Homeಮುಖಪುಟಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

ಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ರಾಜಕೀಯ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿಯು ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ. ಅದಾಗ್ಯೂ, ಈ ಕಾರ್ಯ ಯಾವಾಗ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಜಾತಿ ಗಣತಿಯ ಬೇಡಿಕೆಯನ್ನು “ಕೇವಲ ರಾಜಕೀಯ ಸಾಧನವಾಗಿ” ಬಳಸಿಕೊಂಡಿವೆ ಎಂದು ಕೇಂದ್ರ ಸಚಿವ ಇದೇ ವೇಳೆ ಆರೋಪಿಸಿದ್ದಾರೆ. ಮುಂದಿನ ಜನಗಣತಿಯೊಂದಿಗೆ

“ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದವು. ಸ್ವಾತಂತ್ರ್ಯದ ನಂತರ ನಡೆದ ಎಲ್ಲಾ ಜನಗಣತಿ ಕಾರ್ಯಾಚರಣೆಗಳಲ್ಲಿ ಜಾತಿಯನ್ನು ಸೇರಿಸಲಾಗಿಲ್ಲ.” ಎಂದು ಸಚಿವ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಜಾತಿ ಎಣಿಕೆ ಮಾಡಲು 2011 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯು ಒಂದು ಸಮೀಕ್ಷೆಯಾಗಿತ್ತು, ಅದು ಜನಗಣತಿಯಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯಲ್ಲಿ ಜಾತಿಗಳಿಗೆ ಸಂಬಂಧಿಸಿದ ಡೇಟಾವನ್ನು ಸಾರ್ವಜನಿಕಗೊಳಿಸಲಾಗಿಲ್ಲ.

ವಿರೋಧ ಪಕ್ಷಗಳು ಹಲವು ಸಮಯದಿಂದ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಒತ್ತಾಯಿಸುತ್ತಿವೆ. ಈ ಗಣತಿಯು ದೇಶದ ಇತರ ಹಿಂದುಳಿದ ವರ್ಗಗಳು ಮತ್ತು ಇತರ ಜಾತಿಗಳ ನಿಜವಾದ ಜನಸಂಖ್ಯೆಯನ್ನು ಗುರುತಿಸಲು ಸಹಾಯ ಮಾಡುತ್ತದೆ, ಜೊತೆಗೆ ವಿಸ್ತೃತ ಮೀಸಲಾತಿಯಂತಹ ನೀತಿಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಅವರು ವಾದಿಸುತ್ತಾರೆ.

ಜನಗಣತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೆಲವು ರಾಜ್ಯಗಳು ಜಾತಿಗಳನ್ನು ಎಣಿಸಲು ನಡೆಸಿದ ಪ್ರಕ್ರಿಯೆಗಳು ಸಮೀಕ್ಷೆಗಳಾಗಿದ್ದವು ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

“ಕೆಲವು ರಾಜ್ಯಗಳು ಇದನ್ನು ಚೆನ್ನಾಗಿ ಮಾಡಿವೆ, ಆದರೆ ಇನ್ನು ಕೆಲವು ರಾಜ್ಯಗಳು ಅಂತಹ ಸಮೀಕ್ಷೆಗಳನ್ನು ಸಂಪೂರ್ಣವಾಗಿ ರಾಜಕೀಯ ದೃಷ್ಟಿಕೋನದಿಂದ ಪಾರದರ್ಶಕವಲ್ಲದ ರೀತಿಯಲ್ಲಿ ನಡೆಸಿವೆ. ಇಂತಹ ಸಮೀಕ್ಷೆಗಳು ರಾಜ್ಯದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ” ಎಂದು ಅವರು ಹೇಳಿದ್ದಾರೆ.

ಬಿಹಾರ ಮತ್ತು ತೆಲಂಗಾಣ ತಮ್ಮ ಜಾತಿ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿವೆ. ಜಾರ್ಖಂಡ್ 2025-26ರ ಹಣಕಾಸು ವರ್ಷದಲ್ಲಿ ತನ್ನ ಜಾತಿ ಸಮೀಕ್ಷೆಯನ್ನು ನಡೆಸುವುದಾಗಿ ಹೇಳಿದೆ.

“ಈ ಎಲ್ಲಾ ಸಂಗತಿಗಳನ್ನು ಪರಿಗಣಿಸಿ ಮತ್ತು ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು, ಜಾತಿ ಎಣಿಕೆಯನ್ನು ಸಮೀಕ್ಷೆಗಳ ಬದಲಿಗೆ ಜನಗಣತಿಯಲ್ಲಿ ಪಾರದರ್ಶಕವಾಗಿ ಸೇರಿಸಬೇಕು. ಇದು ರಾಷ್ಟ್ರವು ಪ್ರಗತಿಯನ್ನು ಮುಂದುವರಿಸುವಾಗ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ರಚನೆಯನ್ನು ಬಲಪಡಿಸುತ್ತದೆ.” ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಮತ್ತು ರಾಮದಾಸ್ ಅಠಾವಳೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಲವಾರು ಮಿತ್ರಪಕ್ಷಗಳು ಜಾತಿ ಜನಗಣತಿಯ ಬೇಡಿಕೆಗಳನ್ನು ಬೆಂಬಲಿಸಿವೆ. ಮುಂದಿನ ಜನಗಣತಿಯೊಂದಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...