Homeಮುಖಪುಟಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದ ವಿರುದ್ದ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಮಾಹಿತಿ ಒದಗಿಸುವಂತೆ ವಿಶ್ವವಿದ್ಯಾನಿಲಯಗಳ ಧನ ಸಹಾಯ ಆಯೋಗ (ಯುಜಿಸಿ)ಕ್ಕೆ ಶುಕ್ರವಾರ (ಜ.3) ಸೂಚಿಸಿದೆ.

ಯುಜಿಸಿಯ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ) ನಿಯಮಗಳು-2012ರ ಅಡಿ ಎಷ್ಟು (ಕೇಂದ್ರ, ರಾಜ್ಯ, ಖಾಸಗಿ, ಡೀಮ್ಡ್) ವಿಶ್ವವಿದ್ಯಾನಿಲಯಗಳಲ್ಲಿ ಸಮಾನ ಅವಕಾಶದ ಘಟಕ ಸ್ಥಾಪನೆಯಾಗಿವೆ ಮತ್ತು ಅದರಡಿ ತಾರತಮ್ಯಕ್ಕೆ ಸಂಬಂಧಿಸಿದ ಎಷ್ಟು ದೂರುಗಳನ್ನು ಸ್ವೀರಿಸಲಾಗಿದೆ ಎಂಬ ದತ್ತಾಂಶ ನೀಡುವಂತೆ ಯುಜಿಸಿಗೆ ಕೋರ್ಟ್ ಆದೇಶಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದ ವಿರುದ್ದ ಕ್ರಮಕೈಗೊಳ್ಳುವಂತೆ ಜಾತಿ ದೌರ್ಜನ್ಯಕ್ಕೆ ಬಲಿಯಾದ ವಿದ್ಯಾರ್ಥಿಗಳಾದ ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿಯ ತಾಯಂದಿರು ಸುಪ್ರೀಂ ಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಮತ್ತು ವಕೀಲೆ ದಿಶಾ ವಾಡೇಕರ್ ಅವರ ವಾದ ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಯುಜಿಸಿಯಿಂದ ಮಾಹಿತಿ ಕೇಳಿದೆ.

ಯುಜಿಸಿ 2012ರ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಾದಿಸಿದ ಅರ್ಜಿದಾರರ ಪರ ವಕೀಲರು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಆತ್ಮಹತ್ಯೆಯ ವರದಿ ಸೇರಿದಂತೆ ಇತರೆ ಮಾಹಿತಿಗಳನ್ನು ನೀಡಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತೆ ಮಂಡಳಿಗೆ ನಿರ್ದೇಶಿಸುವಂತೆ ಕೋರಿದ್ದಾರೆ.

ಯುಜಿಸಿ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರು, ಆಯೋಗ ರಚಿಸಿದ್ದ ಸಮಿತಿಯು ತನ್ನ ಶಿಫಾರಸನ್ನು ಸಲ್ಲಿಸಿದ್ದು, ಜಾತಿಯಾಧಾರಿತ ತಾರತಮ್ಯವನ್ನು ನಿಲ್ಲಿಸಲು ಹೊಸ ಕರಡು ನಿಯಮಾವಳಿಯನ್ನು ರಚಿಸಲಾಗಿದೆ. ಒಂದು ತಿಂಗಳೊಳಗೆ ಸಾರ್ವಜನಿಕರಿಂದ ಆಕ್ಷೇಪಗಳು ಮತ್ತು ಸಲಹೆಗಳನ್ನು ಆಹ್ವಾನಿಸಲು ಅದನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕಿದೆ. ಆ ಬಳಿಕ ಅದನ್ನು ಅಧಿಸೂಚಿಸಲಾಗುವುದು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಕರಡು ನಿಯಮಾವಳಿಗಳ ಸಂಬಂಧ ಅಧಿಸೂಚನೆ ಹೊರಡಿಸುವಂತೆ ನಿರ್ದೇಶನ ನೀಡಿದರು.

ನ್ಯಾಯಾಲಯ ಯುಜಿಸಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ, “ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಹಿತಿಯನ್ನು ಜಾತಿವಾರು ನೀಡಲು ಯುಜಿಸಿಗೆ ಸೂಚಿಸುವಂತೆ ವಕೀಲೆ ಇಂದಿರಾ ಜೈಸಿಂಗ್ ನ್ಯಾಯಾಧೀಶರನ್ನು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಒಂದೇ ಬಾರಿಗೆ ಎಲ್ಲಾ ಮಾಹಿತಿ ಕೇಳುವುದು ಬೇಡ, ಹಂತ ಹಂತವಾಗಿ ಆದೇಶಗಳನ್ನು ನೀಡುವುದಾಗಿ ತಿಳಿಸಿದರು.

2004-24ರ ನಡುವೆ ಐಐಟಿಗಳಲ್ಲಿಯೇ 115 ಆತ್ಮಹತ್ಯೆಗಳು ನಡೆದಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ನ್ಯಾಯಾಲಯ ಈ ವಿಷಯದ ಸೂಕ್ಷ್ಮತೆಯನ್ನು ಅರಿತುಕೊಂಡಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲ್ಲಿದೆ. 2012ರ ನಿಯಮಾವಳಿಗಳನ್ನು ವಾಸ್ತವಿಕವಾಗಿ ಪಾಲಿಸಲಾಗುತ್ತಿದೆಯೇ ಎನ್ನುವುದನ್ನು ನೋಡಲು ಕೆಲವು ಪರಿಣಾಮಕಾರಿ ಕಾರ್ಯವಿಧಾನಗಳನ್ನು ನಾವು ಕಂಡುಕೊಳ್ಳಬೇಕಿದೆ” ಎಂದು ಹೇಳಿದರು.

ಇದನ್ನೂ ಓದಿ : ದೆಹಲಿ ವಿಧಾನಸಭೆ ಚುನಾವಣೆ : ಸಿಎಂ ಅತಿಶಿ ವಿರುದ್ಧ ಅಲ್ಕಾ ಲಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...