Homeಮುಖಪುಟಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಮಧ್ಯಪ್ರದೇಶದಲ್ಲಿ ಜಾತಿ ಕ್ರೌರ್ಯ: ವೇತನ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈ ಕತ್ತರಿಸಿದ ಮೇಲ್ಜಾತಿ ವ್ಯಕ್ತಿ

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. "ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು" ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾ ಜಿಲ್ಲೆಯ ದೊಲ್ಮೌ ಎಂಬ ಗ್ರಾಮದಲ್ಲಿ ಜಾತಿ ಕ್ರೌರ್ಯದ ಭೀಭತ್ಸ ಘಟನೆ ವರದಿಯಾಗಿದೆ. ತಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ 45 ವರ್ಷದ ದಲಿತ ವ್ಯಕ್ತಿಯ ಕೈ ಕತ್ತರಿಸಿರುವ ಅಮಾನವೀಯ ಘಟನೆ ಶನಿವಾರ ನಡೆದಿದೆ.

ಸಂತ್ರಸ್ತ ಅಶೋಕ್ ಸಾಕೇತ್ ಎಂಬ ದಲಿತ ಕಟ್ಟಡ ಕಾರ್ಮಿಕರೊಬ್ಬರು ತಾನು ಮಾಡಿದ ಕೂಲಿಗೆ ವೇತನ ನೀಡುವಂತೆ ಮಾಲೀಕ ಗಣೇಶ್ ಮಿಶ್ರಾ ಎಂಬಾತನನ್ನು ಕೇಳಿದ್ದಾರೆ. ಆದರೆ ಆತ ಕತ್ತಿಯಿಂದ ಕೈ ಕತ್ತರಿಸಿ ಜಾತಿಕ್ರೌರ್ಯ ಮೆರೆದಿದ್ದಾರೆ. ನಂತರ ಸಂತ್ರಸ್ತರನ್ನು ರೇವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಕತ್ತರಿಸಲ್ಪಟ್ಟ ಅಂಗವನ್ನು ದೇಹಕ್ಕೆ ಮರುಜೋಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗುವುದೇ ಇಲ್ಲವೇ ಎಂಬುದನ್ನು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಮಿಶ್ರಾನನ್ನು ಬಂಧಿಸಲಾಗಿದೆ. ಕೊಲೆ ಯತ್ನ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 11.30ರ ಸಮಯಕ್ಕೆ ಸಂತ್ರಸ್ತ ಅಶೋಕ್ ಸಾಕೇತ್ ತನ್ನ ಸಹೋದ್ಯೊಗಿ ಸತ್ಯೇಂದ್ರ ಜೊತೆಗೆ ಮಾಲೀಕರ ಮನೆಗೆ ಹೋಗಿ ತಮ್ಮ ಪಾಲಿನ ವೇತನ ಕೇಳಿದ್ದಾರೆ. ಅವರು ಪಿಲ್ಲರ್ ಮತ್ತು ಬೀಮ್ಸ್‌ ಗಳನ್ನು ನಿರ್ಮಿಸಿಕೊಟ್ಟಿದ್ದರು. ಅದಕ್ಕಾಗಿ 15,000 ಚಾರ್ಜ್ ಮಾಡಿದ್ದರು. ಆದರೆ ಆರೋಪಿ ಗಣೇಶ್ ಮಿಶ್ರಾ ಕೇವಲ 6,000 ಕೊಡಲು ಮುಂದಾಗಿದ್ದರು. ಆಗ ಮಾತಿಗೆ ಮಾತು ಬೆಳೆದಿದೆ. ಆಗ ಹಣ ಕೊಡುವುದಾಗಿ ಮನೆ ಒಳಗೆ ಹೋದ ಗಣೇಶ್ ಕತ್ತಿ ತಂದು ತಲೆಗೆ ಹಿಡಿದಿದ್ದಾರೆ. ತಪ್ಪಿಸಿಕೊಳ್ಳಲು ಹೋದಾಗ ಅಶೋಕ್ ಕೈ ಕತ್ತರಿಸಿದ್ದಾರೆ ಎಂದು ಅಶೋಕ್ ಸಹೋದರ್ ಶಿವಕುಮಾರ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೂಡಲೇ ಅಶೋಕ್‌ರವರನ್ನು ಸತ್ಯೇಂದ್ರ ತನ್ನ ಬೈಕ್‌ನಲ್ಲಿ ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದು, ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು ಸಂಜಯ್ ಗಾಂಧಿ ಮೆಮೋರಿಯಲ್ ಹಾಸ್ಪಿಟಲ್‌ಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದರು.

ಇನ್ನೊಂದು ಕಡೆ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ಆರೋಪಿ ಮತ್ತು ಕತ್ತರಿಸಿದ ಕೈ ಅನ್ನು ಪತ್ತೆ ಹಚ್ಚಲು ಶುರು ಮಾಡಿದ್ದರು. ಆರೋಪಿ ಗಣೇಶ್ ಮಿಶ್ರಾ ಬ್ಯಾಗ್ ಪ್ಯಾಕ್ ಮಾಡಿಕೊಂಡು ಸ್ವಲ್ಪ ಹಣ ತೆಗೆದುಕೊಂಡು ತನ್ನ ಬೈಕ್‌ನಲ್ಲಿ ಪರಾರಿಯಾಗಿದ್ದನು. ಅವನ ಸಹೋದರರಾದ ರತ್ನೇಶ್ ಮಿಶ್ರಾ ಮತ್ತು ಕೃಷ್ಣ ಕುಮಾರ್ ಎಂಬುವವರು ರಕ್ತವನ್ನು ತೊಳೆದು ಅವನು ಪರಾರಿಯಾಗಿಲು ಸಹಕರಿಸಿದ್ದರು. ಅಲ್ಲದೇ ತುಂಡಾದ ಕೈಯನ್ನು ತಿಪ್ಪೆಗೆ ಎಸೆದಿದ್ದರು.

ನಂತರ ಪೊಲೀಸರು ಬಹಳಷ್ಟು ಹುಡುಕಾಡಿದ ನಂತರ ತುಂಡಾದ ಕೈ ಸಿಕ್ಕಿದೆ. ಕೂಡಲೇ ಆಂಬುಲೆನ್ಸ್‌ನಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ವೈದ್ಯರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಮರು ಜೋಡಣೆ ಮಾಡಿದ್ದಾರೆ. ಆದರೆ ಈಗಲೇ ಏನನ್ನು ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಪಿ ಗಣೇಶ್ ಮಿಶ್ರಾನ ತಂದೆ ರಾಘವೇಂದ್ರ ಮಿಶ್ರಾ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ರಾಘವೇಂದ್ರ ಮಿಶ್ರಾ ಮುಂಬರುವ ಸ್ಥಳೀಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾಗವಹಿಸಲು ಸಿದ್ದತೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 307 ಮತ್ತು 201ರ ಅಡಿಯಲ್ಲಿ, ಶಶಸ್ತ್ರ ಕಾಯ್ದೆ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ದಲಿತ ಸಂಘಟನೆಗಳು, ಅಂಬೇಡ್ಕರ್‌ವಾದಿಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. “ಸಮಾಜದಲ್ಲಿ ಜಾತಿ ಇಲ್ಲ ಎಂದು ವಾದ ಮಾಡುವವರು ಕಣ್ತೆರೆದು ನೋಡಬೇಕು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...