Homeಮುಖಪುಟಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

ಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ; ಕೇಂದ್ರ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ರಾಜಕೀಯ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿಯು ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ. ಅದಾಗ್ಯೂ, ಈ ಕಾರ್ಯ ಯಾವಾಗ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಜಾತಿ ಗಣತಿಯ ಬೇಡಿಕೆಯನ್ನು “ಕೇವಲ ರಾಜಕೀಯ ಸಾಧನವಾಗಿ” ಬಳಸಿಕೊಂಡಿವೆ ಎಂದು ಕೇಂದ್ರ ಸಚಿವ ಇದೇ ವೇಳೆ ಆರೋಪಿಸಿದ್ದಾರೆ. ಮುಂದಿನ ಜನಗಣತಿಯೊಂದಿಗೆ

“ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದವು. ಸ್ವಾತಂತ್ರ್ಯದ ನಂತರ ನಡೆದ ಎಲ್ಲಾ ಜನಗಣತಿ ಕಾರ್ಯಾಚರಣೆಗಳಲ್ಲಿ ಜಾತಿಯನ್ನು ಸೇರಿಸಲಾಗಿಲ್ಲ.” ಎಂದು ಸಚಿವ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಜಾತಿ ಎಣಿಕೆ ಮಾಡಲು 2011 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯು ಒಂದು ಸಮೀಕ್ಷೆಯಾಗಿತ್ತು, ಅದು ಜನಗಣತಿಯಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯಲ್ಲಿ ಜಾತಿಗಳಿಗೆ ಸಂಬಂಧಿಸಿದ ಡೇಟಾವನ್ನು ಸಾರ್ವಜನಿಕಗೊಳಿಸಲಾಗಿಲ್ಲ.

ವಿರೋಧ ಪಕ್ಷಗಳು ಹಲವು ಸಮಯದಿಂದ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಒತ್ತಾಯಿಸುತ್ತಿವೆ. ಈ ಗಣತಿಯು ದೇಶದ ಇತರ ಹಿಂದುಳಿದ ವರ್ಗಗಳು ಮತ್ತು ಇತರ ಜಾತಿಗಳ ನಿಜವಾದ ಜನಸಂಖ್ಯೆಯನ್ನು ಗುರುತಿಸಲು ಸಹಾಯ ಮಾಡುತ್ತದೆ, ಜೊತೆಗೆ ವಿಸ್ತೃತ ಮೀಸಲಾತಿಯಂತಹ ನೀತಿಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಅವರು ವಾದಿಸುತ್ತಾರೆ.

ಜನಗಣತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೆಲವು ರಾಜ್ಯಗಳು ಜಾತಿಗಳನ್ನು ಎಣಿಸಲು ನಡೆಸಿದ ಪ್ರಕ್ರಿಯೆಗಳು ಸಮೀಕ್ಷೆಗಳಾಗಿದ್ದವು ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

“ಕೆಲವು ರಾಜ್ಯಗಳು ಇದನ್ನು ಚೆನ್ನಾಗಿ ಮಾಡಿವೆ, ಆದರೆ ಇನ್ನು ಕೆಲವು ರಾಜ್ಯಗಳು ಅಂತಹ ಸಮೀಕ್ಷೆಗಳನ್ನು ಸಂಪೂರ್ಣವಾಗಿ ರಾಜಕೀಯ ದೃಷ್ಟಿಕೋನದಿಂದ ಪಾರದರ್ಶಕವಲ್ಲದ ರೀತಿಯಲ್ಲಿ ನಡೆಸಿವೆ. ಇಂತಹ ಸಮೀಕ್ಷೆಗಳು ರಾಜ್ಯದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ” ಎಂದು ಅವರು ಹೇಳಿದ್ದಾರೆ.

ಬಿಹಾರ ಮತ್ತು ತೆಲಂಗಾಣ ತಮ್ಮ ಜಾತಿ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿವೆ. ಜಾರ್ಖಂಡ್ 2025-26ರ ಹಣಕಾಸು ವರ್ಷದಲ್ಲಿ ತನ್ನ ಜಾತಿ ಸಮೀಕ್ಷೆಯನ್ನು ನಡೆಸುವುದಾಗಿ ಹೇಳಿದೆ.

“ಈ ಎಲ್ಲಾ ಸಂಗತಿಗಳನ್ನು ಪರಿಗಣಿಸಿ ಮತ್ತು ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು, ಜಾತಿ ಎಣಿಕೆಯನ್ನು ಸಮೀಕ್ಷೆಗಳ ಬದಲಿಗೆ ಜನಗಣತಿಯಲ್ಲಿ ಪಾರದರ್ಶಕವಾಗಿ ಸೇರಿಸಬೇಕು. ಇದು ರಾಷ್ಟ್ರವು ಪ್ರಗತಿಯನ್ನು ಮುಂದುವರಿಸುವಾಗ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ರಚನೆಯನ್ನು ಬಲಪಡಿಸುತ್ತದೆ.” ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಮತ್ತು ರಾಮದಾಸ್ ಅಠಾವಳೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಲವಾರು ಮಿತ್ರಪಕ್ಷಗಳು ಜಾತಿ ಜನಗಣತಿಯ ಬೇಡಿಕೆಗಳನ್ನು ಬೆಂಬಲಿಸಿವೆ. ಮುಂದಿನ ಜನಗಣತಿಯೊಂದಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...