಿಸಲಾಗಿಲ್ಲ.” ಎಂದು ಸಚಿವ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಜಾತಿ ಎಣಿಕೆ ಮಾಡಲು 2011 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯು ಒಂದು ಸಮೀಕ್ಷೆಯಾಗಿತ್ತು, ಅದು ಜನಗಣತಿಯಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯಲ್ಲಿ ಜಾತಿಗಳಿಗೆ ಸಂಬಂಧಿಸಿದ ಡೇಟಾವನ್ನು ಸಾರ್ವಜನಿಕಗೊಳಿಸಲಾಗಿಲ್ಲ.

ವಿರೋಧ ಪಕ್ಷಗಳು ಹಲವು ಸಮಯದಿಂದ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಒತ್ತಾಯಿಸುತ್ತಿವೆ. ಈ ಗಣತಿಯು ದೇಶದ ಇತರ ಹಿಂದುಳಿದ ವರ್ಗಗಳು ಮತ್ತು ಇತರ ಜಾತಿಗಳ ನಿಜವಾದ ಜನಸಂಖ್ಯೆಯನ್ನು ಗುರುತಿಸಲು ಸಹಾಯ ಮಾಡುತ್ತದೆ, ಜೊತೆಗೆ ವಿಸ್ತೃತ ಮೀಸಲಾತಿಯಂತಹ ನೀತಿಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಅವರು ವಾದಿಸುತ್ತಾರೆ.

ಜನಗಣತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೆಲವು ರಾಜ್ಯಗಳು ಜಾತಿಗಳನ್ನು ಎಣಿಸಲು ನಡೆಸಿದ ಪ್ರಕ್ರಿಯೆಗಳು ಸಮೀಕ್ಷೆಗಳಾಗಿದ್ದವು ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

“ಕೆಲವು ರಾಜ್ಯಗಳು ಇದನ್ನು ಚೆನ್ನಾಗಿ ಮಾಡಿವೆ, ಆದರೆ ಇನ್ನು ಕೆಲವು ರಾಜ್ಯಗಳು ಅಂತಹ ಸಮೀಕ್ಷೆಗಳನ್ನು ಸಂಪೂರ್ಣವಾಗಿ ರಾಜಕೀಯ ದೃಷ್ಟಿಕೋನದಿಂದ ಪಾರದರ್ಶಕವಲ್ಲದ ರೀತಿಯಲ್ಲಿ ನಡೆಸಿವೆ. ಇಂತಹ ಸಮೀಕ್ಷೆಗಳು ರಾಜ್ಯದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ” ಎಂದು ಅವರು ಹೇಳಿದ್ದಾರೆ.

ಬಿಹಾರ ಮತ್ತು ತೆಲಂಗಾಣ ತಮ್ಮ ಜಾತಿ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿವೆ. ಜಾರ್ಖಂಡ್ 2025-26ರ ಹಣಕಾಸು ವರ್ಷದಲ್ಲಿ ತನ್ನ ಜಾತಿ ಸಮೀಕ್ಷೆಯನ್ನು ನಡೆಸುವುದಾಗಿ ಹೇಳಿದೆ.

“ಈ ಎಲ್ಲಾ ಸಂಗತಿಗಳನ್ನು ಪರಿಗಣಿಸಿ ಮತ್ತು ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು, ಜಾತಿ ಎಣಿಕೆಯನ್ನು ಸಮೀಕ್ಷೆಗಳ ಬದಲಿಗೆ ಜನಗಣತಿಯಲ್ಲಿ ಪಾರದರ್ಶಕವಾಗಿ ಸೇರಿಸಬೇಕು. ಇದು ರಾಷ್ಟ್ರವು ಪ್ರಗತಿಯನ್ನು ಮುಂದುವರಿಸುವಾಗ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ರಚನೆಯನ್ನು ಬಲಪಡಿಸುತ್ತದೆ.” ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಮತ್ತು ರಾಮದಾಸ್ ಅಠಾವಳೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಲವಾರು ಮಿತ್ರಪಕ್ಷಗಳು ಜಾತಿ ಜನಗಣತಿಯ ಬೇಡಿಕೆಗಳನ್ನು ಬೆಂಬಲಿಸಿವೆ. ಮುಂದಿನ ಜನಗಣತಿಯೊಂದಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...