Homeಮುಖಪುಟಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

ಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ರಾಜಕೀಯ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿಯು ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ. ಅದಾಗ್ಯೂ, ಈ ಕಾರ್ಯ ಯಾವಾಗ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಜಾತಿ ಗಣತಿಯ ಬೇಡಿಕೆಯನ್ನು “ಕೇವಲ ರಾಜಕೀಯ ಸಾಧನವಾಗಿ” ಬಳಸಿಕೊಂಡಿವೆ ಎಂದು ಕೇಂದ್ರ ಸಚಿವ ಇದೇ ವೇಳೆ ಆರೋಪಿಸಿದ್ದಾರೆ. ಮುಂದಿನ ಜನಗಣತಿಯೊಂದಿಗೆ

“ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದವು. ಸ್ವಾತಂತ್ರ್ಯದ ನಂತರ ನಡೆದ ಎಲ್ಲಾ ಜನಗಣತಿ ಕಾರ್ಯಾಚರಣೆಗಳಲ್ಲಿ ಜಾತಿಯನ್ನು ಸೇರಿಸಲಾಗಿಲ್ಲ.” ಎಂದು ಸಚಿವ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಜಾತಿ ಎಣಿಕೆ ಮಾಡಲು 2011 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯು ಒಂದು ಸಮೀಕ್ಷೆಯಾಗಿತ್ತು, ಅದು ಜನಗಣತಿಯಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯಲ್ಲಿ ಜಾತಿಗಳಿಗೆ ಸಂಬಂಧಿಸಿದ ಡೇಟಾವನ್ನು ಸಾರ್ವಜನಿಕಗೊಳಿಸಲಾಗಿಲ್ಲ.

ವಿರೋಧ ಪಕ್ಷಗಳು ಹಲವು ಸಮಯದಿಂದ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಒತ್ತಾಯಿಸುತ್ತಿವೆ. ಈ ಗಣತಿಯು ದೇಶದ ಇತರ ಹಿಂದುಳಿದ ವರ್ಗಗಳು ಮತ್ತು ಇತರ ಜಾತಿಗಳ ನಿಜವಾದ ಜನಸಂಖ್ಯೆಯನ್ನು ಗುರುತಿಸಲು ಸಹಾಯ ಮಾಡುತ್ತದೆ, ಜೊತೆಗೆ ವಿಸ್ತೃತ ಮೀಸಲಾತಿಯಂತಹ ನೀತಿಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಅವರು ವಾದಿಸುತ್ತಾರೆ.

ಜನಗಣತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೆಲವು ರಾಜ್ಯಗಳು ಜಾತಿಗಳನ್ನು ಎಣಿಸಲು ನಡೆಸಿದ ಪ್ರಕ್ರಿಯೆಗಳು ಸಮೀಕ್ಷೆಗಳಾಗಿದ್ದವು ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

“ಕೆಲವು ರಾಜ್ಯಗಳು ಇದನ್ನು ಚೆನ್ನಾಗಿ ಮಾಡಿವೆ, ಆದರೆ ಇನ್ನು ಕೆಲವು ರಾಜ್ಯಗಳು ಅಂತಹ ಸಮೀಕ್ಷೆಗಳನ್ನು ಸಂಪೂರ್ಣವಾಗಿ ರಾಜಕೀಯ ದೃಷ್ಟಿಕೋನದಿಂದ ಪಾರದರ್ಶಕವಲ್ಲದ ರೀತಿಯಲ್ಲಿ ನಡೆಸಿವೆ. ಇಂತಹ ಸಮೀಕ್ಷೆಗಳು ರಾಜ್ಯದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ” ಎಂದು ಅವರು ಹೇಳಿದ್ದಾರೆ.

ಬಿಹಾರ ಮತ್ತು ತೆಲಂಗಾಣ ತಮ್ಮ ಜಾತಿ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿವೆ. ಜಾರ್ಖಂಡ್ 2025-26ರ ಹಣಕಾಸು ವರ್ಷದಲ್ಲಿ ತನ್ನ ಜಾತಿ ಸಮೀಕ್ಷೆಯನ್ನು ನಡೆಸುವುದಾಗಿ ಹೇಳಿದೆ.

“ಈ ಎಲ್ಲಾ ಸಂಗತಿಗಳನ್ನು ಪರಿಗಣಿಸಿ ಮತ್ತು ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು, ಜಾತಿ ಎಣಿಕೆಯನ್ನು ಸಮೀಕ್ಷೆಗಳ ಬದಲಿಗೆ ಜನಗಣತಿಯಲ್ಲಿ ಪಾರದರ್ಶಕವಾಗಿ ಸೇರಿಸಬೇಕು. ಇದು ರಾಷ್ಟ್ರವು ಪ್ರಗತಿಯನ್ನು ಮುಂದುವರಿಸುವಾಗ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ರಚನೆಯನ್ನು ಬಲಪಡಿಸುತ್ತದೆ.” ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಮತ್ತು ರಾಮದಾಸ್ ಅಠಾವಳೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಲವಾರು ಮಿತ್ರಪಕ್ಷಗಳು ಜಾತಿ ಜನಗಣತಿಯ ಬೇಡಿಕೆಗಳನ್ನು ಬೆಂಬಲಿಸಿವೆ. ಮುಂದಿನ ಜನಗಣತಿಯೊಂದಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...