Homeಕರ್ನಾಟಕಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

ಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿದ್ದು, ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದಾರೆ. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾಗಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವಾರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಗ್ರಾಮದಲ್ಲಿ ಪೊಲೀಸ್ ಪಹರೆ ನಿಂತಿದ್ದು ಆಗಸ್ಟ್ 20ರ ವರೆಗೂ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಹೇರಲಾಗಿದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲ್ಲಶೆಟ್ಟಿ ತಿಳಿಸಿದ್ದಾರೆ.

ಯಲ್ಲಾಲಿಂಗ ಕೊಲೆ ಪ್ರಕರಣ

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಆ ಹೋರಾಟದಲ್ಲಿ ದಲಿತ ಮುಖಂಡ ಸಣ್ಣ ಹನುಮಂತರವರು ಹೋರಾಟದ ನೇತೃತ್ವ ವಹಿಸಿದ್ದರು. ಇದು ಆರೋಪಿ ಹನುಮೇಶ್ ನಾಯಕ್‌ಗೆ ಸೇಡು ಮೂಡುವಂತೆ ಮಾಡಿತ್ತು. ಹಾಗಾಗಿ ಆತ ತನ್ನ ಸಮುದಾಯದವರನ್ನು ಎತ್ತುಕಟ್ಟಿ ಸಣ್ಣ ಹನುಮಂತ ಮೇಲೆ ಹಲ್ಲೆಗೆ ಪ್ರಚೋದನೆ ನೀಡುತ್ತಿದ್ದ. ಅದರ ಭಾಗವಾಗಿ ಈ ಗಲಾಟೆ ನಡೆದಿದೆ. ಆದರೆ ಸಣ್ಣ ಹನುಮಂತುರವರು ತಪ್ಪಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...