Homeಮುಖಪುಟಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ...

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

- Advertisement -
- Advertisement -

‘ಜಾತಿ ಕಾರಣಕ್ಕೆ’ ಹಿಂದುಳಿದ ಸಮುದಾಯದ ಉದ್ಯೋಗಿಯೊಬ್ಬರಿಗೆ ತಾರತಮ್ಯವೆಸಗಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಪ್ರಸಿದ್ದ ಕೂಡಲ್ಮಾಣಿಕ್ಯಂ ದೇವಸ್ಥಾನದ ಅರ್ಚಕರ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಹೆಚ್‌ಆರ್‌ಸಿ) ಪ್ರಕರಣ ದಾಖಲಿಸಿದ್ದು, ತನಿಖೆಗೆ ಆದೇಶಿಸಿದೆ.

ಕೇರಳ ದೇವಸ್ವಂ (ದೇವಸ್ಥಾನ) ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ‘ಈಳವ ಸಮುದಾಯ’ಕ್ಕೆ (ಇತರೆ ಹಿಂದುಳಿದ ಸಮುದಾಯ) ಸೇರಿದ ವಿಎ ಬಾಲು ಅವರನ್ನು ದೇವಸ್ಥಾನದಲ್ಲಿ ‘ಕಝಕಂ’ ಆಗಿ ನೇಮಿಸುವುದರೊಂದಿಗೆ ವಿವಾದ ಆರಂಭವಾಗಿದೆ. ದೇವರಿಗೆ ಮಾಲೆಗಳನ್ನು ತಯಾರಿಸುವುದು ಮತ್ತು ವಿಧ್ಯುಕ್ತ ವ್ಯವಸ್ಥೆಗಳನ್ನು ನೋಡಿಕೊಳ್ಳುವುದು ‘ಕಝಕಂ’ ಹುದ್ದೆಯ ಜವಾಬ್ದಾರಿಯಾಗಿರುತ್ತದೆ.

ಬಾಲು ಅವರ ನೇಮಕಾತಿಗೆ ದೇವಾಲಯದ ನಂಬೂದಿರಿ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದು, ದೇವಸ್ಥಾನದ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಮುಂಬರುವ ‘ಪ್ರತಿಷ್ಠಾ ದಿನಂ’ (ಪವಿತ್ರೀಕರಣ ದಿನ) ವಿಧಿ ವಿಧಾನಗಳಿಂದ ದೂರ ಉಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಫೆಬ್ರವರಿ 24ರಂದು ಬಾಲು ಅವರು ದೇವಸ್ಥಾನದ ಕೆಲಸಕ್ಕೆ ಸೇರಿದ್ದು, ಅಂದಿನಿಂದ ದೇವಾಲಯದೊಂದಿಗೆ ಸಂಬಂಧ ಹೊಂದಿರುವ ಆರು ಕುಟುಂಬಗಳ ಅರ್ಚಕರು ವಿಧಿ ವಿಧಾನಗಳನ್ನು ಮಾಡಲು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ದೇವಸ್ವಂ (ದೇವಸ್ಥಾನ) ಮಂಡಳಿ ಅಧಿಕಾರಿಗಳು ಅರ್ಚಕರ ಗೈರು ಹಾಜರಿ ಕುರಿತು ವಿವರಣೆ ಕೋರಿ ನೋಟಿಸ್ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಅರ್ಚಕರು, “ತಪ್ಪು ಸರಿಪಡಿಸುವವರೆಗೆ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವುದಿಲ್ಲ” ಎಂದು ಉತ್ತರಿಸಿದ್ದಾರೆ. ಒತ್ತಡಕ್ಕೆ ಮಣಿದ ದೇವಸ್ವಂ ಅಧಿಕಾರಿಗಳು ಬಾಲು ಅವರನ್ನು ಕಚೇರಿ ಕರ್ತವ್ಯಗಳಿಗೆ ಮರು ನಿಯೋಜಿಸಿದ್ದು, ಅವರನ್ನು ದೇವಾಲಯಕ್ಕೆ ಸಂಬಂಧಿಸಿದ ಜವಾಬ್ದಾರಿಗಳಿಂದ ಮುಕ್ತಗೊಳಿಸಿದ್ದಾರೆ ಎಂದು ವರದಿ ಹೇಳಿದೆ.

