Homeಮುಖಪುಟಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ...

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

- Advertisement -
- Advertisement -

‘ಜಾತಿ ಕಾರಣಕ್ಕೆ’ ಹಿಂದುಳಿದ ಸಮುದಾಯದ ಉದ್ಯೋಗಿಯೊಬ್ಬರಿಗೆ ತಾರತಮ್ಯವೆಸಗಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಪ್ರಸಿದ್ದ ಕೂಡಲ್ಮಾಣಿಕ್ಯಂ ದೇವಸ್ಥಾನದ ಅರ್ಚಕರ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಹೆಚ್‌ಆರ್‌ಸಿ) ಪ್ರಕರಣ ದಾಖಲಿಸಿದ್ದು, ತನಿಖೆಗೆ ಆದೇಶಿಸಿದೆ.

ಕೇರಳ ದೇವಸ್ವಂ (ದೇವಸ್ಥಾನ) ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ‘ಈಳವ ಸಮುದಾಯ’ಕ್ಕೆ (ಇತರೆ ಹಿಂದುಳಿದ ಸಮುದಾಯ) ಸೇರಿದ ವಿಎ ಬಾಲು ಅವರನ್ನು ದೇವಸ್ಥಾನದಲ್ಲಿ ‘ಕಝಕಂ’ ಆಗಿ ನೇಮಿಸುವುದರೊಂದಿಗೆ ವಿವಾದ ಆರಂಭವಾಗಿದೆ. ದೇವರಿಗೆ ಮಾಲೆಗಳನ್ನು ತಯಾರಿಸುವುದು ಮತ್ತು ವಿಧ್ಯುಕ್ತ ವ್ಯವಸ್ಥೆಗಳನ್ನು ನೋಡಿಕೊಳ್ಳುವುದು ‘ಕಝಕಂ’ ಹುದ್ದೆಯ ಜವಾಬ್ದಾರಿಯಾಗಿರುತ್ತದೆ.

ಬಾಲು ಅವರ ನೇಮಕಾತಿಗೆ ದೇವಾಲಯದ ನಂಬೂದಿರಿ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದು, ದೇವಸ್ಥಾನದ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಮುಂಬರುವ ‘ಪ್ರತಿಷ್ಠಾ ದಿನಂ’ (ಪವಿತ್ರೀಕರಣ ದಿನ) ವಿಧಿ ವಿಧಾನಗಳಿಂದ ದೂರ ಉಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಫೆಬ್ರವರಿ 24ರಂದು ಬಾಲು ಅವರು ದೇವಸ್ಥಾನದ ಕೆಲಸಕ್ಕೆ ಸೇರಿದ್ದು, ಅಂದಿನಿಂದ ದೇವಾಲಯದೊಂದಿಗೆ ಸಂಬಂಧ ಹೊಂದಿರುವ ಆರು ಕುಟುಂಬಗಳ ಅರ್ಚಕರು ವಿಧಿ ವಿಧಾನಗಳನ್ನು ಮಾಡಲು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ದೇವಸ್ವಂ (ದೇವಸ್ಥಾನ) ಮಂಡಳಿ ಅಧಿಕಾರಿಗಳು ಅರ್ಚಕರ ಗೈರು ಹಾಜರಿ ಕುರಿತು ವಿವರಣೆ ಕೋರಿ ನೋಟಿಸ್ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಅರ್ಚಕರು, “ತಪ್ಪು ಸರಿಪಡಿಸುವವರೆಗೆ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವುದಿಲ್ಲ” ಎಂದು ಉತ್ತರಿಸಿದ್ದಾರೆ. ಒತ್ತಡಕ್ಕೆ ಮಣಿದ ದೇವಸ್ವಂ ಅಧಿಕಾರಿಗಳು ಬಾಲು ಅವರನ್ನು ಕಚೇರಿ ಕರ್ತವ್ಯಗಳಿಗೆ ಮರು ನಿಯೋಜಿಸಿದ್ದು, ಅವರನ್ನು ದೇವಾಲಯಕ್ಕೆ ಸಂಬಂಧಿಸಿದ ಜವಾಬ್ದಾರಿಗಳಿಂದ ಮುಕ್ತಗೊಳಿಸಿದ್ದಾರೆ ಎಂದು ವರದಿ ಹೇಳಿದೆ.

