Homeಮುಖಪುಟಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. "ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು" ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾ ಜಿಲ್ಲೆಯ ದೊಲ್ಮೌ ಎಂಬ ಗ್ರಾಮದಲ್ಲಿ ಜಾತಿ ಕ್ರೌರ್ಯದ ಭೀಭತ್ಸ ಘಟನೆ ವರದಿಯಾಗಿದೆ. ತಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ 45 ವರ್ಷದ ದಲಿತ ವ್ಯಕ್ತಿಯ ಕೈ ಕತ್ತರಿಸಿರುವ ಅಮಾನವೀಯ ಘಟನೆ ಶನಿವಾರ ನಡೆದಿದೆ.

ಸಂತ್ರಸ್ತ ಅಶೋಕ್ ಸಾಕೇತ್ ಎಂಬ ದಲಿತ ಕಟ್ಟಡ ಕಾರ್ಮಿಕರೊಬ್ಬರು ತಾನು ಮಾಡಿದ ಕೂಲಿಗೆ ವೇತನ ನೀಡುವಂತೆ ಮಾಲೀಕ ಗಣೇಶ್ ಮಿಶ್ರಾ ಎಂಬಾತನನ್ನು ಕೇಳಿದ್ದಾರೆ. ಆದರೆ ಆತ ಕತ್ತಿಯಿಂದ ಕೈ ಕತ್ತರಿಸಿ ಜಾತಿಕ್ರೌರ್ಯ ಮೆರೆದಿದ್ದಾರೆ. ನಂತರ ಸಂತ್ರಸ್ತರನ್ನು ರೇವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಕತ್ತರಿಸಲ್ಪಟ್ಟ ಅಂಗವನ್ನು ದೇಹಕ್ಕೆ ಮರುಜೋಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗುವುದೇ ಇಲ್ಲವೇ ಎಂಬುದನ್ನು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಮಿಶ್ರಾನನ್ನು ಬಂಧಿಸಲಾಗಿದೆ. ಕೊಲೆ ಯತ್ನ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 11.30ರ ಸಮಯಕ್ಕೆ ಸಂತ್ರಸ್ತ ಅಶೋಕ್ ಸಾಕೇತ್ ತನ್ನ ಸಹೋದ್ಯೊಗಿ ಸತ್ಯೇಂದ್ರ ಜೊತೆಗೆ ಮಾಲೀಕರ ಮನೆಗೆ ಹೋಗಿ ತಮ್ಮ ಪಾಲಿನ ವೇತನ ಕೇಳಿದ್ದಾರೆ. ಅವರು ಪಿಲ್ಲರ್ ಮತ್ತು ಬೀಮ್ಸ್‌ ಗಳನ್ನು ನಿರ್ಮಿಸಿಕೊಟ್ಟಿದ್ದರು. ಅದಕ್ಕಾಗಿ 15,000 ಚಾರ್ಜ್ ಮಾಡಿದ್ದರು. ಆದರೆ ಆರೋಪಿ ಗಣೇಶ್ ಮಿಶ್ರಾ ಕೇವಲ 6,000 ಕೊಡಲು ಮುಂದಾಗಿದ್ದರು. ಆಗ ಮಾತಿಗೆ ಮಾತು ಬೆಳೆದಿದೆ. ಆಗ ಹಣ ಕೊಡುವುದಾಗಿ ಮನೆ ಒಳಗೆ ಹೋದ ಗಣೇಶ್ ಕತ್ತಿ ತಂದು ತಲೆಗೆ ಹಿಡಿದಿದ್ದಾರೆ. ತಪ್ಪಿಸಿಕೊಳ್ಳಲು ಹೋದಾಗ ಅಶೋಕ್ ಕೈ ಕತ್ತರಿಸಿದ್ದಾರೆ ಎಂದು ಅಶೋಕ್ ಸಹೋದರ್ ಶಿವಕುಮಾರ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೂಡಲೇ ಅಶೋಕ್‌ರವರನ್ನು ಸತ್ಯೇಂದ್ರ ತನ್ನ ಬೈಕ್‌ನಲ್ಲಿ ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದು, ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು ಸಂಜಯ್ ಗಾಂಧಿ ಮೆಮೋರಿಯಲ್ ಹಾಸ್ಪಿಟಲ್‌ಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದರು.

ಇನ್ನೊಂದು ಕಡೆ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ಆರೋಪಿ ಮತ್ತು ಕತ್ತರಿಸಿದ ಕೈ ಅನ್ನು ಪತ್ತೆ ಹಚ್ಚಲು ಶುರು ಮಾಡಿದ್ದರು. ಆರೋಪಿ ಗಣೇಶ್ ಮಿಶ್ರಾ ಬ್ಯಾಗ್ ಪ್ಯಾಕ್ ಮಾಡಿಕೊಂಡು ಸ್ವಲ್ಪ ಹಣ ತೆಗೆದುಕೊಂಡು ತನ್ನ ಬೈಕ್‌ನಲ್ಲಿ ಪರಾರಿಯಾಗಿದ್ದನು. ಅವನ ಸಹೋದರರಾದ ರತ್ನೇಶ್ ಮಿಶ್ರಾ ಮತ್ತು ಕೃಷ್ಣ ಕುಮಾರ್ ಎಂಬುವವರು ರಕ್ತವನ್ನು ತೊಳೆದು ಅವನು ಪರಾರಿಯಾಗಿಲು ಸಹಕರಿಸಿದ್ದರು. ಅಲ್ಲದೇ ತುಂಡಾದ ಕೈಯನ್ನು ತಿಪ್ಪೆಗೆ ಎಸೆದಿದ್ದರು.

ನಂತರ ಪೊಲೀಸರು ಬಹಳಷ್ಟು ಹುಡುಕಾಡಿದ ನಂತರ ತುಂಡಾದ ಕೈ ಸಿಕ್ಕಿದೆ. ಕೂಡಲೇ ಆಂಬುಲೆನ್ಸ್‌ನಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ವೈದ್ಯರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಮರು ಜೋಡಣೆ ಮಾಡಿದ್ದಾರೆ. ಆದರೆ ಈಗಲೇ ಏನನ್ನು ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಪಿ ಗಣೇಶ್ ಮಿಶ್ರಾನ ತಂದೆ ರಾಘವೇಂದ್ರ ಮಿಶ್ರಾ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ರಾಘವೇಂದ್ರ ಮಿಶ್ರಾ ಮುಂಬರುವ ಸ್ಥಳೀಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾಗವಹಿಸಲು ಸಿದ್ದತೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 307 ಮತ್ತು 201ರ ಅಡಿಯಲ್ಲಿ, ಶಶಸ್ತ್ರ ಕಾಯ್ದೆ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. “ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...