ಈ ಕುರಿತು ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೋಮವಾರ (ಮಾ.10) ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿ. ಗೀತಾ ಅವರು ಕೊಚ್ಚಿನ್ ದೇವಸ್ವಂ (ದೇವಸ್ಥಾನ) ಆಯುಕ್ತರು ಮತ್ತು ಕೂಡಲ್ಮಾಣಿಕ್ಯಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಆದೇಶಿಸಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕೆ. ರಾಧಾಕೃಷ್ಣನ್ ಅವರು “ದೇವಸ್ವಂ ಮಂಡಳಿಯು 10 ತಿಂಗಳ ಅವಧಿಗೆ ‘ಕಝಕಂ’ ಹುದ್ದೆಗೆ ಬಾಲು ಅವರನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿತ್ತು. ಆ ನಿರ್ಧಾರವನ್ನು ಎತ್ತಿ ಹಿಡಿಯಬೇಕು. ಒಬ್ಬ ವ್ಯಕ್ತಿಗೆ ಕೆಲಸ ಮಾಡುವ ಸ್ವಾತಂತ್ರ್ಯವನ್ನು ನಿರಾಕರಿಸುವ ಹಕ್ಕು ಪುರೋಹಿತರಿಗೆ ಇಲ್ಲ” ಎಂದಿದ್ದಾರೆ. ತಾರತಮ್ಯ ನೀತಿ ಮತ್ತು ನಂಬಿಕೆಗಳನ್ನು ಮತ್ತೆ ಮುನ್ನಲೆಗೆ ತರುವ ಪ್ರಯತ್ನಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.

“ಪ್ರಸ್ತುತ ಬಾಲು ಅವರನ್ನು ದೇವಸ್ಥಾನದ ಹುದ್ದೆಯಿಂದ ಹೊರಗಿಡಲಾಗಿದೆ. ಅವರ ಬದಲಿಗೆ ‘ಪಿಶಾರೋಡಿ’ ಸಮುದಾಯದ ಒಬ್ಬರನ್ನು’ಕಝಕಂ’ ಹುದ್ದೆಗೆ ತಾತ್ಕಾಲಿಕವಾಗಿ ನೇಮಿಸಲಾಗಿದೆ” ನ್ಯಾಯಾಲಯ ಅಥವಾ ಸರ್ಕಾರ ಏನಾದರು ಆದೇಶದ ನೀಡದ ಹೊರತು, ಅರ್ಚಕರಿಂದ ಎಷ್ಟೇ ಒತ್ತಡ ಇದ್ದರೂ ಬಾಲು ಅವರನ್ನು ದೇವಾಲಯದ ಕರ್ತವ್ಯಕ್ಕೆ ಮರಳಿ ಸೇರಿಸಿಕೊಳ್ಳಲಾಗುವುದು” ಎಂದು ಕೂಡಲ್ಮಾಣಿಕ್ಯಂ ದೇವಸ್ವಂ (ದೇವಸ್ಥಾನ) ಅಧ್ಯಕ್ಷ ಸಿ.ಕೆ ಗೋಪಿ ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪವಿತ್ರೀಕರಣ ದಿನದಂದು ವಿಧಿ ವಿಧಾನಗಳು ಸುಗಮವಾಗಿ ನಡೆಯಲು ಪುರೋಹಿತರ ಭಾಗವಹಿಸುವಿಕೆ ಅಗತ್ಯವಾಗಿದೆ. ಹಾಗಾಗಿ, ದೇವಸ್ಥಾನದ ಮಂಡಳಿ ಅಧಿಕಾರಿಗಳು ಕಝಕಂ ಹುದ್ದೆಗೆ ತಾತ್ಕಾಲಿಕವಾಗಿ ಒಬ್ಬರನ್ನು ನೇಮಕ ಮಾಡಿದ್ದಾರೆ ಎಂದು ಸಿ.ಕೆ ಗೋಪಿ ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಾಲು ಅವರು, “ತಾನು ಇನ್ನು ಮುಂದೆ ‘ಕಝಕಂ’ ಕೆಲಸವನ್ನು ಮಾಡುವುದಿಲ್ಲ. ತನ್ನ ನಿರ್ಧಾರದ ಬಗ್ಗೆ ದೇವಸ್ಥಾನ ಮಂಡಳಿ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...