Homeಮುಖಪುಟಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

- Advertisement -
- Advertisement -

ಭಾರತದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ವೆಬ್‌ಸೈಟ್ ಕಳೆದ ಎರಡು ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಬಗ್ಗೆ ಫೋರ್ಟಲ್‌ನ ಜವಾಬ್ಧಾರಿಯನ್ನು ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ ಸಚಿವಾಲಯವು ತಾಂತ್ರಿಕ ಕಾರಣಗಳನ್ನು ಹೇಳಿದ್ದು, ವೆಬ್‌ಸೈಟ್‌ ಮತ್ತೆ ಲೈವ್‌ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಸಚಿವಾಲಯಕ್ಕೆ ಈ ಕುರಿತ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎನ್ನುವುದು ವಿಪರ್ಯಾಸವಾಗಿದೆ.

2011ರಲ್ಲಿ ಭಾರತವು ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸಿದೆ, 1931ರಿಂದ ಇದು ಮೊದಲ ಜಾತಿ ಆಧಾರಿತ ಜನಗಣತಿ. 640 ಜಿಲ್ಲೆಗಳಲ್ಲಿ ಸರ್ಕಾರವು ಎಲೆಕ್ಟ್ರಾನಿಕ್ ಸಾಧನಗಳ ಮೇಲೆ ನಡೆಸಿದ ಮೊದಲ  ಕಾಗದ ರಹಿತ ಜನಗಣತಿ ಇದಾಗಿದೆ. ಇದರಲ್ಲಿ ಗ್ರಾಮಗಳಲ್ಲಿ ವಾಸಿಸುವ ಮೂರು ಕುಟುಂಬಗಳಲ್ಲಿ ಒಂದು ಕುಟುಂಬ ಭೂರಹಿತರಾಗಿದ್ದಾರೆ ಮತ್ತು ಅವರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯನ್ನು ಅವಲಂಬಿಸಿದ್ದಾರೆ ಎಂದು ಹೇಳಿದೆ. ಇದು ಗ್ರಾಮೀಣ ಭಾರತದಲ್ಲಿ ಶಿಕ್ಷಣದ ಕಳಪೆ ಸ್ಥಿತಿಯನ್ನು ಬಹಿರಂಗಪಡಿಸಿತ್ತು.

ಸರ್ಕಾರವು ವಿವಿಧ ಸಮಾಜ ಕಲ್ಯಾಣ ಯೋಜನೆಗಳಲ್ಲಿ ಸುಧಾರಣೆ ತರುವುದು ಜನಗಣತಿಯ ಉದ್ದೇಶವಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಯೋಜನೆ, ಜನ ಆರೋಗ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಸುಧಾರಿಸುವುದು ಜನಗಣತಿಯ ಗುರಿಯಾಗಿದೆ. ಜಾತಿಗಣತಿಯ ವರದಿಯ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಜನರನ್ನು ಒಳಗೊಂಡಂತೆ ಹಿಂದುಳಿದ ಸಮುದಾಯಗಳು ಅಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಆದರೆ ಈ ನಿರ್ಣಾಯಕ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಈಗ ಲಭ್ಯವಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಮಾರ್ಚ್ 22ರ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಪೋರ್ಟಲ್ ಕನಿಷ್ಠ ಅಂದರೆ ಜನವರಿ 6, 2024ರಿಂದ ಸ್ಥಗಿತಗೊಂಡಿದೆ. ದಿ ವೈರ್‌ ಮಾರ್ಚ್ 23ರಂದು ಪ್ರಕಟಿಸಿದ ವರದಿಯಲ್ಲೂ ಈ ಬಗ್ಗೆ ಉಲ್ಲೇಖಿಸಿತ್ತು.

ಪೋರ್ಟಲ್‌ನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ, ತಾಂತ್ರಿಕ ಕಾರಣಗಳಿಂದ ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತಗೊಂಡಿದೆ ಎಂದು ಹೇಳಿದೆ. ಸಚಿವಾಲಯವು ವೆಬ್-ಸೈಟ್‌ನ್ನು ಮತ್ತೆ ಸಕ್ರಿಯಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ.

ಈ ವರ್ಷದ ಜನವರಿಯಿಂದ ಕನಿಷ್ಠ ಎರಡು ಬಾರಿ ಸಚಿವಾಲಯದ ಆಂತರಿಕ ಸಭೆಗಳಲ್ಲಿ ಈ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಹೆಸರಿಸದ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯು ಅನೇಕ ರಾಜ್ಯಗಳಲ್ಲಿ ನಿರ್ಣಾಯಕ ಚುನಾವಣಾ ವಿಷಯವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಬಿಹಾರ ತನ್ನ ಮೊದಲ ರಾಜ್ಯ ಆಧಾರಿತ ಜಾತಿ ಗಣತಿಯನ್ನು ನಡೆಸಿದೆ. ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7% ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ.

ಬಿಹಾರ ರಾಜ್ಯದ ಜನಸಂಖ್ಯೆಯಲ್ಲಿ ಪ್ರಬಲ ಜಾತಿಗಳು ಕೇವಲ 15.5% ರಷ್ಟಿದ್ದರೆ, ಅದರ ಹಿಂದುಳಿದ ಜಾತಿಗಳ ಜನ 84% ರಷ್ಟಿದ್ದಾರೆ ಎಂದು ಜನಗಣತಿಯು ಕಂಡುಹಿಡಿದಿದೆ. ಬಿಹಾರದ ಒಟ್ಟು 2.76 ಕೋಟಿ ಕುಟುಂಬಗಳಲ್ಲಿ ಸುಮಾರು 94 ಲಕ್ಷ ಕುಟುಂಬಗಳು ಅಂದರೆ 34.13% ಕುಟುಂಬಗಳು ಆರ್ಥಿಕವಾಗಿ ಬಡವರಾಗಿದ್ದಾರೆ ಮತ್ತು ತಿಂಗಳಿಗೆ ರೂ 6,000 ಕ್ಕಿಂತ ಕಡಿಮೆ ಆದಾಯವನ್ನು ಹೊಂದಿದ್ದಾರೆ. ಈ ಮಾಹಿತಿಯನ್ನು ಆಧರಿಸಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಡವರು ಮತ್ತು ಅಂಚಿನಲ್ಲಿರುವವರನ್ನು ಗುರಿಯಾಗಿಸಿಕೊಂಡು ಕಾರ್ಯಕ್ರಮಗಳನ್ನು ಘೋಷಿಸಿದ್ದರು. ನವೆಂಬರ್ 2023ರಲ್ಲಿ ಅವರು 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಘೋಷಿಸಿದ್ದರು ಮತ್ತು SC ಗಳು, STಗಳು ಮತ್ತು OBC ಗಳಿಗೆ 65% ಮೀಸಲಾತಿಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದ್ದರು.

ಬಿಹಾರದ ಬಳಿಕ ಆಂಧ್ರ ಪ್ರದೇಶವು ಜಾತಿ ಸಮೀಕ್ಷೆಯ ಘೋಷಿಸಿದ ಎರಡನೇ ರಾಜ್ಯವಾಗಿದೆ. ಅದರ ಸಮೀಕ್ಷೆಯು ಈ ವರ್ಷದ ಜನವರಿ 19ರಂದು ಪ್ರಾರಂಭವಾಗಿದೆ. ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು 2024ರ ಲೋಕಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಘೋಷಿಸಿವೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...