Homeಮುಖಪುಟಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ಎಂಬವರು ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿದ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಗುಮ್ಮಿಡಿಪೂಂಡಿಯದ ಅತ್ತುಪಾಕಂನಲ್ಲಿನ ಜಾತಿ-ತಾರತಮ್ಯದ ವಿರುದ್ಧ ವರದಿ ಮಾಡಿದ್ದಕ್ಕಾಗಿ, ಪ್ರಮುಖ ತಮಿಳು ಸುದ್ದಿ ವಾಹಿನಿಯ ಪತ್ರಕರ್ತನ ಮೇಲೆ, ಅಲ್ಲಿನ ಪಂಚಾಯಿತಿಯ ಪದಾಧಿಕಾರಿಗಳು ಮಂಗಳವಾರ ಹಲ್ಲೆ ನಡೆಸಿದ್ದಾರೆ.

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿರಲಿಲ್ಲ. ಇದರ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

ಪುದಿಯ ತಲೈಮುರೈ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ ವರದಿಗಾರ ಎಳಿಲ್ ತನ್ನನ್ನು ಪರಿಚಯಿಸಿಕೊಂಡ ಕೂಡಲೇ, ಅತ್ತುಪಾಕಂನಲ್ಲಿ ಸುಮಾರು ಐದು ಮಂದಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯವನ್ನು ವರದಿ ಮಾಡಲು ಮುಂದೆ ಬಂದಿದ್ದಕ್ಕಾಗಿ ಅವರನ್ನು ವೈಯಕ್ತಿಕ ಬಂಧನದಲ್ಲಿರಿಸಲಾಗಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ ಎಳಿಲ್, “ಉಪಾಧ್ಯಕ್ಷರ ಪತಿ ಮತ್ತು ಪಂಚಾಯತ್ ಕಾರ್ಯದರ್ಶಿ ಸೇರಿದಂತೆ ಐದು ಜನರು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಫೋನ್ ಕಿತ್ತು ಬೆಳಿಗ್ಗೆ 10.30 ಕ್ಕೆ ನನ್ನನ್ನು ಕೋಣೆಗೆ ತಳ್ಳಿ ಬೀಗ ಹಾಕಿದರು. ದಾಳಿಯಲ್ಲಿ, ನನ್ನ ಕಣ್ಣು ಮತ್ತು ಎದೆಗೆ ಗಾಯಗಳಾಗಿವೆ” ಎಂದು ಹೇಳಿದ್ದಾರೆ.

“ನಾನು ಗುಮ್ಮುಡಿಪೂಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಇಬ್ಬರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದರು.

“ನಾವು ದೂರಿನ ಬಗ್ಗೆ ಕ್ರಮ ಕೈಗೊಂಡಿದ್ದೇವೆ. ಈಗಾಗಲೆ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಗುಮ್ಮುಡಿಪೂಂಡಿ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರನ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆಗೆ ಶಿಕ್ಷೆ), ಸೆಕ್ಷನ್ 342 (ತಪ್ಪಾಗಿ ಬಂಧನಕ್ಕೊಳಪಡಿಸಿದ್ದಕ್ಕೆ ಶಿಕ್ಷೆ) ಮತ್ತು ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವುದಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪಂಚಾಯತ್‌ನ ಮುಖಂಡರಾದ ಅಮೃತಂ ದಲಿತ ಮಹಿಳೆಯಾಗಿರುವ ಕಾರಣಕ್ಕೆ, ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೆ ಪಂಚಾಯತ್ ಪದಾಧಿಕಾರಿಗಳು ಮತ್ತು ಜಾತಿವಾದಿಗಳು ಅವಕಾಶ ಕೊಟ್ಟಿರಲಿಲ್ಲ. ಈ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾಯ್ದಿರಿಸಿದ ಸ್ಥಾನವೆಂದು ಘೋಷಿಸಿದ ನಂತರ ಅಮೃತಂ ಅವರು ಅತ್ತುಪಕ್ಕಂನಿಂದ ಆಯ್ಕೆಯಾದ ಮೊದಲ ಪಂಚಾಯತ್ ನಾಯಕಿಯಾಗಿದ್ದರು.

ಕಳೆದ ವಾರ, ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರಧ್ವಜವನ್ನು ಹಾರಿಸಲು ಅಮೃತಂ ಅವರನ್ನು ಶಾಲೆಯ ಮುಖ್ಯೋಪಾಧ್ಯಾಯರು ಆಹ್ವಾನಿಸಿದ್ದರು. ಆದರೆ ಮುಖ್ಯೋಪಾಧ್ಯಾಯರು ಮತ್ತೆ ಆವರಿಗೆ ಕರೆಮಾಡಿ ಕಾರ್ಯಕ್ರಮಕ್ಕೆ ಬರಬಾರದೆಂದು ಹೇಳಿದ್ದರು.

ಅಮೃತಂ ಅವರು ಇದೇ ರೀತಿಯ ತಾರತಮ್ಯವನ್ನು ಹಲವು ಬಾರಿ ಎದುರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಪಂಚಾಯತ್ ಅಧ್ಯಕ್ಷರು ತಮ್ಮನ್ನು ಮಾತಿನಿಂದ ನಿಂದಿಸಿದ್ದಾರೆ. ಪಂಚಾಯತ್ ಕಾರ್ಯದರ್ಶಿ, ನಾನು ಸಹಿ ಮಾಡಬೇಕಾದ ಪತ್ರಗಳನ್ನು ನನಗೆ ಓದಲು ಸಾಧ್ಯವಾಗದಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಾಯತ್ ಮುಖಂಡರಿಗೆ ಮೀಸಲಾದ ಕುರ್ಚಿಯನ್ನು ಬಳಸಲು ಅವರಿಗೆ ಅನುಮತಿ ಇಲ್ಲ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿಗಳಿಗೆ 10% ಮೀಸಲಾತಿಯೆಂಬುದು ಮಹಾ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...