Homeಮುಖಪುಟಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

- Advertisement -
- Advertisement -

ಭಾರತದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ವೆಬ್‌ಸೈಟ್ ಕಳೆದ ಎರಡು ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಬಗ್ಗೆ ಫೋರ್ಟಲ್‌ನ ಜವಾಬ್ಧಾರಿಯನ್ನು ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ ಸಚಿವಾಲಯವು ತಾಂತ್ರಿಕ ಕಾರಣಗಳನ್ನು ಹೇಳಿದ್ದು, ವೆಬ್‌ಸೈಟ್‌ ಮತ್ತೆ ಲೈವ್‌ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಸಚಿವಾಲಯಕ್ಕೆ ಈ ಕುರಿತ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎನ್ನುವುದು ವಿಪರ್ಯಾಸವಾಗಿದೆ.

2011ರಲ್ಲಿ ಭಾರತವು ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸಿದೆ, 1931ರಿಂದ ಇದು ಮೊದಲ ಜಾತಿ ಆಧಾರಿತ ಜನಗಣತಿ. 640 ಜಿಲ್ಲೆಗಳಲ್ಲಿ ಸರ್ಕಾರವು ಎಲೆಕ್ಟ್ರಾನಿಕ್ ಸಾಧನಗಳ ಮೇಲೆ ನಡೆಸಿದ ಮೊದಲ  ಕಾಗದ ರಹಿತ ಜನಗಣತಿ ಇದಾಗಿದೆ. ಇದರಲ್ಲಿ ಗ್ರಾಮಗಳಲ್ಲಿ ವಾಸಿಸುವ ಮೂರು ಕುಟುಂಬಗಳಲ್ಲಿ ಒಂದು ಕುಟುಂಬ ಭೂರಹಿತರಾಗಿದ್ದಾರೆ ಮತ್ತು ಅವರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯನ್ನು ಅವಲಂಬಿಸಿದ್ದಾರೆ ಎಂದು ಹೇಳಿದೆ. ಇದು ಗ್ರಾಮೀಣ ಭಾರತದಲ್ಲಿ ಶಿಕ್ಷಣದ ಕಳಪೆ ಸ್ಥಿತಿಯನ್ನು ಬಹಿರಂಗಪಡಿಸಿತ್ತು.

ಸರ್ಕಾರವು ವಿವಿಧ ಸಮಾಜ ಕಲ್ಯಾಣ ಯೋಜನೆಗಳಲ್ಲಿ ಸುಧಾರಣೆ ತರುವುದು ಜನಗಣತಿಯ ಉದ್ದೇಶವಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಯೋಜನೆ, ಜನ ಆರೋಗ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಸುಧಾರಿಸುವುದು ಜನಗಣತಿಯ ಗುರಿಯಾಗಿದೆ. ಜಾತಿಗಣತಿಯ ವರದಿಯ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಜನರನ್ನು ಒಳಗೊಂಡಂತೆ ಹಿಂದುಳಿದ ಸಮುದಾಯಗಳು ಅಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಆದರೆ ಈ ನಿರ್ಣಾಯಕ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಈಗ ಲಭ್ಯವಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಮಾರ್ಚ್ 22ರ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಪೋರ್ಟಲ್ ಕನಿಷ್ಠ ಅಂದರೆ ಜನವರಿ 6, 2024ರಿಂದ ಸ್ಥಗಿತಗೊಂಡಿದೆ. ದಿ ವೈರ್‌ ಮಾರ್ಚ್ 23ರಂದು ಪ್ರಕಟಿಸಿದ ವರದಿಯಲ್ಲೂ ಈ ಬಗ್ಗೆ ಉಲ್ಲೇಖಿಸಿತ್ತು.

ಪೋರ್ಟಲ್‌ನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ, ತಾಂತ್ರಿಕ ಕಾರಣಗಳಿಂದ ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತಗೊಂಡಿದೆ ಎಂದು ಹೇಳಿದೆ. ಸಚಿವಾಲಯವು ವೆಬ್-ಸೈಟ್‌ನ್ನು ಮತ್ತೆ ಸಕ್ರಿಯಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ.

ಈ ವರ್ಷದ ಜನವರಿಯಿಂದ ಕನಿಷ್ಠ ಎರಡು ಬಾರಿ ಸಚಿವಾಲಯದ ಆಂತರಿಕ ಸಭೆಗಳಲ್ಲಿ ಈ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಹೆಸರಿಸದ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯು ಅನೇಕ ರಾಜ್ಯಗಳಲ್ಲಿ ನಿರ್ಣಾಯಕ ಚುನಾವಣಾ ವಿಷಯವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಬಿಹಾರ ತನ್ನ ಮೊದಲ ರಾಜ್ಯ ಆಧಾರಿತ ಜಾತಿ ಗಣತಿಯನ್ನು ನಡೆಸಿದೆ. ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7% ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ.

ಬಿಹಾರ ರಾಜ್ಯದ ಜನಸಂಖ್ಯೆಯಲ್ಲಿ ಪ್ರಬಲ ಜಾತಿಗಳು ಕೇವಲ 15.5% ರಷ್ಟಿದ್ದರೆ, ಅದರ ಹಿಂದುಳಿದ ಜಾತಿಗಳ ಜನ 84% ರಷ್ಟಿದ್ದಾರೆ ಎಂದು ಜನಗಣತಿಯು ಕಂಡುಹಿಡಿದಿದೆ. ಬಿಹಾರದ ಒಟ್ಟು 2.76 ಕೋಟಿ ಕುಟುಂಬಗಳಲ್ಲಿ ಸುಮಾರು 94 ಲಕ್ಷ ಕುಟುಂಬಗಳು ಅಂದರೆ 34.13% ಕುಟುಂಬಗಳು ಆರ್ಥಿಕವಾಗಿ ಬಡವರಾಗಿದ್ದಾರೆ ಮತ್ತು ತಿಂಗಳಿಗೆ ರೂ 6,000 ಕ್ಕಿಂತ ಕಡಿಮೆ ಆದಾಯವನ್ನು ಹೊಂದಿದ್ದಾರೆ. ಈ ಮಾಹಿತಿಯನ್ನು ಆಧರಿಸಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಡವರು ಮತ್ತು ಅಂಚಿನಲ್ಲಿರುವವರನ್ನು ಗುರಿಯಾಗಿಸಿಕೊಂಡು ಕಾರ್ಯಕ್ರಮಗಳನ್ನು ಘೋಷಿಸಿದ್ದರು. ನವೆಂಬರ್ 2023ರಲ್ಲಿ ಅವರು 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಘೋಷಿಸಿದ್ದರು ಮತ್ತು SC ಗಳು, STಗಳು ಮತ್ತು OBC ಗಳಿಗೆ 65% ಮೀಸಲಾತಿಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದ್ದರು.

ಬಿಹಾರದ ಬಳಿಕ ಆಂಧ್ರ ಪ್ರದೇಶವು ಜಾತಿ ಸಮೀಕ್ಷೆಯ ಘೋಷಿಸಿದ ಎರಡನೇ ರಾಜ್ಯವಾಗಿದೆ. ಅದರ ಸಮೀಕ್ಷೆಯು ಈ ವರ್ಷದ ಜನವರಿ 19ರಂದು ಪ್ರಾರಂಭವಾಗಿದೆ. ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು 2024ರ ಲೋಕಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಘೋಷಿಸಿವೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...