Homeಚಳವಳಿಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ -...

ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು.

- Advertisement -
- Advertisement -

ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿಯೊರ್ವರು ತನ್ನ ಜಾತಿ ಕಾರಣಕ್ಕೆ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ವಿಶ್ವವಿದ್ಯಾಲಯ ನಿರಾಕರಿಸುತ್ತಿದೆ ಎಂದು ಆರೋಪಿಸಿ ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ನಡೆಯುತ್ತಿರುವ ಅವರ ಉಪವಾಸ ಸತ್ಯಾಗ್ರಹ ಇಂದಿಗೆ ಏಳನೇ ದಿನಕ್ಕೆ ತಲುಪಿದೆ.

ಈ ವಿಷಯದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಧ್ಯಪ್ರವೇಶಿಸಿ ದಲಿತ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಬೇಕು, ಇದು ಇನ್ನೊಂದು ರೋಹಿತ್ ವೇಮುಲಾ ಪ್ರಕರಣ ಆಗದಂತೆ ತಡೆಯಬೇಕು ಎಂದು ನೂರಾರು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದಾರೆ.

“ನಾನು ಈಗಾಗಲೇ ಎಂಫಿಲ್ ಅನ್ನು ಪಡೆದಿದ್ದೇನೆ. 2015 ರ ವೇಳೆಗೆ ನನ್ನ ಪಿಎಚ್‌ಡಿಯನ್ನು ಸಮರ್ಪಕವಾಗಿ ಮುಗಿಸಬಹುದಿತ್ತು. ಆದರೆ, 2021 ಕೊನೆಗೊಳ್ಳುತ್ತಿದೆ. ಪಿಎಚ್‌ಡಿ ಮುಗಿಸಲು ನಾನು ಇನ್ನೂ ಕಷ್ಟಪಡುತ್ತಿದ್ದೇನೆ. ನನ್ನ ನ್ಯಾನೊಮೆಡಿಸಿನ್ ಯೋಜನೆಗಾಗಿ ನಾನು ಸಂಶ್ಲೇಷಣೆಯನ್ನು ಮಾಡಿದ್ದೇನೆ. ನಾನು ಸ್ಕ್ಯಾಫೋಲ್ಡ್ ಅನ್ನು ಅಭಿವೃದ್ಧಿಪಡಿಸಿದ್ದೇನೆ ಮತ್ತು ಅದನ್ನು ಆಪ್ಟಿಮೈಸ್ ಮಾಡಿದ್ದೇನೆ. ಆದರೆ ನಂದಕುಮಾರ್‌ನಿಂದಾಗಿ ನನಗೆ ಇನ್ನೂ ಪಿಎಚ್‌ಡಿ ಮುಗಿಸಲು ಸಾಧ್ಯವಾಗಿಲ್ಲ” ಎಂದು ದೀಪಾ ಹೇಳಿದ್ದಾರೆ.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ಆಕೆಗೆ ತನ್ನ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನಿಟ್ಟು ಅಕ್ಟೋಬರ್ 29 ರಿಂದ ದೀಪಾ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

“ನಾನು ರಕ್ತಹೀನತೆಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದೇನೆ ಮತ್ತು ನನಗೆ ಹುಟ್ಟಿನಿಂದಲೂ ವಿಎಸ್‌ಡಿ (ವೆಂಟ್ರಿಕ್ಯುಲರ್ ಸೆಪ್ಟಲ್ ಡಿಫೆಕ್ಟ್) ಸಮಸ್ಯೆ ಇದೆ. ಹಾಗಾಗಿ ನಾನು ಈ ಉಪವಾಸ ಸತ್ಯಾಗ್ರಹದಲ್ಲಿ ಪ್ರಾಣ ಕಳೆದುಕೊಂಡರೆ ಅದಕ್ಕೆ ಕಾರಣ ನಂದಕುಮಾರ್ ಕಲರಿಕಲ್, ವಿ.ಸಿ.ಸಾಬು ಥಾಮಸ್, ಸಂಶೋಧನಾ ಮಾರ್ಗದರ್ಶಕ ಡಾ.ರಾಧಾಕೃಷ್ಣನ್ ಇ.ಕೆ ಮತ್ತು ಈ ಸರ್ಕಾರ” ಎಂದು ಅವರು ಅಕ್ಟೋಬರ್ 31 ರಂದು ತಮ್ಮ ಫೇಸ್‌ಬುಕ್‌ನಲ್ಲಿ ಬಹಿರಂಗ ಪತ್ರ ಬರೆದಿದ್ದಾರೆ.

“ರೋಹಿತ್ ವೇಮುಲ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನನಗೆ ಈ ಪರಿಸ್ಥಿತಿಯಲ್ಲಿ ಅರ್ಥವಾಗುತ್ತದೆ. ಆದರೆ, ನ್ಯಾಯಕ್ಕಾಗಿ ಹೋರಾಡದೆ ನಾನು ಪ್ರತಿಭಟನೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ನನ್ನ ಜನರಿಗಾಗಿ ಹೋರಾಡಬೇಕು. ಸೋತ ಅನೇಕರಿಗಾಗಿ ನಾನು ಇಲ್ಲಿ ಗೆಲ್ಲಬೇಕು” ಎಂದೂ ಅವರು ಬರೆದಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿವೆ.


ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...