Homeಮುಖಪುಟಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

- Advertisement -
- Advertisement -

ಭಾರತದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ವೆಬ್‌ಸೈಟ್ ಕಳೆದ ಎರಡು ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಬಗ್ಗೆ ಫೋರ್ಟಲ್‌ನ ಜವಾಬ್ಧಾರಿಯನ್ನು ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ ಸಚಿವಾಲಯವು ತಾಂತ್ರಿಕ ಕಾರಣಗಳನ್ನು ಹೇಳಿದ್ದು, ವೆಬ್‌ಸೈಟ್‌ ಮತ್ತೆ ಲೈವ್‌ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಸಚಿವಾಲಯಕ್ಕೆ ಈ ಕುರಿತ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎನ್ನುವುದು ವಿಪರ್ಯಾಸವಾಗಿದೆ.

2011ರಲ್ಲಿ ಭಾರತವು ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸಿದೆ, 1931ರಿಂದ ಇದು ಮೊದಲ ಜಾತಿ ಆಧಾರಿತ ಜನಗಣತಿ. 640 ಜಿಲ್ಲೆಗಳಲ್ಲಿ ಸರ್ಕಾರವು ಎಲೆಕ್ಟ್ರಾನಿಕ್ ಸಾಧನಗಳ ಮೇಲೆ ನಡೆಸಿದ ಮೊದಲ  ಕಾಗದ ರಹಿತ ಜನಗಣತಿ ಇದಾಗಿದೆ. ಇದರಲ್ಲಿ ಗ್ರಾಮಗಳಲ್ಲಿ ವಾಸಿಸುವ ಮೂರು ಕುಟುಂಬಗಳಲ್ಲಿ ಒಂದು ಕುಟುಂಬ ಭೂರಹಿತರಾಗಿದ್ದಾರೆ ಮತ್ತು ಅವರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯನ್ನು ಅವಲಂಬಿಸಿದ್ದಾರೆ ಎಂದು ಹೇಳಿದೆ. ಇದು ಗ್ರಾಮೀಣ ಭಾರತದಲ್ಲಿ ಶಿಕ್ಷಣದ ಕಳಪೆ ಸ್ಥಿತಿಯನ್ನು ಬಹಿರಂಗಪಡಿಸಿತ್ತು.

ಸರ್ಕಾರವು ವಿವಿಧ ಸಮಾಜ ಕಲ್ಯಾಣ ಯೋಜನೆಗಳಲ್ಲಿ ಸುಧಾರಣೆ ತರುವುದು ಜನಗಣತಿಯ ಉದ್ದೇಶವಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಯೋಜನೆ, ಜನ ಆರೋಗ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಸುಧಾರಿಸುವುದು ಜನಗಣತಿಯ ಗುರಿಯಾಗಿದೆ. ಜಾತಿಗಣತಿಯ ವರದಿಯ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಜನರನ್ನು ಒಳಗೊಂಡಂತೆ ಹಿಂದುಳಿದ ಸಮುದಾಯಗಳು ಅಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಆದರೆ ಈ ನಿರ್ಣಾಯಕ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಈಗ ಲಭ್ಯವಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಮಾರ್ಚ್ 22ರ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಪೋರ್ಟಲ್ ಕನಿಷ್ಠ ಅಂದರೆ ಜನವರಿ 6, 2024ರಿಂದ ಸ್ಥಗಿತಗೊಂಡಿದೆ. ದಿ ವೈರ್‌ ಮಾರ್ಚ್ 23ರಂದು ಪ್ರಕಟಿಸಿದ ವರದಿಯಲ್ಲೂ ಈ ಬಗ್ಗೆ ಉಲ್ಲೇಖಿಸಿತ್ತು.

ಪೋರ್ಟಲ್‌ನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ, ತಾಂತ್ರಿಕ ಕಾರಣಗಳಿಂದ ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತಗೊಂಡಿದೆ ಎಂದು ಹೇಳಿದೆ. ಸಚಿವಾಲಯವು ವೆಬ್-ಸೈಟ್‌ನ್ನು ಮತ್ತೆ ಸಕ್ರಿಯಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ.

ಈ ವರ್ಷದ ಜನವರಿಯಿಂದ ಕನಿಷ್ಠ ಎರಡು ಬಾರಿ ಸಚಿವಾಲಯದ ಆಂತರಿಕ ಸಭೆಗಳಲ್ಲಿ ಈ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಹೆಸರಿಸದ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯು ಅನೇಕ ರಾಜ್ಯಗಳಲ್ಲಿ ನಿರ್ಣಾಯಕ ಚುನಾವಣಾ ವಿಷಯವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಬಿಹಾರ ತನ್ನ ಮೊದಲ ರಾಜ್ಯ ಆಧಾರಿತ ಜಾತಿ ಗಣತಿಯನ್ನು ನಡೆಸಿದೆ. ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7% ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ.

ಬಿಹಾರ ರಾಜ್ಯದ ಜನಸಂಖ್ಯೆಯಲ್ಲಿ ಪ್ರಬಲ ಜಾತಿಗಳು ಕೇವಲ 15.5% ರಷ್ಟಿದ್ದರೆ, ಅದರ ಹಿಂದುಳಿದ ಜಾತಿಗಳ ಜನ 84% ರಷ್ಟಿದ್ದಾರೆ ಎಂದು ಜನಗಣತಿಯು ಕಂಡುಹಿಡಿದಿದೆ. ಬಿಹಾರದ ಒಟ್ಟು 2.76 ಕೋಟಿ ಕುಟುಂಬಗಳಲ್ಲಿ ಸುಮಾರು 94 ಲಕ್ಷ ಕುಟುಂಬಗಳು ಅಂದರೆ 34.13% ಕುಟುಂಬಗಳು ಆರ್ಥಿಕವಾಗಿ ಬಡವರಾಗಿದ್ದಾರೆ ಮತ್ತು ತಿಂಗಳಿಗೆ ರೂ 6,000 ಕ್ಕಿಂತ ಕಡಿಮೆ ಆದಾಯವನ್ನು ಹೊಂದಿದ್ದಾರೆ. ಈ ಮಾಹಿತಿಯನ್ನು ಆಧರಿಸಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಡವರು ಮತ್ತು ಅಂಚಿನಲ್ಲಿರುವವರನ್ನು ಗುರಿಯಾಗಿಸಿಕೊಂಡು ಕಾರ್ಯಕ್ರಮಗಳನ್ನು ಘೋಷಿಸಿದ್ದರು. ನವೆಂಬರ್ 2023ರಲ್ಲಿ ಅವರು 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಘೋಷಿಸಿದ್ದರು ಮತ್ತು SC ಗಳು, STಗಳು ಮತ್ತು OBC ಗಳಿಗೆ 65% ಮೀಸಲಾತಿಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದ್ದರು.

ಬಿಹಾರದ ಬಳಿಕ ಆಂಧ್ರ ಪ್ರದೇಶವು ಜಾತಿ ಸಮೀಕ್ಷೆಯ ಘೋಷಿಸಿದ ಎರಡನೇ ರಾಜ್ಯವಾಗಿದೆ. ಅದರ ಸಮೀಕ್ಷೆಯು ಈ ವರ್ಷದ ಜನವರಿ 19ರಂದು ಪ್ರಾರಂಭವಾಗಿದೆ. ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು 2024ರ ಲೋಕಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಘೋಷಿಸಿವೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...