Homeಮುಖಪುಟಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ...

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

- Advertisement -
- Advertisement -

‘ಜಾತಿ ಕಾರಣಕ್ಕೆ’ ಹಿಂದುಳಿದ ಸಮುದಾಯದ ಉದ್ಯೋಗಿಯೊಬ್ಬರಿಗೆ ತಾರತಮ್ಯವೆಸಗಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಪ್ರಸಿದ್ದ ಕೂಡಲ್ಮಾಣಿಕ್ಯಂ ದೇವಸ್ಥಾನದ ಅರ್ಚಕರ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಹೆಚ್‌ಆರ್‌ಸಿ) ಪ್ರಕರಣ ದಾಖಲಿಸಿದ್ದು, ತನಿಖೆಗೆ ಆದೇಶಿಸಿದೆ.

ಕೇರಳ ದೇವಸ್ವಂ (ದೇವಸ್ಥಾನ) ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ‘ಈಳವ ಸಮುದಾಯ’ಕ್ಕೆ (ಇತರೆ ಹಿಂದುಳಿದ ಸಮುದಾಯ) ಸೇರಿದ ವಿಎ ಬಾಲು ಅವರನ್ನು ದೇವಸ್ಥಾನದಲ್ಲಿ ‘ಕಝಕಂ’ ಆಗಿ ನೇಮಿಸುವುದರೊಂದಿಗೆ ವಿವಾದ ಆರಂಭವಾಗಿದೆ. ದೇವರಿಗೆ ಮಾಲೆಗಳನ್ನು ತಯಾರಿಸುವುದು ಮತ್ತು ವಿಧ್ಯುಕ್ತ ವ್ಯವಸ್ಥೆಗಳನ್ನು ನೋಡಿಕೊಳ್ಳುವುದು ‘ಕಝಕಂ’ ಹುದ್ದೆಯ ಜವಾಬ್ದಾರಿಯಾಗಿರುತ್ತದೆ.

ಬಾಲು ಅವರ ನೇಮಕಾತಿಗೆ ದೇವಾಲಯದ ನಂಬೂದಿರಿ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದು, ದೇವಸ್ಥಾನದ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಮುಂಬರುವ ‘ಪ್ರತಿಷ್ಠಾ ದಿನಂ’ (ಪವಿತ್ರೀಕರಣ ದಿನ) ವಿಧಿ ವಿಧಾನಗಳಿಂದ ದೂರ ಉಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಫೆಬ್ರವರಿ 24ರಂದು ಬಾಲು ಅವರು ದೇವಸ್ಥಾನದ ಕೆಲಸಕ್ಕೆ ಸೇರಿದ್ದು, ಅಂದಿನಿಂದ ದೇವಾಲಯದೊಂದಿಗೆ ಸಂಬಂಧ ಹೊಂದಿರುವ ಆರು ಕುಟುಂಬಗಳ ಅರ್ಚಕರು ವಿಧಿ ವಿಧಾನಗಳನ್ನು ಮಾಡಲು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ದೇವಸ್ವಂ (ದೇವಸ್ಥಾನ) ಮಂಡಳಿ ಅಧಿಕಾರಿಗಳು ಅರ್ಚಕರ ಗೈರು ಹಾಜರಿ ಕುರಿತು ವಿವರಣೆ ಕೋರಿ ನೋಟಿಸ್ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಅರ್ಚಕರು, “ತಪ್ಪು ಸರಿಪಡಿಸುವವರೆಗೆ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವುದಿಲ್ಲ” ಎಂದು ಉತ್ತರಿಸಿದ್ದಾರೆ. ಒತ್ತಡಕ್ಕೆ ಮಣಿದ ದೇವಸ್ವಂ ಅಧಿಕಾರಿಗಳು ಬಾಲು ಅವರನ್ನು ಕಚೇರಿ ಕರ್ತವ್ಯಗಳಿಗೆ ಮರು ನಿಯೋಜಿಸಿದ್ದು, ಅವರನ್ನು ದೇವಾಲಯಕ್ಕೆ ಸಂಬಂಧಿಸಿದ ಜವಾಬ್ದಾರಿಗಳಿಂದ ಮುಕ್ತಗೊಳಿಸಿದ್ದಾರೆ ಎಂದು ವರದಿ ಹೇಳಿದೆ.

