Homeಮುಖಪುಟಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ...

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

- Advertisement -
- Advertisement -

‘ಜಾತಿ ಕಾರಣಕ್ಕೆ’ ಹಿಂದುಳಿದ ಸಮುದಾಯದ ಉದ್ಯೋಗಿಯೊಬ್ಬರಿಗೆ ತಾರತಮ್ಯವೆಸಗಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಪ್ರಸಿದ್ದ ಕೂಡಲ್ಮಾಣಿಕ್ಯಂ ದೇವಸ್ಥಾನದ ಅರ್ಚಕರ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಹೆಚ್‌ಆರ್‌ಸಿ) ಪ್ರಕರಣ ದಾಖಲಿಸಿದ್ದು, ತನಿಖೆಗೆ ಆದೇಶಿಸಿದೆ.

ಕೇರಳ ದೇವಸ್ವಂ (ದೇವಸ್ಥಾನ) ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ‘ಈಳವ ಸಮುದಾಯ’ಕ್ಕೆ (ಇತರೆ ಹಿಂದುಳಿದ ಸಮುದಾಯ) ಸೇರಿದ ವಿಎ ಬಾಲು ಅವರನ್ನು ದೇವಸ್ಥಾನದಲ್ಲಿ ‘ಕಝಕಂ’ ಆಗಿ ನೇಮಿಸುವುದರೊಂದಿಗೆ ವಿವಾದ ಆರಂಭವಾಗಿದೆ. ದೇವರಿಗೆ ಮಾಲೆಗಳನ್ನು ತಯಾರಿಸುವುದು ಮತ್ತು ವಿಧ್ಯುಕ್ತ ವ್ಯವಸ್ಥೆಗಳನ್ನು ನೋಡಿಕೊಳ್ಳುವುದು ‘ಕಝಕಂ’ ಹುದ್ದೆಯ ಜವಾಬ್ದಾರಿಯಾಗಿರುತ್ತದೆ.

ಬಾಲು ಅವರ ನೇಮಕಾತಿಗೆ ದೇವಾಲಯದ ನಂಬೂದಿರಿ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದು, ದೇವಸ್ಥಾನದ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಮುಂಬರುವ ‘ಪ್ರತಿಷ್ಠಾ ದಿನಂ’ (ಪವಿತ್ರೀಕರಣ ದಿನ) ವಿಧಿ ವಿಧಾನಗಳಿಂದ ದೂರ ಉಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಫೆಬ್ರವರಿ 24ರಂದು ಬಾಲು ಅವರು ದೇವಸ್ಥಾನದ ಕೆಲಸಕ್ಕೆ ಸೇರಿದ್ದು, ಅಂದಿನಿಂದ ದೇವಾಲಯದೊಂದಿಗೆ ಸಂಬಂಧ ಹೊಂದಿರುವ ಆರು ಕುಟುಂಬಗಳ ಅರ್ಚಕರು ವಿಧಿ ವಿಧಾನಗಳನ್ನು ಮಾಡಲು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ದೇವಸ್ವಂ (ದೇವಸ್ಥಾನ) ಮಂಡಳಿ ಅಧಿಕಾರಿಗಳು ಅರ್ಚಕರ ಗೈರು ಹಾಜರಿ ಕುರಿತು ವಿವರಣೆ ಕೋರಿ ನೋಟಿಸ್ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಅರ್ಚಕರು, “ತಪ್ಪು ಸರಿಪಡಿಸುವವರೆಗೆ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವುದಿಲ್ಲ” ಎಂದು ಉತ್ತರಿಸಿದ್ದಾರೆ. ಒತ್ತಡಕ್ಕೆ ಮಣಿದ ದೇವಸ್ವಂ ಅಧಿಕಾರಿಗಳು ಬಾಲು ಅವರನ್ನು ಕಚೇರಿ ಕರ್ತವ್ಯಗಳಿಗೆ ಮರು ನಿಯೋಜಿಸಿದ್ದು, ಅವರನ್ನು ದೇವಾಲಯಕ್ಕೆ ಸಂಬಂಧಿಸಿದ ಜವಾಬ್ದಾರಿಗಳಿಂದ ಮುಕ್ತಗೊಳಿಸಿದ್ದಾರೆ ಎಂದು ವರದಿ ಹೇಳಿದೆ.