ಈ ಕುರಿತು ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೋಮವಾರ (ಮಾ.10) ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿ. ಗೀತಾ ಅವರು ಕೊಚ್ಚಿನ್ ದೇವಸ್ವಂ (ದೇವಸ್ಥಾನ) ಆಯುಕ್ತರು ಮತ್ತು ಕೂಡಲ್ಮಾಣಿಕ್ಯಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಆದೇಶಿಸಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕೆ. ರಾಧಾಕೃಷ್ಣನ್ ಅವರು “ದೇವಸ್ವಂ ಮಂಡಳಿಯು 10 ತಿಂಗಳ ಅವಧಿಗೆ ‘ಕಝಕಂ’ ಹುದ್ದೆಗೆ ಬಾಲು ಅವರನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿತ್ತು. ಆ ನಿರ್ಧಾರವನ್ನು ಎತ್ತಿ ಹಿಡಿಯಬೇಕು. ಒಬ್ಬ ವ್ಯಕ್ತಿಗೆ ಕೆಲಸ ಮಾಡುವ ಸ್ವಾತಂತ್ರ್ಯವನ್ನು ನಿರಾಕರಿಸುವ ಹಕ್ಕು ಪುರೋಹಿತರಿಗೆ ಇಲ್ಲ” ಎಂದಿದ್ದಾರೆ. ತಾರತಮ್ಯ ನೀತಿ ಮತ್ತು ನಂಬಿಕೆಗಳನ್ನು ಮತ್ತೆ ಮುನ್ನಲೆಗೆ ತರುವ ಪ್ರಯತ್ನಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.

“ಪ್ರಸ್ತುತ ಬಾಲು ಅವರನ್ನು ದೇವಸ್ಥಾನದ ಹುದ್ದೆಯಿಂದ ಹೊರಗಿಡಲಾಗಿದೆ. ಅವರ ಬದಲಿಗೆ ‘ಪಿಶಾರೋಡಿ’ ಸಮುದಾಯದ ಒಬ್ಬರನ್ನು’ಕಝಕಂ’ ಹುದ್ದೆಗೆ ತಾತ್ಕಾಲಿಕವಾಗಿ ನೇಮಿಸಲಾಗಿದೆ” ನ್ಯಾಯಾಲಯ ಅಥವಾ ಸರ್ಕಾರ ಏನಾದರು ಆದೇಶದ ನೀಡದ ಹೊರತು, ಅರ್ಚಕರಿಂದ ಎಷ್ಟೇ ಒತ್ತಡ ಇದ್ದರೂ ಬಾಲು ಅವರನ್ನು ದೇವಾಲಯದ ಕರ್ತವ್ಯಕ್ಕೆ ಮರಳಿ ಸೇರಿಸಿಕೊಳ್ಳಲಾಗುವುದು” ಎಂದು ಕೂಡಲ್ಮಾಣಿಕ್ಯಂ ದೇವಸ್ವಂ (ದೇವಸ್ಥಾನ) ಅಧ್ಯಕ್ಷ ಸಿ.ಕೆ ಗೋಪಿ ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪವಿತ್ರೀಕರಣ ದಿನದಂದು ವಿಧಿ ವಿಧಾನಗಳು ಸುಗಮವಾಗಿ ನಡೆಯಲು ಪುರೋಹಿತರ ಭಾಗವಹಿಸುವಿಕೆ ಅಗತ್ಯವಾಗಿದೆ. ಹಾಗಾಗಿ, ದೇವಸ್ಥಾನದ ಮಂಡಳಿ ಅಧಿಕಾರಿಗಳು ಕಝಕಂ ಹುದ್ದೆಗೆ ತಾತ್ಕಾಲಿಕವಾಗಿ ಒಬ್ಬರನ್ನು ನೇಮಕ ಮಾಡಿದ್ದಾರೆ ಎಂದು ಸಿ.ಕೆ ಗೋಪಿ ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಾಲು ಅವರು, “ತಾನು ಇನ್ನು ಮುಂದೆ ‘ಕಝಕಂ’ ಕೆಲಸವನ್ನು ಮಾಡುವುದಿಲ್ಲ. ತನ್ನ ನಿರ್ಧಾರದ ಬಗ್ಗೆ ದೇವಸ್ಥಾನ ಮಂಡಳಿ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...