Homeಮುಖಪುಟಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ಎಂಬವರು ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿದ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಗುಮ್ಮಿಡಿಪೂಂಡಿಯದ ಅತ್ತುಪಾಕಂನಲ್ಲಿನ ಜಾತಿ-ತಾರತಮ್ಯದ ವಿರುದ್ಧ ವರದಿ ಮಾಡಿದ್ದಕ್ಕಾಗಿ, ಪ್ರಮುಖ ತಮಿಳು ಸುದ್ದಿ ವಾಹಿನಿಯ ಪತ್ರಕರ್ತನ ಮೇಲೆ, ಅಲ್ಲಿನ ಪಂಚಾಯಿತಿಯ ಪದಾಧಿಕಾರಿಗಳು ಮಂಗಳವಾರ ಹಲ್ಲೆ ನಡೆಸಿದ್ದಾರೆ.

ಅತ್ತುಪಾಕಂನ ಪಂಚಾಯತಿಯ ಮುಖಂಡರಾದ ಅಮೃತಂ ದಲಿತೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಅವಕಾಶ ನೀಡಿರಲಿಲ್ಲ. ಇದರ ಕುರಿತು, ಅವರು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವರದಿ ಮಾಡಲು ವರದಿಗಾರ ಸ್ಥಳಕ್ಕೆ ಭೇಟಿ ನೀಡಿದ್ದರು.

ಪುದಿಯ ತಲೈಮುರೈ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ ವರದಿಗಾರ ಎಳಿಲ್ ತನ್ನನ್ನು ಪರಿಚಯಿಸಿಕೊಂಡ ಕೂಡಲೇ, ಅತ್ತುಪಾಕಂನಲ್ಲಿ ಸುಮಾರು ಐದು ಮಂದಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯವನ್ನು ವರದಿ ಮಾಡಲು ಮುಂದೆ ಬಂದಿದ್ದಕ್ಕಾಗಿ ಅವರನ್ನು ವೈಯಕ್ತಿಕ ಬಂಧನದಲ್ಲಿರಿಸಲಾಗಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ ಎಳಿಲ್, “ಉಪಾಧ್ಯಕ್ಷರ ಪತಿ ಮತ್ತು ಪಂಚಾಯತ್ ಕಾರ್ಯದರ್ಶಿ ಸೇರಿದಂತೆ ಐದು ಜನರು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಫೋನ್ ಕಿತ್ತು ಬೆಳಿಗ್ಗೆ 10.30 ಕ್ಕೆ ನನ್ನನ್ನು ಕೋಣೆಗೆ ತಳ್ಳಿ ಬೀಗ ಹಾಕಿದರು. ದಾಳಿಯಲ್ಲಿ, ನನ್ನ ಕಣ್ಣು ಮತ್ತು ಎದೆಗೆ ಗಾಯಗಳಾಗಿವೆ” ಎಂದು ಹೇಳಿದ್ದಾರೆ.

“ನಾನು ಗುಮ್ಮುಡಿಪೂಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಇಬ್ಬರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದರು.

“ನಾವು ದೂರಿನ ಬಗ್ಗೆ ಕ್ರಮ ಕೈಗೊಂಡಿದ್ದೇವೆ. ಈಗಾಗಲೆ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಗುಮ್ಮುಡಿಪೂಂಡಿ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರನ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆಗೆ ಶಿಕ್ಷೆ), ಸೆಕ್ಷನ್ 342 (ತಪ್ಪಾಗಿ ಬಂಧನಕ್ಕೊಳಪಡಿಸಿದ್ದಕ್ಕೆ ಶಿಕ್ಷೆ) ಮತ್ತು ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವುದಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪಂಚಾಯತ್‌ನ ಮುಖಂಡರಾದ ಅಮೃತಂ ದಲಿತ ಮಹಿಳೆಯಾಗಿರುವ ಕಾರಣಕ್ಕೆ, ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೆ ಪಂಚಾಯತ್ ಪದಾಧಿಕಾರಿಗಳು ಮತ್ತು ಜಾತಿವಾದಿಗಳು ಅವಕಾಶ ಕೊಟ್ಟಿರಲಿಲ್ಲ. ಈ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾಯ್ದಿರಿಸಿದ ಸ್ಥಾನವೆಂದು ಘೋಷಿಸಿದ ನಂತರ ಅಮೃತಂ ಅವರು ಅತ್ತುಪಕ್ಕಂನಿಂದ ಆಯ್ಕೆಯಾದ ಮೊದಲ ಪಂಚಾಯತ್ ನಾಯಕಿಯಾಗಿದ್ದರು.

ಕಳೆದ ವಾರ, ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರಧ್ವಜವನ್ನು ಹಾರಿಸಲು ಅಮೃತಂ ಅವರನ್ನು ಶಾಲೆಯ ಮುಖ್ಯೋಪಾಧ್ಯಾಯರು ಆಹ್ವಾನಿಸಿದ್ದರು. ಆದರೆ ಮುಖ್ಯೋಪಾಧ್ಯಾಯರು ಮತ್ತೆ ಆವರಿಗೆ ಕರೆಮಾಡಿ ಕಾರ್ಯಕ್ರಮಕ್ಕೆ ಬರಬಾರದೆಂದು ಹೇಳಿದ್ದರು.

ಅಮೃತಂ ಅವರು ಇದೇ ರೀತಿಯ ತಾರತಮ್ಯವನ್ನು ಹಲವು ಬಾರಿ ಎದುರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಪಂಚಾಯತ್ ಅಧ್ಯಕ್ಷರು ತಮ್ಮನ್ನು ಮಾತಿನಿಂದ ನಿಂದಿಸಿದ್ದಾರೆ. ಪಂಚಾಯತ್ ಕಾರ್ಯದರ್ಶಿ, ನಾನು ಸಹಿ ಮಾಡಬೇಕಾದ ಪತ್ರಗಳನ್ನು ನನಗೆ ಓದಲು ಸಾಧ್ಯವಾಗದಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಾಯತ್ ಮುಖಂಡರಿಗೆ ಮೀಸಲಾದ ಕುರ್ಚಿಯನ್ನು ಬಳಸಲು ಅವರಿಗೆ ಅನುಮತಿ ಇಲ್ಲ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿಗಳಿಗೆ 10% ಮೀಸಲಾತಿಯೆಂಬುದು ಮಹಾ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...