ಈ ಕುರಿತು ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೋಮವಾರ (ಮಾ.10) ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿ. ಗೀತಾ ಅವರು ಕೊಚ್ಚಿನ್ ದೇವಸ್ವಂ (ದೇವಸ್ಥಾನ) ಆಯುಕ್ತರು ಮತ್ತು ಕೂಡಲ್ಮಾಣಿಕ್ಯಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಆದೇಶಿಸಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕೆ. ರಾಧಾಕೃಷ್ಣನ್ ಅವರು “ದೇವಸ್ವಂ ಮಂಡಳಿಯು 10 ತಿಂಗಳ ಅವಧಿಗೆ ‘ಕಝಕಂ’ ಹುದ್ದೆಗೆ ಬಾಲು ಅವರನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿತ್ತು. ಆ ನಿರ್ಧಾರವನ್ನು ಎತ್ತಿ ಹಿಡಿಯಬೇಕು. ಒಬ್ಬ ವ್ಯಕ್ತಿಗೆ ಕೆಲಸ ಮಾಡುವ ಸ್ವಾತಂತ್ರ್ಯವನ್ನು ನಿರಾಕರಿಸುವ ಹಕ್ಕು ಪುರೋಹಿತರಿಗೆ ಇಲ್ಲ” ಎಂದಿದ್ದಾರೆ. ತಾರತಮ್ಯ ನೀತಿ ಮತ್ತು ನಂಬಿಕೆಗಳನ್ನು ಮತ್ತೆ ಮುನ್ನಲೆಗೆ ತರುವ ಪ್ರಯತ್ನಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.

“ಪ್ರಸ್ತುತ ಬಾಲು ಅವರನ್ನು ದೇವಸ್ಥಾನದ ಹುದ್ದೆಯಿಂದ ಹೊರಗಿಡಲಾಗಿದೆ. ಅವರ ಬದಲಿಗೆ ‘ಪಿಶಾರೋಡಿ’ ಸಮುದಾಯದ ಒಬ್ಬರನ್ನು’ಕಝಕಂ’ ಹುದ್ದೆಗೆ ತಾತ್ಕಾಲಿಕವಾಗಿ ನೇಮಿಸಲಾಗಿದೆ” ನ್ಯಾಯಾಲಯ ಅಥವಾ ಸರ್ಕಾರ ಏನಾದರು ಆದೇಶದ ನೀಡದ ಹೊರತು, ಅರ್ಚಕರಿಂದ ಎಷ್ಟೇ ಒತ್ತಡ ಇದ್ದರೂ ಬಾಲು ಅವರನ್ನು ದೇವಾಲಯದ ಕರ್ತವ್ಯಕ್ಕೆ ಮರಳಿ ಸೇರಿಸಿಕೊಳ್ಳಲಾಗುವುದು” ಎಂದು ಕೂಡಲ್ಮಾಣಿಕ್ಯಂ ದೇವಸ್ವಂ (ದೇವಸ್ಥಾನ) ಅಧ್ಯಕ್ಷ ಸಿ.ಕೆ ಗೋಪಿ ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪವಿತ್ರೀಕರಣ ದಿನದಂದು ವಿಧಿ ವಿಧಾನಗಳು ಸುಗಮವಾಗಿ ನಡೆಯಲು ಪುರೋಹಿತರ ಭಾಗವಹಿಸುವಿಕೆ ಅಗತ್ಯವಾಗಿದೆ. ಹಾಗಾಗಿ, ದೇವಸ್ಥಾನದ ಮಂಡಳಿ ಅಧಿಕಾರಿಗಳು ಕಝಕಂ ಹುದ್ದೆಗೆ ತಾತ್ಕಾಲಿಕವಾಗಿ ಒಬ್ಬರನ್ನು ನೇಮಕ ಮಾಡಿದ್ದಾರೆ ಎಂದು ಸಿ.ಕೆ ಗೋಪಿ ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಾಲು ಅವರು, “ತಾನು ಇನ್ನು ಮುಂದೆ ‘ಕಝಕಂ’ ಕೆಲಸವನ್ನು ಮಾಡುವುದಿಲ್ಲ. ತನ್ನ ನಿರ್ಧಾರದ ಬಗ್ಗೆ ದೇವಸ್ಥಾನ ಮಂಡಳಿ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...