ಈ ಕುರಿತು ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೋಮವಾರ (ಮಾ.10) ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿ. ಗೀತಾ ಅವರು ಕೊಚ್ಚಿನ್ ದೇವಸ್ವಂ (ದೇವಸ್ಥಾನ) ಆಯುಕ್ತರು ಮತ್ತು ಕೂಡಲ್ಮಾಣಿಕ್ಯಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಆದೇಶಿಸಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕೆ. ರಾಧಾಕೃಷ್ಣನ್ ಅವರು “ದೇವಸ್ವಂ ಮಂಡಳಿಯು 10 ತಿಂಗಳ ಅವಧಿಗೆ ‘ಕಝಕಂ’ ಹುದ್ದೆಗೆ ಬಾಲು ಅವರನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿತ್ತು. ಆ ನಿರ್ಧಾರವನ್ನು ಎತ್ತಿ ಹಿಡಿಯಬೇಕು. ಒಬ್ಬ ವ್ಯಕ್ತಿಗೆ ಕೆಲಸ ಮಾಡುವ ಸ್ವಾತಂತ್ರ್ಯವನ್ನು ನಿರಾಕರಿಸುವ ಹಕ್ಕು ಪುರೋಹಿತರಿಗೆ ಇಲ್ಲ” ಎಂದಿದ್ದಾರೆ. ತಾರತಮ್ಯ ನೀತಿ ಮತ್ತು ನಂಬಿಕೆಗಳನ್ನು ಮತ್ತೆ ಮುನ್ನಲೆಗೆ ತರುವ ಪ್ರಯತ್ನಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.

“ಪ್ರಸ್ತುತ ಬಾಲು ಅವರನ್ನು ದೇವಸ್ಥಾನದ ಹುದ್ದೆಯಿಂದ ಹೊರಗಿಡಲಾಗಿದೆ. ಅವರ ಬದಲಿಗೆ ‘ಪಿಶಾರೋಡಿ’ ಸಮುದಾಯದ ಒಬ್ಬರನ್ನು’ಕಝಕಂ’ ಹುದ್ದೆಗೆ ತಾತ್ಕಾಲಿಕವಾಗಿ ನೇಮಿಸಲಾಗಿದೆ” ನ್ಯಾಯಾಲಯ ಅಥವಾ ಸರ್ಕಾರ ಏನಾದರು ಆದೇಶದ ನೀಡದ ಹೊರತು, ಅರ್ಚಕರಿಂದ ಎಷ್ಟೇ ಒತ್ತಡ ಇದ್ದರೂ ಬಾಲು ಅವರನ್ನು ದೇವಾಲಯದ ಕರ್ತವ್ಯಕ್ಕೆ ಮರಳಿ ಸೇರಿಸಿಕೊಳ್ಳಲಾಗುವುದು” ಎಂದು ಕೂಡಲ್ಮಾಣಿಕ್ಯಂ ದೇವಸ್ವಂ (ದೇವಸ್ಥಾನ) ಅಧ್ಯಕ್ಷ ಸಿ.ಕೆ ಗೋಪಿ ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪವಿತ್ರೀಕರಣ ದಿನದಂದು ವಿಧಿ ವಿಧಾನಗಳು ಸುಗಮವಾಗಿ ನಡೆಯಲು ಪುರೋಹಿತರ ಭಾಗವಹಿಸುವಿಕೆ ಅಗತ್ಯವಾಗಿದೆ. ಹಾಗಾಗಿ, ದೇವಸ್ಥಾನದ ಮಂಡಳಿ ಅಧಿಕಾರಿಗಳು ಕಝಕಂ ಹುದ್ದೆಗೆ ತಾತ್ಕಾಲಿಕವಾಗಿ ಒಬ್ಬರನ್ನು ನೇಮಕ ಮಾಡಿದ್ದಾರೆ ಎಂದು ಸಿ.ಕೆ ಗೋಪಿ ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಾಲು ಅವರು, “ತಾನು ಇನ್ನು ಮುಂದೆ ‘ಕಝಕಂ’ ಕೆಲಸವನ್ನು ಮಾಡುವುದಿಲ್ಲ. ತನ್ನ ನಿರ್ಧಾರದ ಬಗ್ಗೆ ದೇವಸ್ಥಾನ ಮಂಡಳಿ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...