Homeಕರ್ನಾಟಕಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

ಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿದ್ದು, ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದಾರೆ. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾಗಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವಾರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಗ್ರಾಮದಲ್ಲಿ ಪೊಲೀಸ್ ಪಹರೆ ನಿಂತಿದ್ದು ಆಗಸ್ಟ್ 20ರ ವರೆಗೂ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಹೇರಲಾಗಿದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲ್ಲಶೆಟ್ಟಿ ತಿಳಿಸಿದ್ದಾರೆ.

ಯಲ್ಲಾಲಿಂಗ ಕೊಲೆ ಪ್ರಕರಣ

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಆ ಹೋರಾಟದಲ್ಲಿ ದಲಿತ ಮುಖಂಡ ಸಣ್ಣ ಹನುಮಂತರವರು ಹೋರಾಟದ ನೇತೃತ್ವ ವಹಿಸಿದ್ದರು. ಇದು ಆರೋಪಿ ಹನುಮೇಶ್ ನಾಯಕ್‌ಗೆ ಸೇಡು ಮೂಡುವಂತೆ ಮಾಡಿತ್ತು. ಹಾಗಾಗಿ ಆತ ತನ್ನ ಸಮುದಾಯದವರನ್ನು ಎತ್ತುಕಟ್ಟಿ ಸಣ್ಣ ಹನುಮಂತ ಮೇಲೆ ಹಲ್ಲೆಗೆ ಪ್ರಚೋದನೆ ನೀಡುತ್ತಿದ್ದ. ಅದರ ಭಾಗವಾಗಿ ಈ ಗಲಾಟೆ ನಡೆದಿದೆ. ಆದರೆ ಸಣ್ಣ ಹನುಮಂತುರವರು ತಪ್ಪಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....