Homeಮುಖಪುಟಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. "ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು" ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾ ಜಿಲ್ಲೆಯ ದೊಲ್ಮೌ ಎಂಬ ಗ್ರಾಮದಲ್ಲಿ ಜಾತಿ ಕ್ರೌರ್ಯದ ಭೀಭತ್ಸ ಘಟನೆ ವರದಿಯಾಗಿದೆ. ತಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ 45 ವರ್ಷದ ದಲಿತ ವ್ಯಕ್ತಿಯ ಕೈ ಕತ್ತರಿಸಿರುವ ಅಮಾನವೀಯ ಘಟನೆ ಶನಿವಾರ ನಡೆದಿದೆ.

ಸಂತ್ರಸ್ತ ಅಶೋಕ್ ಸಾಕೇತ್ ಎಂಬ ದಲಿತ ಕಟ್ಟಡ ಕಾರ್ಮಿಕರೊಬ್ಬರು ತಾನು ಮಾಡಿದ ಕೂಲಿಗೆ ವೇತನ ನೀಡುವಂತೆ ಮಾಲೀಕ ಗಣೇಶ್ ಮಿಶ್ರಾ ಎಂಬಾತನನ್ನು ಕೇಳಿದ್ದಾರೆ. ಆದರೆ ಆತ ಕತ್ತಿಯಿಂದ ಕೈ ಕತ್ತರಿಸಿ ಜಾತಿಕ್ರೌರ್ಯ ಮೆರೆದಿದ್ದಾರೆ. ನಂತರ ಸಂತ್ರಸ್ತರನ್ನು ರೇವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಕತ್ತರಿಸಲ್ಪಟ್ಟ ಅಂಗವನ್ನು ದೇಹಕ್ಕೆ ಮರುಜೋಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗುವುದೇ ಇಲ್ಲವೇ ಎಂಬುದನ್ನು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಮಿಶ್ರಾನನ್ನು ಬಂಧಿಸಲಾಗಿದೆ. ಕೊಲೆ ಯತ್ನ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 11.30ರ ಸಮಯಕ್ಕೆ ಸಂತ್ರಸ್ತ ಅಶೋಕ್ ಸಾಕೇತ್ ತನ್ನ ಸಹೋದ್ಯೊಗಿ ಸತ್ಯೇಂದ್ರ ಜೊತೆಗೆ ಮಾಲೀಕರ ಮನೆಗೆ ಹೋಗಿ ತಮ್ಮ ಪಾಲಿನ ವೇತನ ಕೇಳಿದ್ದಾರೆ. ಅವರು ಪಿಲ್ಲರ್ ಮತ್ತು ಬೀಮ್ಸ್‌ ಗಳನ್ನು ನಿರ್ಮಿಸಿಕೊಟ್ಟಿದ್ದರು. ಅದಕ್ಕಾಗಿ 15,000 ಚಾರ್ಜ್ ಮಾಡಿದ್ದರು. ಆದರೆ ಆರೋಪಿ ಗಣೇಶ್ ಮಿಶ್ರಾ ಕೇವಲ 6,000 ಕೊಡಲು ಮುಂದಾಗಿದ್ದರು. ಆಗ ಮಾತಿಗೆ ಮಾತು ಬೆಳೆದಿದೆ. ಆಗ ಹಣ ಕೊಡುವುದಾಗಿ ಮನೆ ಒಳಗೆ ಹೋದ ಗಣೇಶ್ ಕತ್ತಿ ತಂದು ತಲೆಗೆ ಹಿಡಿದಿದ್ದಾರೆ. ತಪ್ಪಿಸಿಕೊಳ್ಳಲು ಹೋದಾಗ ಅಶೋಕ್ ಕೈ ಕತ್ತರಿಸಿದ್ದಾರೆ ಎಂದು ಅಶೋಕ್ ಸಹೋದರ್ ಶಿವಕುಮಾರ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೂಡಲೇ ಅಶೋಕ್‌ರವರನ್ನು ಸತ್ಯೇಂದ್ರ ತನ್ನ ಬೈಕ್‌ನಲ್ಲಿ ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದು, ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು ಸಂಜಯ್ ಗಾಂಧಿ ಮೆಮೋರಿಯಲ್ ಹಾಸ್ಪಿಟಲ್‌ಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದರು.

ಇನ್ನೊಂದು ಕಡೆ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ಆರೋಪಿ ಮತ್ತು ಕತ್ತರಿಸಿದ ಕೈ ಅನ್ನು ಪತ್ತೆ ಹಚ್ಚಲು ಶುರು ಮಾಡಿದ್ದರು. ಆರೋಪಿ ಗಣೇಶ್ ಮಿಶ್ರಾ ಬ್ಯಾಗ್ ಪ್ಯಾಕ್ ಮಾಡಿಕೊಂಡು ಸ್ವಲ್ಪ ಹಣ ತೆಗೆದುಕೊಂಡು ತನ್ನ ಬೈಕ್‌ನಲ್ಲಿ ಪರಾರಿಯಾಗಿದ್ದನು. ಅವನ ಸಹೋದರರಾದ ರತ್ನೇಶ್ ಮಿಶ್ರಾ ಮತ್ತು ಕೃಷ್ಣ ಕುಮಾರ್ ಎಂಬುವವರು ರಕ್ತವನ್ನು ತೊಳೆದು ಅವನು ಪರಾರಿಯಾಗಿಲು ಸಹಕರಿಸಿದ್ದರು. ಅಲ್ಲದೇ ತುಂಡಾದ ಕೈಯನ್ನು ತಿಪ್ಪೆಗೆ ಎಸೆದಿದ್ದರು.

ನಂತರ ಪೊಲೀಸರು ಬಹಳಷ್ಟು ಹುಡುಕಾಡಿದ ನಂತರ ತುಂಡಾದ ಕೈ ಸಿಕ್ಕಿದೆ. ಕೂಡಲೇ ಆಂಬುಲೆನ್ಸ್‌ನಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ವೈದ್ಯರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಮರು ಜೋಡಣೆ ಮಾಡಿದ್ದಾರೆ. ಆದರೆ ಈಗಲೇ ಏನನ್ನು ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಪಿ ಗಣೇಶ್ ಮಿಶ್ರಾನ ತಂದೆ ರಾಘವೇಂದ್ರ ಮಿಶ್ರಾ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ರಾಘವೇಂದ್ರ ಮಿಶ್ರಾ ಮುಂಬರುವ ಸ್ಥಳೀಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾಗವಹಿಸಲು ಸಿದ್ದತೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 307 ಮತ್ತು 201ರ ಅಡಿಯಲ್ಲಿ, ಶಶಸ್ತ್ರ ಕಾಯ್ದೆ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. “ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...