Homeಮುಖಪುಟಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. "ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು" ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾ ಜಿಲ್ಲೆಯ ದೊಲ್ಮೌ ಎಂಬ ಗ್ರಾಮದಲ್ಲಿ ಜಾತಿ ಕ್ರೌರ್ಯದ ಭೀಭತ್ಸ ಘಟನೆ ವರದಿಯಾಗಿದೆ. ತಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ 45 ವರ್ಷದ ದಲಿತ ವ್ಯಕ್ತಿಯ ಕೈ ಕತ್ತರಿಸಿರುವ ಅಮಾನವೀಯ ಘಟನೆ ಶನಿವಾರ ನಡೆದಿದೆ.

ಸಂತ್ರಸ್ತ ಅಶೋಕ್ ಸಾಕೇತ್ ಎಂಬ ದಲಿತ ಕಟ್ಟಡ ಕಾರ್ಮಿಕರೊಬ್ಬರು ತಾನು ಮಾಡಿದ ಕೂಲಿಗೆ ವೇತನ ನೀಡುವಂತೆ ಮಾಲೀಕ ಗಣೇಶ್ ಮಿಶ್ರಾ ಎಂಬಾತನನ್ನು ಕೇಳಿದ್ದಾರೆ. ಆದರೆ ಆತ ಕತ್ತಿಯಿಂದ ಕೈ ಕತ್ತರಿಸಿ ಜಾತಿಕ್ರೌರ್ಯ ಮೆರೆದಿದ್ದಾರೆ. ನಂತರ ಸಂತ್ರಸ್ತರನ್ನು ರೇವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಕತ್ತರಿಸಲ್ಪಟ್ಟ ಅಂಗವನ್ನು ದೇಹಕ್ಕೆ ಮರುಜೋಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗುವುದೇ ಇಲ್ಲವೇ ಎಂಬುದನ್ನು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಮಿಶ್ರಾನನ್ನು ಬಂಧಿಸಲಾಗಿದೆ. ಕೊಲೆ ಯತ್ನ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 11.30ರ ಸಮಯಕ್ಕೆ ಸಂತ್ರಸ್ತ ಅಶೋಕ್ ಸಾಕೇತ್ ತನ್ನ ಸಹೋದ್ಯೊಗಿ ಸತ್ಯೇಂದ್ರ ಜೊತೆಗೆ ಮಾಲೀಕರ ಮನೆಗೆ ಹೋಗಿ ತಮ್ಮ ಪಾಲಿನ ವೇತನ ಕೇಳಿದ್ದಾರೆ. ಅವರು ಪಿಲ್ಲರ್ ಮತ್ತು ಬೀಮ್ಸ್‌ ಗಳನ್ನು ನಿರ್ಮಿಸಿಕೊಟ್ಟಿದ್ದರು. ಅದಕ್ಕಾಗಿ 15,000 ಚಾರ್ಜ್ ಮಾಡಿದ್ದರು. ಆದರೆ ಆರೋಪಿ ಗಣೇಶ್ ಮಿಶ್ರಾ ಕೇವಲ 6,000 ಕೊಡಲು ಮುಂದಾಗಿದ್ದರು. ಆಗ ಮಾತಿಗೆ ಮಾತು ಬೆಳೆದಿದೆ. ಆಗ ಹಣ ಕೊಡುವುದಾಗಿ ಮನೆ ಒಳಗೆ ಹೋದ ಗಣೇಶ್ ಕತ್ತಿ ತಂದು ತಲೆಗೆ ಹಿಡಿದಿದ್ದಾರೆ. ತಪ್ಪಿಸಿಕೊಳ್ಳಲು ಹೋದಾಗ ಅಶೋಕ್ ಕೈ ಕತ್ತರಿಸಿದ್ದಾರೆ ಎಂದು ಅಶೋಕ್ ಸಹೋದರ್ ಶಿವಕುಮಾರ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೂಡಲೇ ಅಶೋಕ್‌ರವರನ್ನು ಸತ್ಯೇಂದ್ರ ತನ್ನ ಬೈಕ್‌ನಲ್ಲಿ ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದು, ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು ಸಂಜಯ್ ಗಾಂಧಿ ಮೆಮೋರಿಯಲ್ ಹಾಸ್ಪಿಟಲ್‌ಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದರು.

ಇನ್ನೊಂದು ಕಡೆ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ಆರೋಪಿ ಮತ್ತು ಕತ್ತರಿಸಿದ ಕೈ ಅನ್ನು ಪತ್ತೆ ಹಚ್ಚಲು ಶುರು ಮಾಡಿದ್ದರು. ಆರೋಪಿ ಗಣೇಶ್ ಮಿಶ್ರಾ ಬ್ಯಾಗ್ ಪ್ಯಾಕ್ ಮಾಡಿಕೊಂಡು ಸ್ವಲ್ಪ ಹಣ ತೆಗೆದುಕೊಂಡು ತನ್ನ ಬೈಕ್‌ನಲ್ಲಿ ಪರಾರಿಯಾಗಿದ್ದನು. ಅವನ ಸಹೋದರರಾದ ರತ್ನೇಶ್ ಮಿಶ್ರಾ ಮತ್ತು ಕೃಷ್ಣ ಕುಮಾರ್ ಎಂಬುವವರು ರಕ್ತವನ್ನು ತೊಳೆದು ಅವನು ಪರಾರಿಯಾಗಿಲು ಸಹಕರಿಸಿದ್ದರು. ಅಲ್ಲದೇ ತುಂಡಾದ ಕೈಯನ್ನು ತಿಪ್ಪೆಗೆ ಎಸೆದಿದ್ದರು.

ನಂತರ ಪೊಲೀಸರು ಬಹಳಷ್ಟು ಹುಡುಕಾಡಿದ ನಂತರ ತುಂಡಾದ ಕೈ ಸಿಕ್ಕಿದೆ. ಕೂಡಲೇ ಆಂಬುಲೆನ್ಸ್‌ನಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ವೈದ್ಯರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಮರು ಜೋಡಣೆ ಮಾಡಿದ್ದಾರೆ. ಆದರೆ ಈಗಲೇ ಏನನ್ನು ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಪಿ ಗಣೇಶ್ ಮಿಶ್ರಾನ ತಂದೆ ರಾಘವೇಂದ್ರ ಮಿಶ್ರಾ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ರಾಘವೇಂದ್ರ ಮಿಶ್ರಾ ಮುಂಬರುವ ಸ್ಥಳೀಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾಗವಹಿಸಲು ಸಿದ್ದತೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 307 ಮತ್ತು 201ರ ಅಡಿಯಲ್ಲಿ, ಶಶಸ್ತ್ರ ಕಾಯ್ದೆ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. “ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...