Homeಮುಖಪುಟಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ಎಂಬವರು ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿದ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಗುಮ್ಮಿಡಿಪೂಂಡಿಯದ ಅತ್ತುಪಾಕಂನಲ್ಲಿನ ಜಾತಿ-ತಾರತಮ್ಯದ ವಿರುದ್ಧ ವರದಿ ಮಾಡಿದ್ದಕ್ಕಾಗಿ, ಪ್ರಮುಖ ತಮಿಳು ಸುದ್ದಿ ವಾಹಿನಿಯ ಪತ್ರಕರ್ತನ ಮೇಲೆ, ಅಲ್ಲಿನ ಪಂಚಾಯಿತಿಯ ಪದಾಧಿಕಾರಿಗಳು ಮಂಗಳವಾರ ಹಲ್ಲೆ ನಡೆಸಿದ್ದಾರೆ.

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿರಲಿಲ್ಲ. ಇದರ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

ಪುದಿಯ ತಲೈಮುರೈ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ ವರದಿಗಾರ ಎಳಿಲ್ ತನ್ನನ್ನು ಪರಿಚಯಿಸಿಕೊಂಡ ಕೂಡಲೇ, ಅತ್ತುಪಾಕಂನಲ್ಲಿ ಸುಮಾರು ಐದು ಮಂದಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯವನ್ನು ವರದಿ ಮಾಡಲು ಮುಂದೆ ಬಂದಿದ್ದಕ್ಕಾಗಿ ಅವರನ್ನು ವೈಯಕ್ತಿಕ ಬಂಧನದಲ್ಲಿರಿಸಲಾಗಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ ಎಳಿಲ್, “ಉಪಾಧ್ಯಕ್ಷರ ಪತಿ ಮತ್ತು ಪಂಚಾಯತ್ ಕಾರ್ಯದರ್ಶಿ ಸೇರಿದಂತೆ ಐದು ಜನರು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಫೋನ್ ಕಿತ್ತು ಬೆಳಿಗ್ಗೆ 10.30 ಕ್ಕೆ ನನ್ನನ್ನು ಕೋಣೆಗೆ ತಳ್ಳಿ ಬೀಗ ಹಾಕಿದರು. ದಾಳಿಯಲ್ಲಿ, ನನ್ನ ಕಣ್ಣು ಮತ್ತು ಎದೆಗೆ ಗಾಯಗಳಾಗಿವೆ” ಎಂದು ಹೇಳಿದ್ದಾರೆ.

“ನಾನು ಗುಮ್ಮುಡಿಪೂಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಇಬ್ಬರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದರು.

“ನಾವು ದೂರಿನ ಬಗ್ಗೆ ಕ್ರಮ ಕೈಗೊಂಡಿದ್ದೇವೆ. ಈಗಾಗಲೆ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಗುಮ್ಮುಡಿಪೂಂಡಿ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರನ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆಗೆ ಶಿಕ್ಷೆ), ಸೆಕ್ಷನ್ 342 (ತಪ್ಪಾಗಿ ಬಂಧನಕ್ಕೊಳಪಡಿಸಿದ್ದಕ್ಕೆ ಶಿಕ್ಷೆ) ಮತ್ತು ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವುದಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪಂಚಾಯತ್‌ನ ಮುಖಂಡರಾದ ಅಮೃತಂ ದಲಿತ ಮಹಿಳೆಯಾಗಿರುವ ಕಾರಣಕ್ಕೆ, ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೆ ಪಂಚಾಯತ್ ಪದಾಧಿಕಾರಿಗಳು ಮತ್ತು ಜಾತಿವಾದಿಗಳು ಅವಕಾಶ ಕೊಟ್ಟಿರಲಿಲ್ಲ. ಈ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾಯ್ದಿರಿಸಿದ ಸ್ಥಾನವೆಂದು ಘೋಷಿಸಿದ ನಂತರ ಅಮೃತಂ ಅವರು ಅತ್ತುಪಕ್ಕಂನಿಂದ ಆಯ್ಕೆಯಾದ ಮೊದಲ ಪಂಚಾಯತ್ ನಾಯಕಿಯಾಗಿದ್ದರು.

ಕಳೆದ ವಾರ, ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರಧ್ವಜವನ್ನು ಹಾರಿಸಲು ಅಮೃತಂ ಅವರನ್ನು ಶಾಲೆಯ ಮುಖ್ಯೋಪಾಧ್ಯಾಯರು ಆಹ್ವಾನಿಸಿದ್ದರು. ಆದರೆ ಮುಖ್ಯೋಪಾಧ್ಯಾಯರು ಮತ್ತೆ ಆವರಿಗೆ ಕರೆಮಾಡಿ ಕಾರ್ಯಕ್ರಮಕ್ಕೆ ಬರಬಾರದೆಂದು ಹೇಳಿದ್ದರು.

ಅಮೃತಂ ಅವರು ಇದೇ ರೀತಿಯ ತಾರತಮ್ಯವನ್ನು ಹಲವು ಬಾರಿ ಎದುರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಪಂಚಾಯತ್ ಅಧ್ಯಕ್ಷರು ತಮ್ಮನ್ನು ಮಾತಿನಿಂದ ನಿಂದಿಸಿದ್ದಾರೆ. ಪಂಚಾಯತ್ ಕಾರ್ಯದರ್ಶಿ, ನಾನು ಸಹಿ ಮಾಡಬೇಕಾದ ಪತ್ರಗಳನ್ನು ನನಗೆ ಓದಲು ಸಾಧ್ಯವಾಗದಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಾಯತ್ ಮುಖಂಡರಿಗೆ ಮೀಸಲಾದ ಕುರ್ಚಿಯನ್ನು ಬಳಸಲು ಅವರಿಗೆ ಅನುಮತಿ ಇಲ್ಲ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿಗಳಿಗೆ 10% ಮೀಸಲಾತಿಯೆಂಬುದು ಮಹಾ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...